ಬ್ರೇಕಿಂಗ್ ನ್ಯೂಸ್
13-08-25 11:56 am HK News Desk ದೇಶ - ವಿದೇಶ
ಚೆನ್ನೈ, ಆಗಸ್ಟ್ 13 : ಸರ್ಕಾರಿ ವಸತಿ ಗೃಹದಲ್ಲಿ ಆಶ್ರಯ ಪಡೆಯುವಂತೆ ಬಾಲಕಿಗೆ ಆದೇಶ ಹೊರಡಿಸಿದ ಮದ್ರಾಸ್ ಹೈಕೋರ್ಟ್ ತೀರ್ಪು ಕೇಳಿದ ಹದಿಹರೆಯದ ಬಾಲಕಿಯೋರ್ವಳು ಕೋರ್ಟಿನ ಮೊದಲನೇ ಮಹಡಿಯಿಂದ ಧುಮುಕಿದ ನಾಟಕೀಯ ಘಟನೆ ಮಂಗಳವಾರ ಚೆನ್ನೈನಲ್ಲಿ ನಡೆದಿದೆ. ಗಾಯಾಳು 15ರ ಹರೆಯದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಾಲಕಿಯ ಹೆತ್ತವರು ವಿಚ್ಚೇದಿತರಾಗಿದ್ದು ಮಗಳು ನಾಪತ್ತೆಯಾಗಿದ್ದಾಳೆ ಎಂದು ಆಕೆಯ ತಂದೆ ಹೆಬಿಯಸ್ ಕಾರ್ಪಸ್ ಅರ್ಜಿ ದಾಖಲಿಸಿದ್ದರು. ಕೇಸು ಜಾಡು ಹಿಡಿದು ಹೊರಟ ಪೊಲೀಸರು ಬಾಲಕಿಯನ್ನು ಆಕೆಯ ಅಜ್ಜಿ ಮನೆಯಲ್ಲಿ ಪತ್ತೆ ಮಾಡಿ ಕೋರ್ಟ್ ಗೆ ಹಾಜರುಪಡಿಸಿದ್ದರು. ಕೋರ್ಟ್ ವಿಚಾರಣೆಯಲ್ಲಿ ಆಕೆ ತಾನು ತಾಯಿಯ ಜೊತೆ ಅಂಡಮಾನ್ ನಲ್ಲಿ ವಾಸಿಸುವುದಾಗಿ ಅಚ್ಚರಿಯ ಹೇಳಿಕೆ ನೀಡಿದ್ದಳು. ಬಳಿಕ ನ್ಯಾಯಮೂರ್ತಿಗಳಾದ ಎಂ.ಎಸ್ ರಮೇಶ್ ಮತ್ತು ವಿ. ಲಕ್ಷ್ಮೀನಾರಾಯಣನ್ ಅವರಿದ್ದ ಪೀಠ, ಬಾಲಕಿ ಹಾಗೂ ಕೌನ್ಸಿಲರ್ ಒಬ್ಬರ ಜೊತೆ ಅಭಿಪ್ರಾಯ ಪಡೆದು, ಅಂಡಮಾನ್ ವಾತಾವರಣ ಬಾಲಕಿಯ ವಾಸ್ತವ್ಯಕ್ಕೆ ಪೂರಕವಾಗಿಲ್ಲ ಎಂದು ಪ್ರಕಟಿಸಿ, ಸರ್ಕಾರಿ ವಸತಿ ಗೃಹದಲ್ಲಿರುವಂತೆ ಬಾಲಕಿಗೆ ನಿರ್ದೇಶನ ನೀಡಿತ್ತು. ಜೊತೆಗೆ ಬಾಲಕಿಗೆ ಮನೋವೈಜ್ಞಾನಿಕ ಚಿಕಿತ್ಸೆ ನೀಡುವಂತೆ ಆದೇಶಿಸಿ ಆಗಸ್ಟ್ 26ಕ್ಕೆ ಮುಂದಿನ ವಿಚಾರಣೆಗೆ ದಿನಾಂಕ ನಿಗದಿಪಡಿಸಿತು.


ಆದರೆ ಕೋರ್ಟ್ ಆದೇಶ ಕೇಳಿದ ಬಾಲಕಿ ಕೋರ್ಟ್ ನ ಮೊದಲ ಮಹಡಿಯಿಂದ ಕೆಳಗೆ ಧುಮುಕಿದ್ದಾಳೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಾಯದಿಂದ ಪಾರಾಗಿದ್ದಾಳೆ ಎನ್ನುವ ಮಾಹಿತಿ ಇದೆ.
In a dramatic incident at the Madras High Court on Tuesday, a 15-year-old girl jumped from the first floor of the court premises after being denied permission to stay with her mother in the Andaman Islands. She was immediately rushed to the hospital and is reported to be out of danger.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm