ಬ್ರೇಕಿಂಗ್ ನ್ಯೂಸ್
05-08-25 09:33 pm HK News Desk ದೇಶ - ವಿದೇಶ
ನವದೆಹಲಿ, ಆ.5 : ಉತ್ತರಾಖಂಡದ ಉತ್ತರಕಾಶಿಯಲ್ಲಿ ಮೇಘಸ್ಫೋಟ ಉಂಟಾಗಿದ್ದು ಧರಾಲಿ ಪ್ರದೇಶದಲ್ಲಿ ಖೀರ್ ಗಂಗಾ ನದಿ ಅಬ್ಬರಕ್ಕೆ ಇಡೀ ಗ್ರಾಮಕ್ಕೆ ಗ್ರಾಮವೇ ನಾಶಕ್ಕೀಡಾಗಿದೆ. ಅತಿ ಎತ್ತರದ ಪ್ರದೇಶದಲ್ಲಿ ಉಂಟಾದ ಭಾರೀ ಪ್ರವಾಹಕ್ಕೆ ಅಂಗಡಿಗಳು, ವಾಹನಗಳು ಮತ್ತು ಮನೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಘಟನೆಯಲ್ಲಿ 50ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದೆ.
ಘಟನೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಅವರು ಉತ್ತರಾಖಂಡ ರಾಜ್ಯದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ, ಎಸ್ಡಿಆರ್ಎಫ್ ತಂಡವನ್ನು ಸ್ಥಳಕ್ಕೆ ರವಾನಿಸಲಾಗಿದೆ. ಸ್ಥಳೀಯ ಆಡಳಿತ, ಪೊಲೀಸರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ.










![]()
ಉತ್ತರ ಕಾಶಿಯಲ್ಲಿ 40-50 ಮನೆಗಳು ಕೊಚ್ಚಿಕೊಂಡು ಹೋಗಿವೆ. 50ಕ್ಕು ಹೆಚ್ಚು ಜನರು ಪ್ರವಾಹದಲ್ಲಿ ಕೊಚ್ಚಿ ಹೋಗಿರುವ ಶಂಕೆ ಇದೆ. ಹರ್ಸಿಲ್ ನಗರದಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಪ್ರವಾಹ, ಭೂಕುಸಿತ ಸಂಭವಿಸಿದೆ. ಸ್ಥಳಕ್ಕೆ ಮೂರು ಎನ್ ಡಿಆರ್ ಎಫ್ ತಂಡಗಳನ್ನು ಕಳುಹಿಸಲಾಗಿದೆ ಎಂದು ಎನ್ ಡಿಆರ್ ಎಫ್ ಡಿಐಜಿ ಮೊಹ್ಸೀನ್ ಶಾಹಿದ್ ತಿಳಿಸಿದ್ದಾರೆ. ಉತ್ತರಕಾಶಿ, ಧಾರಾಲಿ ಮತ್ತು ಸುಖಿ ಏರಿಯಾದಲ್ಲಿ ಒಂದೇ ದಿನ ಭಾರೀ ಪ್ರವಾಹ ಮತ್ತು ಭೂಕುಸಿತ ಉಂಟಾಗಿದ್ದು ಆಸುಪಾಸಿನ ರಸ್ತೆಗಳು, ವಾಹನಗಳು ಕೊಚ್ಚಿ ಹೋಗಿವೆ. ಅಲ್ಲದೆ, ಬೆಟ್ಟದ ಮೇಲ್ಬಾಗದಲ್ಲಿ ಹಲವಾರು ಮನೆಗಳು ಪ್ರವಾಹದಲ್ಲಿ ಸಿಲುಕಿ ಕೊಚ್ಚಿ ಹೋಗಿವೆ. ಖೀರ್ ನದಿಯಲ್ಲಿ ಪ್ರವಾಹ ಉಂಟಾಗಿ ಎತ್ತರದ ನಗರ ಪ್ರದೇಶದಲ್ಲಿ ಧುಮ್ಮಿಕ್ಕಿ ಹರಿಯುವುದು, ಜನರು ಕೊಚ್ಚಿಕೊಂಡು ಹೋಗುವ ಭಯಾನಕ ವಿಡಿಯೋ ವೈರಲ್ ಆಗಿದೆ. 2013ರಲ್ಲಿ ಉತ್ತರಾಖಂಡದಲ್ಲಿ ಎದುರಾಗಿದ್ದ ಪ್ರವಾಹ ದುರಂತವನ್ನೂ ಮೀರಿಸುವಷ್ಟು ನಾಶ ನಷ್ಟ ಆಗಿದೆ ಎಂದು ತೇಹ್ರಿ ಘರ್ ವಾಲ್ ಸಂಸದೆ ಮಾಲಾ ರಾಜ್ಯ ಲಕ್ಷ್ಮಿ ಹೇಳಿದ್ದಾರೆ.
A powerful cloudburst struck Dharali village in Uttarkashi district on Tuesday afternoon, unleashing a massive landslide and flooding that have caused extensive destruction and killing at least four people. The village, located about 4 kilometers from the Indian Army camp at Harsil, was hit around 1:45 pm, with a torrent of water and debris cutting off all road connectivity to the Gangotri Dham.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm