ಬ್ರೇಕಿಂಗ್ ನ್ಯೂಸ್
15-08-25 01:32 pm HK News Desk ದೇಶ - ವಿದೇಶ
ಶ್ರೀನಗರ, ಆ.15 : ಜಮ್ಮು-ಕಾಶ್ಮೀರದ ಕಿಶ್ತ್ ವಾಡ ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದ ಭೀಕರ ಮೇಘಸ್ಫೋಟ ಹಾಗೂ ಪ್ರವಾಹದಲ್ಲಿ 46 ಜನ ಮೃತಪಟ್ಟಿದ್ದು, 200ರಷ್ಟು ಮಂದಿ ನಾಪತ್ತೆಯಾಗಿದ್ದಾರೆ. 167 ಮಂದಿಯನ್ನು ರಕ್ಷಿಸಲಾಗಿದ್ದು, ಈ ಪೈಕಿ 38 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ. ದುರಂತದಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್ಎಫ್) ಇಬ್ಬರು ಸಿಬ್ಬಂದಿಯೂ ಮೃತಪಟ್ಟಿದ್ದಾರೆ.
ಮಚೈಲ್ ಮಾತಾ ದೇವಾಲಯಕ್ಕೆ ಹೋಗುವ ಮಾರ್ಗದಲ್ಲಿರುವ ಜೋಸಿತಿಯಲ್ಲಿ ಗುರುವಾರ ಮಧ್ಯಾಹ್ನ 12ರಿಂದ 1 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ಚೋಸಿತಿ ಗ್ರಾಮದಲ್ಲಿ ಮಟೈಲ್ ಮಾತಾ ದೇಗುಲಕ್ಕೆ ಪಾದಯಾತ್ರೆ ಹೋಗಲು ದೊಡ್ಡ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು. 8.5 ಕಿ.ಮೀ. ದೂರದ ಪಾದಯಾತ್ರೆ ಇಲ್ಲಿಂದಲೇ ಪ್ರಾರಂಭವಾಗುತ್ತದೆ. ಜು.25ರಿಂದ ವಾರ್ಷಿಕ ಪಾದಯಾತ್ರೆ ಆರಂಭವಾಗಿದ್ದು, ಸೆಪ್ಟೆಂಬರ್ 5ರವರೆಗೂ ನಡೆಯಬೇಕಿತ್ತು. ದುರಂತದ ಹಿನ್ನೆಲೆಯಲ್ಲಿ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ದಾಸೋಹಕ್ಕಾಗಿ ಸೇರಿದ್ದ ಜನ
ಕಿಶ್ವಾಡದಿಂದ ಸುಮಾರು 90 ಕಿ.ಮೀ. ದೂರದಲ್ಲಿರುವ ಚೋಸಿತಿ ಗ್ರಾಮವು ಸಮುದ್ರ ಮಟ್ಟದಿಂದ 9,500 ಅಡಿ ಎತ್ತರಲ್ಲಿದೆ. ಇಲ್ಲಿ ಮಡೈಲ್ ಮಾತಾ ದೇಗುಲಕ್ಕೆ ಹೋಗುವ ಭಕ್ತರಿಗೆ ಉಚಿತ ಅನ್ನದಾಸೋಹ ಏರ್ಪಡಿಸಲಾಗುತ್ತದೆ. ಗುರುವಾರವೂ ನೂರಾರು ಭಕ್ತರು ಪ್ರಸಾದ ಸೇವನೆಗಾಗಿ ಇಲ್ಲಿ ತಂಗಿದ್ದರು. ಈ ವೇಳೆ ಭಾರಿ ಮೇಘಸ್ಫೋಟದಿಂದಾಗಿ ಬಂಡೆಗಳು, ಮಣ್ಣು ನೀರು ಮಿಶ್ರಿತ ಪ್ರವಾಹವು ಉಂಟಾಗಿದೆ. ಗುಡ್ಡವೇ ಜರಿದು ಕಟ್ಟಡಗಳು, ಅಂಗಡಿ-ಮುಂಗಟ್ಟುಗಳನ್ನು ಕೊಚ್ಚಿ ಸಾಗಿದೆ.
ಧರಾಲಿಯನ್ನು ನೆನಪಿಸಿದ ಭಯಾನಕ ದೃಶ್ಯ
ಮೇಘಸ್ಫೋಟವಾದಾಗ ಬೃಹತ್ ಮರಗಳು, ಬಂಡೆಗಳ ಸಮೇತ ಕೆಸರು ನೀರು ರಭಸದಿಂದ ಬೆಟ್ಟ ಪ್ರದೇಶದಿಂದ ಇಳಿಜಾರಿನತ್ತ ನುಗ್ಗಿ ಬಂದಿದೆ. ನೋಡ ನೋಡುತ್ತಿದ್ದಂತೆಯೇ ಇಡೀ ಪ್ರದೇಶ ನಾಮಾವಶೇಷವಾಗಿ ಮಾರ್ಪಟ್ಟಿದೆ. ಇತ್ತೀಚೆಗೆ ಉತ್ತರಾಖಂಡ್ ರಾಜ್ಯದ ಧರಾಲಿ ಗ್ರಾಮದಲ್ಲಿ ಉಂಟಾದ ಮೇಘಸ್ಫೋಟ ಹಾಗೂ ಕೆಸರಿನ ಪ್ರವಾಹದ ದೃಶ್ಯವೇ ಚೋಸಿತಿಯಲ್ಲಿ ಪುನರಾವರ್ತನೆಯಾಗಿದೆ.
ಘಟನೆ ಬಳಿಕ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ, ರಾಜ್ಯ ವಿಪತ್ತು ನಿರ್ವಹಣಾ ಪಡೆ, ಪೊಲೀಸ್, ಸೇನಾ ಸಿಬ್ಬಂದಿ ಹಾಗೂ ಸ್ಥಳೀಯ ಸ್ವಯಂ ಸೇವಕರು ಜಂಟಿಯಾಗಿ ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಆದರೆ ರಸ್ತೆಗಳೂ ಕೊಚ್ಚಿ ಹೋಗಿದ್ದ ರಿಂದ ಮತ್ತು ಭಾರಿ ಮಣ್ಣು, ಕಲ್ಲುಬಂಡೆಗಳ ಹಿನ್ನೆಲೆಯಲ್ಲಿ ಕಾರ್ಯಾಚರಣೆಗೆ ಅಡಚಣೆಯಾಯಿತು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೆ.ಗವರ್ನರ್ ಮತ್ತು ಮುಖ್ಯಮಂತ್ರಿ ಉಮರ್ ಅಬ್ದುಲ್ಲ ಅವರನ್ನು ಸಂಪರ್ಕಿಸಿ ಮಾಹಿತಿ ಪಡೆದಿದ್ದು ರಕ್ಷಣಾ ಕಾರ್ಯಾಚರಣೆ ಚುರುಕುಗೊಳಿಸಲು ಸೂಚಿಸಿದ್ದಾರೆ.
The death toll from the massive cloudburst in Jammu and Kashmir’s Kishtwar climbed to 65 on Friday, even as intense rescue operations continued for the second day.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm