ಬ್ರೇಕಿಂಗ್ ನ್ಯೂಸ್
23-12-20 08:51 pm Headline Karnataka News Network ದೇಶ - ವಿದೇಶ
ಇಸ್ಲಮಾಬಾದ್, ಡಿ.23: ಪಾಕಿಸ್ತಾನದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು ಎದುರಾಗಿದೆ. ಜೊತೆಗೆ ಹಣದುಬ್ಬರವೂ ಏರಿಕೆಯಾಗಿದ್ದು, ಅಲ್ಲಿ ನಿತ್ಯವಸ್ತುಗಳ ಬೆಲೆ ಗಗನಕ್ಕೇರಿದೆ.
ಅಲ್ಲಿನ ಪರಿಸ್ಥಿತಿ ಎಲ್ಲಿಗೆ ಮುಟ್ಟಿದೆ ಅಂದ್ರೆ, ಕೋಳಿ ಮೊಟ್ಟೆಯ ದರ 30 ರೂಪಾಯಿ ಆಗಿದೆ. ಮೊಟ್ಟೆ ಸಾಮಾನ್ಯವಾಗಿ ಅತಿ ಹೆಚ್ಚು ಬಳಕೆಯಾಗುವ ವಸ್ತು. ಆದರೆ, ಜನಸಾಮಾನ್ಯರು ಅಲ್ಲೀಗ ಮೊಟ್ಟೆ ಕೊಂಡು ತಿನ್ನುವ ಹಾಗಿಲ್ಲ. ಡಜನ್ ಮೊಟ್ಟೆಯನ್ನು ಕೊಳ್ಳುವುದಾದರೆ 240 ರೂ.ಗೆ ನೀಡಲಾಗುತ್ತದೆ. ಒಂದು ಮೊಟ್ಟೆ ಖರೀದಿಸಲು ಬಂದರೆ 30 ರೂಪಾಯಿ ನೀಡಬೇಕಾಗುತ್ತದೆ.
ಇನ್ನು ಕೋಳಿ ಮಾಂಸದ ದರವೂ ವಿಪರೀತವಾಗಿ ಏರಿಕೆಯಾಗಿದೆ. ಕೋಳಿ ಮಾಂಸ ಕೇಜಿಗೆ 300 ರೂ.ಗೆ ಏರಿದ್ದು ಚಳಿಗಾಲದಲ್ಲಿ ಮಾಂಸ ಪ್ರಿಯರು ಕೈಸುಟ್ಟುಕೊಂಡಿದ್ದಾರೆ. ಇದರ ಜೊತೆ ಶುಂಠಿಯ ದರವೂ ಭಾರೀ ಏರಿಕೆ ಕಂಡಿದೆ. ಶುಂಠಿಗೆ ಕೇಜಿಗೆ ಒಂದು ಸಾವಿರಕ್ಕಿಂತಲೂ ಹೆಚ್ಚು ಬೆಲೆಯಾಗಿದೆ. ಸಾಮಾನ್ಯವಾಗಿ ಚಳಿಗಾಲದಲ್ಲಿ ಪಾಕಿಸ್ತಾನದ ಜನರು ಮೊಟ್ಟೆ ಮತ್ತು ಶುಂಠಿಯನ್ನು ಹೆಚ್ಚಾಗಿ ಬಳಸುತ್ತಾರೆ. ಇದಲ್ಲದೆ ದಿನವಹಿ ಬಳಸುವ ಬಹುತೇಕ ವಸ್ತುಗಳ ದರವೂ ದುಪ್ಪಟ್ಟಾಗಿದೆ. ಸಕ್ಕರೆ ಬೆಲೆ ಕೇಜಿಗೆ 100 ರೂ. ಗಡಿ ದಾಟಿದ್ದರೆ, ಗೋಧಿ ಬೆಲೆ ಕೇಜಿಗೆ 60 ರೂ. ಆಗಿದೆ. ಗೋಧಿ ಹಿಟ್ಟಿನ ದರ ಇನ್ನಷ್ಟು ಹೆಚ್ಚಿರುವ ಬಗ್ಗೆ ಅಲ್ಲಿನ ವರದಿಗಳು ಹೇಳುತ್ತವೆ. ಪಾಕಿಸ್ತಾನದಲ್ಲಿ ಶೇ.25ರಿಂದ 30 ಪರ್ಸೆಂಟ್ ಜನರು ಬಡತನ ರೇಖೆಗಿಂತ ಕೆಳಗಿದ್ದು ಎರಡು ಹೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಉಂಟಾಗಿದೆ.
ಪಾಕಿಸ್ತಾನದಲ್ಲಿ ಇಮ್ರಾನ್ ಖಾನ್ ಸರಕಾರ ಆಡಳಿತಕ್ಕೆ ಬಂದ ಮೇಲೆ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದೆ ಎನ್ನಲಾಗುತ್ತಿದ್ದು, ದಿನವಹಿ ವಸ್ತುಗಳ ದರ ಗಗನಮುಖಿಯಾಗುತ್ತಿರುವುದು ಬಡಜನರ ಮೇಲೆ ಬರೆ ಎಳೆದಿದೆ. ಪಾಕಿಸ್ತಾನದ ಬಹುತೇಕ ರಾಜ್ಯಗಳಲ್ಲಿ ನಿತ್ಯಸಾಮಗ್ರಿಗಳ ದರ ಏರಿಕೆಯಾಗಿದ್ಯಂತೆ.
Various poultry products are getting dearer by the day. The rate of eggs reached Rs240 per dozen mark on Wednesday, breaking all the previous records of the increase in the price in winters.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
12-08-25 02:49 pm
HK News Desk
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
ಮದುವೆಯಾಗುತ್ತೇನೆಂದು ನಂಬಿಸಿ ಮೋಸ, ಇಸ್ಲಾಮಿಗೆ ಮತಾಂ...
11-08-25 08:55 pm
Rabies Death, Supreme Court: ರಾಜಧಾನಿಯಲ್ಲಿ ರೇಬ...
11-08-25 02:48 pm
12-08-25 11:06 pm
Mangalore Correspondent
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
Pilikula Zoo Director, Mangalore Police: ಪಿಲಿ...
12-08-25 01:49 pm
Mangalore, Manipal Health Card, Silver Jubile...
12-08-25 01:09 pm
Dharmasthala Case, SIT, Radar: ಧರ್ಮಸ್ಥಳ 13ನೇ...
11-08-25 07:39 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm