ಬ್ರೇಕಿಂಗ್ ನ್ಯೂಸ್
12-08-25 11:42 am HK News Desk ದೇಶ - ವಿದೇಶ
ಶ್ರೀನಗರ, ಆ.12 : ಕಾಶ್ಮೀರಿ ಪಂಡಿತ ಕುಟುಂಬದ ಮಹಿಳೆಯೊಬ್ಬರ ಕೊಲೆ ಪ್ರಕರಣವು 35 ವರ್ಷಗಳ ಬಳಿಕ ರೀ ಓಪನ್ ಆಗಿದ್ದು, ತನಿಖೆಯ ಜಾಡು ಹಿಡಿದು ಜಮ್ಮು ಕಾಶ್ಮೀರದ ರಾಜ್ಯ ವಿಶೇಷ ತನಿಖಾ ದಳವು ಮಂಗಳವಾರ ಬೆಳಗ್ಗೆ ಹಲವೆಡೆ ದಾಳಿ ನಡೆಸಿದೆ.
ಸರಳಾ ಭಟ್ ಎಂಬ ಮಹಿಳೆ 1990ರ ಏಪ್ರಿಲ್ 18ರಂದು ಶ್ರೀನಗರದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಘಟನೆ ಬಗ್ಗೆ ಸರಿಯಾದ ತನಿಖೆ ಆಗಿರದ ಹಿನ್ನೆಲೆಯಲ್ಲಿ 35 ವರ್ಷಗಳ ಬಳಿಕ ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆನ್ನಲಾಗಿರುವ ನಿಷೇಧಿತ ಜಮ್ಮು ಮತ್ತು ಕಾಶ್ಮೀರ ಲಿಬರೇಶನ್ ಫ್ರಂಟ್(ಜೆಕೆಎಲ್ಎಫ್) ನ ಕೆಲವು ಸದಸ್ಯರ ಮನೆಗಳಿಗೆ ಹಾಗೂ ಅಪಾರ್ಟ್ಮೆಂಟ್ಗಳ ಮೇಲೆ ರಾಜ್ಯ ತನಿಖಾ ಸಂಸ್ಥೆ ದಾಳಿ ಮಾಡಿ ಮಾಹಿತಿ ಸಂಗ್ರಹಿಸಿದೆ. ಸೆಂಟ್ರಲ್ ಕಾಶ್ಮೀರವನ್ನು ಗುರುಯಾಗಿರಿಸಿ ತನಿಖಾ ಸಂಸ್ಥೆಯ ದಾಳಿ ನಡೆದಿದ್ದು ನಿಷೇಧಿತ ಜೆಕೆಎಲ್ಎಫ್ ಸಂಘಟನೆಯ ಸದಸ್ಯರ ಮೇಲೆ ತನಿಖೆ ಕೇಂದ್ರೀಕೃತವಾಗಿದೆ.





ಜೆಕೆಎಲ್ಎಫ್ನ ಮಾಜಿ ಮುಖ್ಯಸ್ಥ ಪೀರ್ ನೂರುಲ್ ಹಕ್ ಶಾ ಮನೆಯೂ ಸೇರಿ ಎಂಟು ಕಡೆ ದಾಳಿ ನಡೆಸಲಾಗಿದ್ದು ಹುಡುಕಾಟ ಮಾಡಲಾಗಿದೆ. 27 ವರ್ಷದ ನರ್ಸ್ ಆಗಿದ್ದ ಸರಳಾ ಭಟ್ 1990ರ ಏಪ್ರಿಲ್ನಲ್ಲಿ ಸೌರಾದ ಶೇರ್-ಇ-ಕಾಶ್ಮೀರ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ನ ಹಾಸ್ಟೆಲ್ನಿಂದ ನಾಪತ್ತೆಯಾಗಿದ್ದು, ಮರುದಿನ ಏಪ್ರಿಲ್ 18ರಂದು ಶ್ರೀನಗರದಲ್ಲಿ ಗುಂಡೇಟಿನಿಂದ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅದಕ್ಕೂ ಮುನ್ನ ಜೆಕೆಎಲ್ ಎಫ್ ಉಗ್ರರು ಸರ್ಕಾರಿ ವ್ಯವಸ್ಥೆಯಲ್ಲಿ ಕೆಲಸದಲ್ಲಿರುವ ಪಂಡಿತ್ ಬ್ರಾಹ್ಮಣ ಕುಟುಂಬದ ಸದಸ್ಯರು ಕೆಲಸ ಬಿಟ್ಟು ಹೋಗುವಂತೆ ಫರ್ಮಾನು ಹೊರಡಿಸಿದ್ದರು. ಕಾಶ್ಮೀರ ಕಣಿವೆಯಲ್ಲಿದ್ದ ಪಂಡಿತ ಕುಟುಂಬಗಳನ್ನು ಮನೆ ಬಿಟ್ಟು ಹೋಗುವಂತೆ ತಾಕೀತು ಮಾಡಿದ್ದರು. ಇದರಿಂದಾಗಿ ಅಲ್ಲಿದ್ದ ಹೆಚ್ಚಿನ ಬ್ರಾಹ್ಮಣ ಕುಟುಂಬಗಳು ಊರು ತೊರೆದು ದೆಹಲಿ ಸೇರಿದ್ದವು. ಇದೀಗ 35 ವರ್ಷ ಹಳೆಯ ಕೊಲೆ ಪ್ರಕರಣದಲ್ಲಿ ಸಾಕ್ಷ್ಯ ಹುಡುಕಲು ಪೊಲೀಸರು ಮುಂದಾಗಿದ್ದಾರೆ.
More than three decades after a brutal act of terror shook the medical community in Srinagar, the State Investigation Agency (SIA) of Jammu & Kashmir has launched fresh searches to unearth the conspiracy behind the killing of 27-year-old nurse Sarla Bhat.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm