ಬ್ರೇಕಿಂಗ್ ನ್ಯೂಸ್
22-07-25 03:04 pm HK News Desk ದೇಶ - ವಿದೇಶ
ತಿರುವನಂತಪುರಂ, ಜುಲೈ 22 : ದೇಶದ ಭದ್ರತೆ ಮತ್ತು ಪಕ್ಷದ ವಿಚಾರದಲ್ಲಿ ಶಶಿ ತರೂರ್ ತನ್ನ ನಿಲುವು ಬದಲಾಯಿಸಿಕೊಳ್ಳುವವರೆಗೂ ಕೇರಳದ ರಾಜಧಾನಿ ತಿರುವನಂತಪುರಂನಲ್ಲಿ ಆಯೋಜಿಸುವ ಪಕ್ಷದ ಕಾರ್ಯಕ್ರಮಕ್ಕೆ ಅವರನ್ನು ಆಹ್ವಾನಿಸುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಕೆ. ಮುರಳೀಧರನ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮುರಳೀಧರನ್, ತರೂರ್ ಅವರ ಇತ್ತೀಚಿನ ಹೇಳಿಕೆಗಳು ಪಕ್ಷದ ಸಾಮೂಹಿಕ ನಿಲುವಿನಿಂದ ಅವರನ್ನು ದೂರವಿಟ್ಟಿದೆ. ಅವರು ನಮ್ಮೊಂದಿಗಿಲ್ಲ, ಹೀಗಾಗಿ ಅವರು ಕಾರ್ಯಕ್ರಮ ಬಹಿಷ್ಕರಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿ ಸೇರಿದಂತೆ ಇತ್ತೀಚಿನ ದೇಶದ ಭದ್ರತೆ ವಿಚಾರದಲ್ಲಿ ಕೇಂದ್ರ ಸರ್ಕಾರ ಮತ್ತು ಶಸಾಸ್ತ್ರ ಪಡೆಯನ್ನು ಬಹಿರಂಗವಾಗಿ ಬೆಂಬಲಿಸಿದ ಶಶಿ ತರೂರ್ ಬಗ್ಗೆ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ನಡುವೆ, ಕೊಚ್ಚಿಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಮಾತನಾಡಿದ ಶಶಿ ತರೂರ್, ತನ್ನ ನಿಲುವನ್ನು ಸಮರ್ಥಿಸಿಕೊಂಡಿದ್ದರು. ಕಾಂಗ್ರೆಸ್ ನಾಯಕರೊಂದಿಗೆ ತಮ್ಮ ಭಿನ್ನಾಭಿಪ್ರಾಯದ ನಡುವೆ, ಸಂಸದ ಶಶಿ ತರೂರ್, ರಾಷ್ಟ್ರೀಯ ಭದ್ರತೆಯ ಹಿತದೃಷ್ಟಿಯಿಂದ ಕೆಲವೊಮ್ಮೆ ಇತರ ಪಕ್ಷಗಳೊಂದಿಗೆ ಸಹಕರಿಸುವುದು ಅಗತ್ಯವಾಗುತ್ತದೆ ಎಂದು ಹೇಳಿದ್ದರು.
ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವಂತಹ ಹೇಳಿಕೆ ನೀಡುತ್ತಿರುವ ಶಶಿ ತರೂರ್, ತನ್ನ ನಿಲುವು ಬದಲಾಯಿಸಿಕೊಳ್ಳುವವರೆಗೂ ತಿರುವನಂತಪುರಂನಲ್ಲಿ ಆಯೋಜಿಸುವ ಪಕ್ಷದ ಯಾವುದೇ ಸಮಾರಂಭಕ್ಕೂ ಕರೆಯಲ್ಲ. ತರೂರ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದು ಪಕ್ಷದ ರಾಷ್ಟ್ರೀಯ ನಾಯಕರಿಗೆ ಬಿಟ್ಟ ವಿಚಾರ ಎಂದು ಮುರಳೀಧರನ್ ಹೇಳಿದ್ದಾರೆ.
ಕೇರಳ ಸಿಎಂ ಸ್ಥಾನಕ್ಕೆ ಶಶಿ ತರೂರ್ ಟಾಪ್ ಆಯ್ಕೆ ಎಂದು ಸೂಚಿಸುವ ಸಮೀಕ್ಷೆಯೊಂದನ್ನು ತರೂರ್ ಹಂಚಿಕೊಂಡ ನಂತರ ಅಸಮಾಧಾನ ಮತ್ತಷ್ಟು ಹೆಚ್ಚಾಗಿತ್ತು. ತರೂರ್ ಯಾವ ಪಕ್ಷಕ್ಕೆ ಸೇರಿದವರು ಎಂಬುದನ್ನು ಮೊದಲು ನಿರ್ಧರಿಸಬೇಕು ಎಂದು ಮುರಳೀಧರನ್ ಟೀಕಿಸಿದ್ದಾರೆ. ಮಲಯಾಳಂ ದೈನಿಕದಲ್ಲಿ ಇತ್ತೀಚೆಗೆ ಇಂದಿರಾ ಗಾಂಧಿ ಮತ್ತು ತುರ್ತು ಪರಿಸ್ಥಿತಿ ಕುರಿತಾದ ಶಶಿ ತರೂರ್ ಲೇಖನ ಪ್ರಕಟವಾದ ನಂತರ ಅವರ ವಿರುದ್ಧ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ.
Senior Congress leader K. Muraleedharan has made it clear that party MP Dr. Shashi Tharoor will not be invited to any Congress events in Thiruvananthapuram until he changes his stance on matters concerning national security and party positions.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm