ಬ್ರೇಕಿಂಗ್ ನ್ಯೂಸ್
03-08-25 04:25 pm HK News Desk ದೇಶ - ವಿದೇಶ
ಮುಂಬೈ, ಆ.3: ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ ಸೇರಿದಂತೆ ಹಲವರ ಹೆಸರನ್ನು ಹೇಳುವಂತೆ ತನಿಖಾಧಿಕಾರಿಗಳು ಒತ್ತಡ ಹೇರಿ ನನಗೆ ಚಿತ್ರಹಿಂಸೆ ನೀಡಿದ್ದರು ಎಂದು ಪ್ರಕರಣದಲ್ಲಿ ಖುಲಾಸೆಗೊಂಡಿರುವ ಮಾಜಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಹೇಳಿದ್ದಾರೆ.
ಮಾಲೆಗಾಂವ್ ಪ್ರಕರಣದಲ್ಲಿ ಎನ್ಐಎ ನ್ಯಾಯಾಲಯವು ತೀರ್ಪು ಪ್ರಕಟಿಸಿದ ಮರುದಿನ ಸಾಧ್ವಿ ತನಗಾದ ಕಿರುಕುಳದ ಬಗ್ಗೆ ಹೇಳಿಕೊಂಡಿದ್ದಾರೆ.
ಪ್ರಕರಣದ ತನಿಖೆಯ ಸಂದರ್ಭದಲ್ಲಿ ನನಗೆ ತೀವ್ರ ಚಿತ್ರಹಿಂಸೆ ನೀಡಲಾಗಿತ್ತು. ಗುಜರಾತಿನ ಸೂರತ್ ನಲ್ಲಿ ಉಳಿದಿದ್ದಾಗ ನರೇಂದ್ರ ಮೋದಿ, ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಸೇರಿದಂತೆ ಹಲವರ ಹೆಸರು ಹೇಳುವಂತೆ ತನಿಖಾಧಿಕಾರಿಗಳು ಒತ್ತಾಯಪಡಿಸಿದ್ದರು. ಆದರೆ ನಾನು ಯಾರ ಹೆಸರನ್ನೂ ಉಲ್ಲೇಖಿಸಿರಲಿಲ್ಲ. ಇದು ಸತ್ಯ ವಿಷಯವಾಗಿದ್ದು ಯಾವುದೇ ಕಾರಣಕ್ಕು ಸುಳ್ಳು ಹೇಳುತ್ತಿಲ್ಲ ಎಂದು ಪ್ರಜ್ಞಾ ಸಿಂಗ್ ಠಾಕೂರ್ ಹೇಳಿದ್ದಾರೆ.
ನಾನು ಈ ಎಲ್ಲ ವಿಚಾರವನ್ನು ಲಿಖಿತವಾಗಿ ದಾಖಲಿಸಿದ್ದೇನೆ. ನನಗೆ ಚಿತ್ರಹಿಂಸೆ ನೀಡುವುದೇ ಅವರ ಮೂಲ ಉದ್ದೇಶವಾಗಿತ್ತು. ಹೆಸರು ಹೇಳದಿದ್ದರೆ ಚಿತ್ರಹಿಂಸೆ ಮುಂದುವರಿಸುವುದಾಗಿ ಬೆದರಿಸುತ್ತಿದ್ದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಆರೆಸ್ಸೆಸ್ ನ ಸುದರ್ಶನ್, ಇಂದ್ರೇಶ್ ಹಾಗೂ ರಾಮಮಾಧವ್ ಸೇರಿದಂತೆ ಹೆಸರು ಹೇಳುವಂತೆ ಒತ್ತಾಯಿಸಿದ್ದರು.
ನನಗೆ ಪ್ರಜ್ಞೆ ತಪ್ಪಿ ಆಸ್ಪತ್ರೆಗೆ ದಾಖಲಾಗಿದ್ದರೂ ಬಂಧಿಸಿಡಲಾಗಿತ್ತು. ನಾನು ಹೇಳಿದ ಎಲ್ಲ ವಿಚಾರವನ್ನೂ ದಾಖಲಿಸಿದ್ದೇನೆ. ಈಗ ಸತ್ಯ ಹೊರಬಂದಿದ್ದು ಹಿಂದುತ್ವಕ್ಕೆ, ಸನಾತನ ರಾಷ್ಟ್ರಕ್ಕೆ ಸಿಕ್ಕ ಗೆಲುವಾಗಿದೆ ಎಂದು ಹೇಳಿದರು.
ಆದರೆ ಸಾಧ್ವಿ ಮಾಡಿರುವ ಆರೋಪವನ್ನು ಎನ್ಐಎ ಕೋರ್ಟ್ ನ್ಯಾಯಾಧೀಶ ಎ.ಕೆ. ಲಹೋಟಿ ಆದೇಶದಲ್ಲಿ ಉಲ್ಲೇಖ ಮಾಡಿಲ್ಲ. ಎನ್ಐಎ ತನಿಖಾ ತಂಡ ಈ ಬಗ್ಗೆ ಯಾವುದೇ ಸಾಕ್ಷ್ಯ ಉಲ್ಲೇಖಿಸಿಲ್ಲ ಎಂದು ಲಹೋಟಿ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
Acquitted in the 2008 Malegaon blast case, former BJP MP Sadhvi Pragya said she was "forced to name" Prime Minister Narendra Modi and Uttar Pradesh Chief Minister Yogi Adityanath in the case. She claimed she was “tortured a lot” for not doing so.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm