ಬ್ರೇಕಿಂಗ್ ನ್ಯೂಸ್
12-08-25 11:35 am HK News Desk ದೇಶ - ವಿದೇಶ
ನವದೆಹಲಿ, ಆ.12 : ದೇಶದಲ್ಲಿ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆ ನೀಡುವ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಆಯುಷ್ಮಾನ್ ಯೋಜನೆಗೆ ಕರ್ನಾಟಕ ಸರ್ಕಾರವು ತನ್ನ ಪಾಲು ನೀಡದ ಕಾರಣ ಯೋಜನೆ ಅನುಷ್ಠಾನ ಪ್ರಕ್ರಿಯೆ ಸ್ಥಗಿತಗೊಂಡಿರುವ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಲೋಕಸಭೆಯಲ್ಲಿ ಪ್ರಸ್ತಾಪಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ನಿಯಮ 377ರ ಅಡಿಯಲ್ಲಿ ಲೋಕಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಸಂಸದರು, ದೇಶಾದ್ಯಂತ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ಆರೋಗ್ಯ ಸೇವೆ ಒದಗಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕಳೆದ ವರ್ಷ “ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ” ಜಾರಿಗೆ ತಂದಿದೆ. ಆದರೆ ಕರ್ನಾಟಕದಲ್ಲಿರುವ ಹಿರಿಯ ನಾಗರಿಕರಿಗೆ ಈ ಯೋಜನೆಯ ಲಾಭ ಪಡೆಯುವುದಕ್ಕೆ ಸಾಧ್ಯವಾಗುತ್ತಿಲ್ಲ. ಈ ಯೋಜನೆಗೆ ರಾಜ್ಯ ಸರ್ಕಾರ ತನ್ನ ಪಾಲಿನ ಶೇ.40 ರಷ್ಟು ಪಾಲನ್ನು ನೀಡುವುದಕ್ಕೆ ನಿರಾಕರಿಸಿದೆ. ರಾಜ್ಯ ಸರ್ಕಾರದ ನಿರ್ಧಾರದಿಂದ ಈ ಯೋಜನೆಯನ್ನು ಅವಲಂಬಿಸಿರುವ ಲಕ್ಷಾಂತರ ಹಿರಿಯ ನಾಗರಿಕರಿಗೆ ಅಗತ್ಯ ಜೀವ ರಕ್ಷಕ ಚಿಕಿತ್ಸೆ ಪಡೆಯಲು ಸಾಧ್ಯವಾಗದೆ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಕಳಕಳಿ ವ್ಯಕ್ತಪಡಿಸಿದ್ದಾರೆ.
ಮಂಗಳೂರು ಭಾಗದಲ್ಲಿ 70 ವರ್ಷ ದಾಟಿರುವ ಸುಮಾರು 80 ಸಾವಿರ ಹಿರಿಯ ನಾಗರಿಕರಿದ್ದಾರೆ. ಆದರೆ, ಕರ್ನಾಟಕ ಸರ್ಕಾರದ ತೀರ್ಮಾನದಿಂದಾಗಿ ಆಯುಷ್ಮಾನ್ ಭಾರತ್ ಯೋಜನೆಯಡಿ ವಾರ್ಷಿಕವಾಗಿ 5 ಲಕ್ಷ ರೂ. ವಿಮಾ ಸೌಲಭ್ಯದಡಿ ಆಸ್ಪತ್ರೆಗೆ ದಾಖಲಾಗಿ ಉಚಿತ ಚಿಕಿತ್ಸೆ ಪಡೆದುಕೊಳ್ಳುವುದಕ್ಕೆ ಸಾಧ್ಯವಾಗುತ್ತಿಲ್ಲ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶದ ಬಡ ವರ್ಗದವರಿಗೆ ತಮ್ಮ ವೃದ್ಧಾಪ್ಯ ಜೀವನದಲ್ಲಿ ಎದುರಾಗುವ ಕಾಯಿಲೆಗಳಿಗೆ ಯಾರ ಆಶ್ರಯವೂ ಇಲ್ಲದೆ ಗುಣಮಟ್ಟದ ಚಿಕಿತ್ಸೆ ಪಡೆಯಬೇಕೆಂಬ ಬಹಳ ದೊಡ್ಡ ಆಶಯ, ಕಳಕಳಿಯೊಂದಿಗೆ ಆಯುಷ್ಮಾನ್ ಯೋಜನೆಯನ್ನು ಜಾರಿಗೊಳಿಸಿದ್ದಾರೆ. ಆದರೆ, ಆಯುಷ್ಮಾನ್ ಭಾರತ್ ಯೋಜನೆ ಜಾರಿ ವಿಚಾರದಲ್ಲಿ ಕರ್ನಾಟಕ ಸರ್ಕಾರದ ನಿರ್ಧಾರದಿಂದಾಗಿ ಪ್ರಧಾನಮಂತ್ರಿ ಮೋದಿ ಅವರ ವಿಷನ್ ನೆರವೇರಿಸುವುದಕ್ಕೆ ಹಿನ್ನಡೆಯಾಗಿದೆ ಎಂದು ಹೇಳಿದ್ದಾರೆ.
ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರವು ಕೂಡಲೇ ಕರ್ನಾಟಕದಲ್ಲಿರುವ ಹಿರಿಯ ನಾಗರಿಕರ ಆರೋಗ್ಯದ ಹಕ್ಕನ್ನು ಸಂರಕ್ಷಿಸುವುದಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಅಲ್ಲದೆ, ಬಹಳ ಜನಪ್ರಿಯವಾದ ಈ ಆಯುಷ್ಮಾನ್ ಯೋಜನೆ ಮಾನದಂಡಗಳನ್ನು ಪೂರೈಕೆ ಮಾಡುವಂತೆ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಸಂಸದ ಕ್ಯಾ. ಚೌಟ ಅವರು ಸದನದಲ್ಲಿ ಒತ್ತಾಯಿಸಿದ್ದಾರೆ.
Dakshina Kannada MP Brijesh Chowta has accused the Karnataka government of denying universal healthcare to senior citizens aged 70 and above by refusing to contribute its share to the Ayushman Bharat scheme, effectively halting its implementation in the state.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am