ಬ್ರೇಕಿಂಗ್ ನ್ಯೂಸ್
15-08-25 01:32 pm HK News Desk ದೇಶ - ವಿದೇಶ
ಶ್ರೀನಗರ, ಆ.15 : ಜಮ್ಮು-ಕಾಶ್ಮೀರದ ಕಿಶ್ತ್ ವಾಡ ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದ ಭೀಕರ ಮೇಘಸ್ಫೋಟ ಹಾಗೂ ಪ್ರವಾಹದಲ್ಲಿ 46 ಜನ ಮೃತಪಟ್ಟಿದ್ದು, 200ರಷ್ಟು ಮಂದಿ ನಾಪತ್ತೆಯಾಗಿದ್ದಾರೆ. 167 ಮಂದಿಯನ್ನು ರಕ್ಷಿಸಲಾಗಿದ್ದು, ಈ ಪೈಕಿ 38 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ. ದುರಂತದಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್ಎಫ್) ಇಬ್ಬರು ಸಿಬ್ಬಂದಿಯೂ ಮೃತಪಟ್ಟಿದ್ದಾರೆ.
ಮಚೈಲ್ ಮಾತಾ ದೇವಾಲಯಕ್ಕೆ ಹೋಗುವ ಮಾರ್ಗದಲ್ಲಿರುವ ಜೋಸಿತಿಯಲ್ಲಿ ಗುರುವಾರ ಮಧ್ಯಾಹ್ನ 12ರಿಂದ 1 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ಚೋಸಿತಿ ಗ್ರಾಮದಲ್ಲಿ ಮಟೈಲ್ ಮಾತಾ ದೇಗುಲಕ್ಕೆ ಪಾದಯಾತ್ರೆ ಹೋಗಲು ದೊಡ್ಡ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು. 8.5 ಕಿ.ಮೀ. ದೂರದ ಪಾದಯಾತ್ರೆ ಇಲ್ಲಿಂದಲೇ ಪ್ರಾರಂಭವಾಗುತ್ತದೆ. ಜು.25ರಿಂದ ವಾರ್ಷಿಕ ಪಾದಯಾತ್ರೆ ಆರಂಭವಾಗಿದ್ದು, ಸೆಪ್ಟೆಂಬರ್ 5ರವರೆಗೂ ನಡೆಯಬೇಕಿತ್ತು. ದುರಂತದ ಹಿನ್ನೆಲೆಯಲ್ಲಿ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
)

![]()
ದಾಸೋಹಕ್ಕಾಗಿ ಸೇರಿದ್ದ ಜನ
ಕಿಶ್ವಾಡದಿಂದ ಸುಮಾರು 90 ಕಿ.ಮೀ. ದೂರದಲ್ಲಿರುವ ಚೋಸಿತಿ ಗ್ರಾಮವು ಸಮುದ್ರ ಮಟ್ಟದಿಂದ 9,500 ಅಡಿ ಎತ್ತರಲ್ಲಿದೆ. ಇಲ್ಲಿ ಮಡೈಲ್ ಮಾತಾ ದೇಗುಲಕ್ಕೆ ಹೋಗುವ ಭಕ್ತರಿಗೆ ಉಚಿತ ಅನ್ನದಾಸೋಹ ಏರ್ಪಡಿಸಲಾಗುತ್ತದೆ. ಗುರುವಾರವೂ ನೂರಾರು ಭಕ್ತರು ಪ್ರಸಾದ ಸೇವನೆಗಾಗಿ ಇಲ್ಲಿ ತಂಗಿದ್ದರು. ಈ ವೇಳೆ ಭಾರಿ ಮೇಘಸ್ಫೋಟದಿಂದಾಗಿ ಬಂಡೆಗಳು, ಮಣ್ಣು ನೀರು ಮಿಶ್ರಿತ ಪ್ರವಾಹವು ಉಂಟಾಗಿದೆ. ಗುಡ್ಡವೇ ಜರಿದು ಕಟ್ಟಡಗಳು, ಅಂಗಡಿ-ಮುಂಗಟ್ಟುಗಳನ್ನು ಕೊಚ್ಚಿ ಸಾಗಿದೆ.
ಧರಾಲಿಯನ್ನು ನೆನಪಿಸಿದ ಭಯಾನಕ ದೃಶ್ಯ
ಮೇಘಸ್ಫೋಟವಾದಾಗ ಬೃಹತ್ ಮರಗಳು, ಬಂಡೆಗಳ ಸಮೇತ ಕೆಸರು ನೀರು ರಭಸದಿಂದ ಬೆಟ್ಟ ಪ್ರದೇಶದಿಂದ ಇಳಿಜಾರಿನತ್ತ ನುಗ್ಗಿ ಬಂದಿದೆ. ನೋಡ ನೋಡುತ್ತಿದ್ದಂತೆಯೇ ಇಡೀ ಪ್ರದೇಶ ನಾಮಾವಶೇಷವಾಗಿ ಮಾರ್ಪಟ್ಟಿದೆ. ಇತ್ತೀಚೆಗೆ ಉತ್ತರಾಖಂಡ್ ರಾಜ್ಯದ ಧರಾಲಿ ಗ್ರಾಮದಲ್ಲಿ ಉಂಟಾದ ಮೇಘಸ್ಫೋಟ ಹಾಗೂ ಕೆಸರಿನ ಪ್ರವಾಹದ ದೃಶ್ಯವೇ ಚೋಸಿತಿಯಲ್ಲಿ ಪುನರಾವರ್ತನೆಯಾಗಿದೆ.
ಘಟನೆ ಬಳಿಕ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ, ರಾಜ್ಯ ವಿಪತ್ತು ನಿರ್ವಹಣಾ ಪಡೆ, ಪೊಲೀಸ್, ಸೇನಾ ಸಿಬ್ಬಂದಿ ಹಾಗೂ ಸ್ಥಳೀಯ ಸ್ವಯಂ ಸೇವಕರು ಜಂಟಿಯಾಗಿ ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಆದರೆ ರಸ್ತೆಗಳೂ ಕೊಚ್ಚಿ ಹೋಗಿದ್ದ ರಿಂದ ಮತ್ತು ಭಾರಿ ಮಣ್ಣು, ಕಲ್ಲುಬಂಡೆಗಳ ಹಿನ್ನೆಲೆಯಲ್ಲಿ ಕಾರ್ಯಾಚರಣೆಗೆ ಅಡಚಣೆಯಾಯಿತು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೆ.ಗವರ್ನರ್ ಮತ್ತು ಮುಖ್ಯಮಂತ್ರಿ ಉಮರ್ ಅಬ್ದುಲ್ಲ ಅವರನ್ನು ಸಂಪರ್ಕಿಸಿ ಮಾಹಿತಿ ಪಡೆದಿದ್ದು ರಕ್ಷಣಾ ಕಾರ್ಯಾಚರಣೆ ಚುರುಕುಗೊಳಿಸಲು ಸೂಚಿಸಿದ್ದಾರೆ.
The death toll from the massive cloudburst in Jammu and Kashmir’s Kishtwar climbed to 65 on Friday, even as intense rescue operations continued for the second day.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am