ಬ್ರೇಕಿಂಗ್ ನ್ಯೂಸ್
13-08-25 11:56 am HK News Desk ದೇಶ - ವಿದೇಶ
ಚೆನ್ನೈ, ಆಗಸ್ಟ್ 13 : ಸರ್ಕಾರಿ ವಸತಿ ಗೃಹದಲ್ಲಿ ಆಶ್ರಯ ಪಡೆಯುವಂತೆ ಬಾಲಕಿಗೆ ಆದೇಶ ಹೊರಡಿಸಿದ ಮದ್ರಾಸ್ ಹೈಕೋರ್ಟ್ ತೀರ್ಪು ಕೇಳಿದ ಹದಿಹರೆಯದ ಬಾಲಕಿಯೋರ್ವಳು ಕೋರ್ಟಿನ ಮೊದಲನೇ ಮಹಡಿಯಿಂದ ಧುಮುಕಿದ ನಾಟಕೀಯ ಘಟನೆ ಮಂಗಳವಾರ ಚೆನ್ನೈನಲ್ಲಿ ನಡೆದಿದೆ. ಗಾಯಾಳು 15ರ ಹರೆಯದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಾಲಕಿಯ ಹೆತ್ತವರು ವಿಚ್ಚೇದಿತರಾಗಿದ್ದು ಮಗಳು ನಾಪತ್ತೆಯಾಗಿದ್ದಾಳೆ ಎಂದು ಆಕೆಯ ತಂದೆ ಹೆಬಿಯಸ್ ಕಾರ್ಪಸ್ ಅರ್ಜಿ ದಾಖಲಿಸಿದ್ದರು. ಕೇಸು ಜಾಡು ಹಿಡಿದು ಹೊರಟ ಪೊಲೀಸರು ಬಾಲಕಿಯನ್ನು ಆಕೆಯ ಅಜ್ಜಿ ಮನೆಯಲ್ಲಿ ಪತ್ತೆ ಮಾಡಿ ಕೋರ್ಟ್ ಗೆ ಹಾಜರುಪಡಿಸಿದ್ದರು. ಕೋರ್ಟ್ ವಿಚಾರಣೆಯಲ್ಲಿ ಆಕೆ ತಾನು ತಾಯಿಯ ಜೊತೆ ಅಂಡಮಾನ್ ನಲ್ಲಿ ವಾಸಿಸುವುದಾಗಿ ಅಚ್ಚರಿಯ ಹೇಳಿಕೆ ನೀಡಿದ್ದಳು. ಬಳಿಕ ನ್ಯಾಯಮೂರ್ತಿಗಳಾದ ಎಂ.ಎಸ್ ರಮೇಶ್ ಮತ್ತು ವಿ. ಲಕ್ಷ್ಮೀನಾರಾಯಣನ್ ಅವರಿದ್ದ ಪೀಠ, ಬಾಲಕಿ ಹಾಗೂ ಕೌನ್ಸಿಲರ್ ಒಬ್ಬರ ಜೊತೆ ಅಭಿಪ್ರಾಯ ಪಡೆದು, ಅಂಡಮಾನ್ ವಾತಾವರಣ ಬಾಲಕಿಯ ವಾಸ್ತವ್ಯಕ್ಕೆ ಪೂರಕವಾಗಿಲ್ಲ ಎಂದು ಪ್ರಕಟಿಸಿ, ಸರ್ಕಾರಿ ವಸತಿ ಗೃಹದಲ್ಲಿರುವಂತೆ ಬಾಲಕಿಗೆ ನಿರ್ದೇಶನ ನೀಡಿತ್ತು. ಜೊತೆಗೆ ಬಾಲಕಿಗೆ ಮನೋವೈಜ್ಞಾನಿಕ ಚಿಕಿತ್ಸೆ ನೀಡುವಂತೆ ಆದೇಶಿಸಿ ಆಗಸ್ಟ್ 26ಕ್ಕೆ ಮುಂದಿನ ವಿಚಾರಣೆಗೆ ದಿನಾಂಕ ನಿಗದಿಪಡಿಸಿತು.


ಆದರೆ ಕೋರ್ಟ್ ಆದೇಶ ಕೇಳಿದ ಬಾಲಕಿ ಕೋರ್ಟ್ ನ ಮೊದಲ ಮಹಡಿಯಿಂದ ಕೆಳಗೆ ಧುಮುಕಿದ್ದಾಳೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಾಯದಿಂದ ಪಾರಾಗಿದ್ದಾಳೆ ಎನ್ನುವ ಮಾಹಿತಿ ಇದೆ.
In a dramatic incident at the Madras High Court on Tuesday, a 15-year-old girl jumped from the first floor of the court premises after being denied permission to stay with her mother in the Andaman Islands. She was immediately rushed to the hospital and is reported to be out of danger.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am