ಬ್ರೇಕಿಂಗ್ ನ್ಯೂಸ್
16-08-25 03:34 pm HK News Desk ದೇಶ - ವಿದೇಶ
ನವದೆಹಲಿ, ಆ.16: ಧರ್ಮಸ್ಥಳ ವಿರುದ್ಧ ಷಡ್ಯಂತ್ರ ನಡೆದಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದು, ಆತುರದಲ್ಲಿ ಎಸ್ಐಟಿ ರಚಿಸಿದ್ದರ ಹಿಂದೆ ರಾಜ್ಯ ಸರ್ಕಾರದ್ದೇ ಷಡ್ಯಂತ್ರ ಇದೆಯೇ? ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಪ್ರಲ್ಹಾದ ಜೋಶಿ ಕುಟುಕಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ, ಧರ್ಮಸ್ಥಳ ಪ್ರಕರಣದಲ್ಲಿ ಷಡ್ಯಂತ್ರ ಇರುವುದು ಡಿಸಿಎಂಗೆ ಗೊತ್ತಿದೆ ಅಂದಮೇಲೆ ಸಿಎಂ ಸಿದ್ದರಾಮಯ್ಯ ಅವರಿಗೆ ಗೊತ್ತಾಗದೇ ಹೋಯಿತೇ? ಎಂದು ಪ್ರಶ್ನಿಸಿದ್ದಾರೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಅನಾಮಿಕನ ಆರೋಪದ ಬಗ್ಗೆ ರಾಜ್ಯ ಸರ್ಕಾರ, ಆತುರದಲ್ಲಿ ಎಸ್ಐಟಿ ರಚಿಸುವ ಅವಶ್ಯಕತೆ ಏನಿತ್ತು? ಎಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತನಿಖೆಗೆ ಒತ್ತಡ ಹೆಚ್ಚಿದ್ದರಿಂದ ರಾಜ್ಯ ಸರ್ಕಾರ SIT ತನಿಖೆಗೆ ಆದೇಶಿಸಿತ್ತು. ಆದರೆ, ಆತುರದಲ್ಲಿ ಇಂಥ ನಿರ್ಧಾರ ತೆಗೆದುಕೊಂಡು ಧರ್ಮಸ್ಥಳಕ್ಕೆ ಕಪ್ಪು ಮಸಿ ಬಳಿಯುವ ಯತ್ನಕ್ಕೆ ಸರ್ಕಾರವೂ ಸಾಥ್ ನೀಡಿದೆಯೇ? ಇದರಲ್ಲಿ ಸರ್ಕಾರದ್ದೇ ಷಡ್ಯಂತ್ರ ಏನಾದರೂ ಇದೆಯೇ? ಎಂದು ಜೋಷಿ ಪ್ರಶ್ನೆ ಮಾಡಿದ್ದಾರೆ.
ಡಿಸಿಎಂ ಡಿಕೆ ಶಿವಕುಮಾರ್ ಧರ್ಮಸ್ಥಳ ವಿಚಾರ ಅಧಿವೇಶನದಲ್ಲಿ ಚರ್ಚೆಯಾದಾಗ, ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆದಿದೆ. ಒಳ್ಳೇ ಯೋಜನೆ, ತಂತ್ರಗಾರಿಕೆ ಹೆಣೆದು ಕಪ್ಪು ಚುಕ್ಕೆ ತರಲು ನೋಡುತ್ತಿದ್ದಾರೆ. ಆದರೆ, ಯಾರು? ಏನು? ಅಂತ ಮಾತನಾಡಲು ಹೋಗುವುದಿಲ್ಲ. ತೇಜೋವಧೆ ಮೂಲಕ ನೂರಾರು ವರ್ಷಗಳ ಪರಂಪರೆ ಹಾಳು ಮಾಡಲು ಹೊರಟಿದ್ದಾರೆ ಎಂದಿದ್ದರು. ಡಿಸಿಎಂಗೆ ಗೊತ್ತಿರುವ ಈ ವಿಚಾರ ಸಿಎಂಗೆ ಗೊತ್ತಾಗಿರಲಿಲ್ಲವೇ? ಎಂದು ಜೋಶಿ ಪ್ರಶ್ನಿಸಿದ್ದಾರೆ.
ಡಿಕೆ ಶಿವಕುಮಾರ್ ಹೇಳುವಂತೆ ಷಡ್ಯಂತ್ರ ನಡೆಯುತ್ತಿದೆ ಎಂಬ ವಿಚಾರ ಗೊತ್ತಾದ ಮೇಲೂ ಸಿಎಂ ಸಿದ್ದರಾಮಯ್ಯ ಅವರು ತನಿಖೆಗೆ SIT ರಚಿಸಿದ್ದೇಕೆ? ಇಷ್ಟೆಲ್ಲಾ ಹೈಡ್ರಾಮಾ ಮಾಡುವ ಪ್ರಸಂಗವಾದರೂ ಏನಿತ್ತು? ಎಂದು ಸಚಿವರು ವಾಗ್ದಾಳಿ ನಡೆಸಿದ್ದಾರೆ.
Union Minister for Consumer Affairs and Public Distribution Pralhad Joshi has lashed out at the Karnataka government, raising sharp questions in response to Deputy Chief Minister D.K. Shivakumar’s recent statement regarding a “conspiracy” against Dharmasthala.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm