ಬ್ರೇಕಿಂಗ್ ನ್ಯೂಸ್
15-08-25 08:46 pm HK News Desk ದೇಶ - ವಿದೇಶ
ನವದೆಹಲಿ, ಆ.15: ರಾಜಧಾನಿ ದೆಹಲಿಯ ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯ ಧ್ವಜಾರೋಹಣ ನೆರವೇರಿಸಿ ದೇಶವನ್ನುದ್ದೇಶಿಸಿ ಭಾಷಣ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ದಾಖಲೆಯನ್ನು ಮುರಿದಿದ್ದಾರೆ. ಆಮೂಲಕ ಸತತವಾಗಿ ಅತಿ ಹೆಚ್ಚು ಸಲ ಸ್ವಾತಂತ್ರ್ಯೋತ್ಸವ ಭಾಷಣ ಮಾಡಿರುವ ಮೊದಲ ಪ್ರಧಾನಿ ನೆಹರು ನಂತರದ ಸ್ಥಾನಕ್ಕೆ ಏರಿದ್ದಾರೆ.
ಇಂದಿರಾ ಗಾಂಧಿಯವರು 1966ರ ಜನವರಿಯಿಂದ 1977ರ ಮಾರ್ಚ್ ವರೆಗೆ ಹಾಗೂ 1980ರ ಜನವರಿಯಿಂದ 1984ರ ಅಕ್ಟೋಬರ್ ವರೆಗೆ ಅಧಿಕಾರದಲ್ಲಿದ್ದು ಒಟ್ಟು 16 ಬಾರಿ ಕೆಂಪು ಕೋಟೆಯಿಂದ ಸ್ವಾತಂತ್ರ್ಯೋತ್ಸವ ಭಾಷಣ ಮಾಡಿದ್ದರು. ಸತತವಾಗಿ 11 ಸಲ ಆಗಸ್ಟ್ 15ರಂದು ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದ್ದರು.





ದೇಶದಲ್ಲಿ ದೀರ್ಘಾವಧಿಗೆ ಪ್ರಧಾನಿಯಾಗಿದ್ದ ಜವಾಹರಲಾಲ್ ನೆಹರು ಅವರು ಒಟ್ಟು 17 ಬಾರಿ ಸತತವಾಗಿ 1947ರಿಂದ 1963ರ ವರೆಗೆ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿ ಭಾಷಣ ಮಾಡಿದ್ದರು. ನೆಹರು ಬಳಿಕ ಪ್ರಧಾನಿಯಾಗಿದ್ದ ಲಾಲ್ ಬಹಾದ್ದೂರ್ ಶಾಸ್ತ್ರಿಯವರು 1964 ಹಾಗೂ 65ರಲ್ಲಿ ಸ್ವಾತಂತ್ರ್ಯ ಧ್ವಜಾರೋಹಣ ಮಾಡಿದ್ದರು. ಇಂದಿರಾ ಅವಧಿಯಲ್ಲಿ 1975-77ರಲ್ಲಿ ತುರ್ತು ಸ್ಥಿತಿ ಜಾರಿಯಲ್ಲಿತ್ತು. ಆನಂತರ, 1977-78ರಲ್ಲಿ ಮೊರಾರ್ಜಿ ದೇಸಾಯಿ ಮತ್ತು 79ರಲ್ಲಿ ಚೌಧರಿ ಚರಣ್ ಸಿಂಗ್ ಪ್ರಧಾನಿಯಾಗಿ ಧ್ವಜಾರೋಹಣ ಮಾಡಿದ್ದರು.
1984ರಲ್ಲಿ ಇಂದಿರಾ ಹತ್ಯೆ ಬಳಿಕ ಪ್ರಧಾನಿ ಸ್ಥಾನಕ್ಕೇರಿದ್ದ ಪುತ್ರ ರಾಜೀವ ಗಾಂಧಿ ಐದು ವರ್ಷ ಧ್ವಜಾರೋಹಣ ಮಾಡಿದ್ದರು. ಅವರ ನಂತರ ವಿಪಿ ಸಿಂಗ್(1990), ಪಿವಿ ನರಸಿಂಹ ರಾವ್ 1991ರಿಂದ 95ರ ವರೆಗೆ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ್ದರು. ಆಬಳಿಕ ಕನ್ನಡಿಗ ದೇವೇಗೌಡ 1996, ಐಕೆ ಗುಜ್ರಾಲ್ 1997ರಲ್ಲಿ ಧ್ವಜಾರೋಹಣ ನೆರವೇರಿಸಿದ್ದರು. 1998ರ ಮಾರ್ಚ್ ನಿಂದ 2004ರ ವರೆಗೆ ಪ್ರಧಾನಿಯಾಗಿದ್ದ ಅಟಲ್ ಬಿಹಾರಿ ವಾಜಪೇಯಿ ಆರು ವರ್ಷ ಧ್ವಜಾರೋಹಣ ಮಾಡಿದ್ದರೆ, 2004ರಲ್ಲಿ ಅಧಿಕಾರಕ್ಕೇರಿದ್ದ ಮನಮೋಹನ್ ಸಿಂಗ್ ಹತ್ತು ವರ್ಷಗಳ ಕಾಲ ಸ್ವಾತಂತ್ರ್ಯೋತ್ಸವ ನೆರವೇರಿಸಿದ್ದರು.
2014ರಲ್ಲಿ ಪ್ರಧಾನಿ ಪಟ್ಟಕ್ಕೇರಿದ ನರೇಂದ್ರ ಮೋದಿ ಸತತ ಮೂರನೇ ಅವಧಿಗೆ ಅಧಿಕಾರದಲ್ಲಿದ್ದು, 12ನೇ ಬಾರಿ ಧ್ವಜಾರೋಹಣ ಮಾಡಿದ್ದಲ್ಲದೆ ಈ ಸಲ ಸುದೀರ್ಘ 103 ನಿಮಿಷಗಳ ದಾಖಲೆಯನ್ನೂ ಮಾಡಿದ್ದಾರೆ. ಕಳೆದ ವರ್ಷ 98 ನಿಮಿಷ ಕಾಲ ಮೋದಿ ಭಾಷಣ ಮಾಡಿದ್ದರು.
Prime Minister Narendra Modi has broken former PM Indira Gandhi’s record by hoisting the national flag and addressing the nation from the Red Fort for the 12th consecutive Independence Day. With this, he now holds the second spot for most consecutive Independence Day addresses by a Prime Minister, behind only Jawaharlal Nehru.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm