ಬ್ರೇಕಿಂಗ್ ನ್ಯೂಸ್
05-08-25 09:33 pm HK News Desk ದೇಶ - ವಿದೇಶ
ನವದೆಹಲಿ, ಆ.5 : ಉತ್ತರಾಖಂಡದ ಉತ್ತರಕಾಶಿಯಲ್ಲಿ ಮೇಘಸ್ಫೋಟ ಉಂಟಾಗಿದ್ದು ಧರಾಲಿ ಪ್ರದೇಶದಲ್ಲಿ ಖೀರ್ ಗಂಗಾ ನದಿ ಅಬ್ಬರಕ್ಕೆ ಇಡೀ ಗ್ರಾಮಕ್ಕೆ ಗ್ರಾಮವೇ ನಾಶಕ್ಕೀಡಾಗಿದೆ. ಅತಿ ಎತ್ತರದ ಪ್ರದೇಶದಲ್ಲಿ ಉಂಟಾದ ಭಾರೀ ಪ್ರವಾಹಕ್ಕೆ ಅಂಗಡಿಗಳು, ವಾಹನಗಳು ಮತ್ತು ಮನೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಘಟನೆಯಲ್ಲಿ 50ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದೆ.
ಘಟನೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಅವರು ಉತ್ತರಾಖಂಡ ರಾಜ್ಯದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ, ಎಸ್ಡಿಆರ್ಎಫ್ ತಂಡವನ್ನು ಸ್ಥಳಕ್ಕೆ ರವಾನಿಸಲಾಗಿದೆ. ಸ್ಥಳೀಯ ಆಡಳಿತ, ಪೊಲೀಸರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ.










![]()
ಉತ್ತರ ಕಾಶಿಯಲ್ಲಿ 40-50 ಮನೆಗಳು ಕೊಚ್ಚಿಕೊಂಡು ಹೋಗಿವೆ. 50ಕ್ಕು ಹೆಚ್ಚು ಜನರು ಪ್ರವಾಹದಲ್ಲಿ ಕೊಚ್ಚಿ ಹೋಗಿರುವ ಶಂಕೆ ಇದೆ. ಹರ್ಸಿಲ್ ನಗರದಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಪ್ರವಾಹ, ಭೂಕುಸಿತ ಸಂಭವಿಸಿದೆ. ಸ್ಥಳಕ್ಕೆ ಮೂರು ಎನ್ ಡಿಆರ್ ಎಫ್ ತಂಡಗಳನ್ನು ಕಳುಹಿಸಲಾಗಿದೆ ಎಂದು ಎನ್ ಡಿಆರ್ ಎಫ್ ಡಿಐಜಿ ಮೊಹ್ಸೀನ್ ಶಾಹಿದ್ ತಿಳಿಸಿದ್ದಾರೆ. ಉತ್ತರಕಾಶಿ, ಧಾರಾಲಿ ಮತ್ತು ಸುಖಿ ಏರಿಯಾದಲ್ಲಿ ಒಂದೇ ದಿನ ಭಾರೀ ಪ್ರವಾಹ ಮತ್ತು ಭೂಕುಸಿತ ಉಂಟಾಗಿದ್ದು ಆಸುಪಾಸಿನ ರಸ್ತೆಗಳು, ವಾಹನಗಳು ಕೊಚ್ಚಿ ಹೋಗಿವೆ. ಅಲ್ಲದೆ, ಬೆಟ್ಟದ ಮೇಲ್ಬಾಗದಲ್ಲಿ ಹಲವಾರು ಮನೆಗಳು ಪ್ರವಾಹದಲ್ಲಿ ಸಿಲುಕಿ ಕೊಚ್ಚಿ ಹೋಗಿವೆ. ಖೀರ್ ನದಿಯಲ್ಲಿ ಪ್ರವಾಹ ಉಂಟಾಗಿ ಎತ್ತರದ ನಗರ ಪ್ರದೇಶದಲ್ಲಿ ಧುಮ್ಮಿಕ್ಕಿ ಹರಿಯುವುದು, ಜನರು ಕೊಚ್ಚಿಕೊಂಡು ಹೋಗುವ ಭಯಾನಕ ವಿಡಿಯೋ ವೈರಲ್ ಆಗಿದೆ. 2013ರಲ್ಲಿ ಉತ್ತರಾಖಂಡದಲ್ಲಿ ಎದುರಾಗಿದ್ದ ಪ್ರವಾಹ ದುರಂತವನ್ನೂ ಮೀರಿಸುವಷ್ಟು ನಾಶ ನಷ್ಟ ಆಗಿದೆ ಎಂದು ತೇಹ್ರಿ ಘರ್ ವಾಲ್ ಸಂಸದೆ ಮಾಲಾ ರಾಜ್ಯ ಲಕ್ಷ್ಮಿ ಹೇಳಿದ್ದಾರೆ.
A powerful cloudburst struck Dharali village in Uttarkashi district on Tuesday afternoon, unleashing a massive landslide and flooding that have caused extensive destruction and killing at least four people. The village, located about 4 kilometers from the Indian Army camp at Harsil, was hit around 1:45 pm, with a torrent of water and debris cutting off all road connectivity to the Gangotri Dham.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am