ಬ್ರೇಕಿಂಗ್ ನ್ಯೂಸ್
13-08-25 11:56 am HK News Desk ದೇಶ - ವಿದೇಶ
ಚೆನ್ನೈ, ಆಗಸ್ಟ್ 13 : ಸರ್ಕಾರಿ ವಸತಿ ಗೃಹದಲ್ಲಿ ಆಶ್ರಯ ಪಡೆಯುವಂತೆ ಬಾಲಕಿಗೆ ಆದೇಶ ಹೊರಡಿಸಿದ ಮದ್ರಾಸ್ ಹೈಕೋರ್ಟ್ ತೀರ್ಪು ಕೇಳಿದ ಹದಿಹರೆಯದ ಬಾಲಕಿಯೋರ್ವಳು ಕೋರ್ಟಿನ ಮೊದಲನೇ ಮಹಡಿಯಿಂದ ಧುಮುಕಿದ ನಾಟಕೀಯ ಘಟನೆ ಮಂಗಳವಾರ ಚೆನ್ನೈನಲ್ಲಿ ನಡೆದಿದೆ. ಗಾಯಾಳು 15ರ ಹರೆಯದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಾಲಕಿಯ ಹೆತ್ತವರು ವಿಚ್ಚೇದಿತರಾಗಿದ್ದು ಮಗಳು ನಾಪತ್ತೆಯಾಗಿದ್ದಾಳೆ ಎಂದು ಆಕೆಯ ತಂದೆ ಹೆಬಿಯಸ್ ಕಾರ್ಪಸ್ ಅರ್ಜಿ ದಾಖಲಿಸಿದ್ದರು. ಕೇಸು ಜಾಡು ಹಿಡಿದು ಹೊರಟ ಪೊಲೀಸರು ಬಾಲಕಿಯನ್ನು ಆಕೆಯ ಅಜ್ಜಿ ಮನೆಯಲ್ಲಿ ಪತ್ತೆ ಮಾಡಿ ಕೋರ್ಟ್ ಗೆ ಹಾಜರುಪಡಿಸಿದ್ದರು. ಕೋರ್ಟ್ ವಿಚಾರಣೆಯಲ್ಲಿ ಆಕೆ ತಾನು ತಾಯಿಯ ಜೊತೆ ಅಂಡಮಾನ್ ನಲ್ಲಿ ವಾಸಿಸುವುದಾಗಿ ಅಚ್ಚರಿಯ ಹೇಳಿಕೆ ನೀಡಿದ್ದಳು. ಬಳಿಕ ನ್ಯಾಯಮೂರ್ತಿಗಳಾದ ಎಂ.ಎಸ್ ರಮೇಶ್ ಮತ್ತು ವಿ. ಲಕ್ಷ್ಮೀನಾರಾಯಣನ್ ಅವರಿದ್ದ ಪೀಠ, ಬಾಲಕಿ ಹಾಗೂ ಕೌನ್ಸಿಲರ್ ಒಬ್ಬರ ಜೊತೆ ಅಭಿಪ್ರಾಯ ಪಡೆದು, ಅಂಡಮಾನ್ ವಾತಾವರಣ ಬಾಲಕಿಯ ವಾಸ್ತವ್ಯಕ್ಕೆ ಪೂರಕವಾಗಿಲ್ಲ ಎಂದು ಪ್ರಕಟಿಸಿ, ಸರ್ಕಾರಿ ವಸತಿ ಗೃಹದಲ್ಲಿರುವಂತೆ ಬಾಲಕಿಗೆ ನಿರ್ದೇಶನ ನೀಡಿತ್ತು. ಜೊತೆಗೆ ಬಾಲಕಿಗೆ ಮನೋವೈಜ್ಞಾನಿಕ ಚಿಕಿತ್ಸೆ ನೀಡುವಂತೆ ಆದೇಶಿಸಿ ಆಗಸ್ಟ್ 26ಕ್ಕೆ ಮುಂದಿನ ವಿಚಾರಣೆಗೆ ದಿನಾಂಕ ನಿಗದಿಪಡಿಸಿತು.
ಆದರೆ ಕೋರ್ಟ್ ಆದೇಶ ಕೇಳಿದ ಬಾಲಕಿ ಕೋರ್ಟ್ ನ ಮೊದಲ ಮಹಡಿಯಿಂದ ಕೆಳಗೆ ಧುಮುಕಿದ್ದಾಳೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಾಯದಿಂದ ಪಾರಾಗಿದ್ದಾಳೆ ಎನ್ನುವ ಮಾಹಿತಿ ಇದೆ.
In a dramatic incident at the Madras High Court on Tuesday, a 15-year-old girl jumped from the first floor of the court premises after being denied permission to stay with her mother in the Andaman Islands. She was immediately rushed to the hospital and is reported to be out of danger.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm