ಬ್ರೇಕಿಂಗ್ ನ್ಯೂಸ್
17-08-25 12:54 pm HK News Desk ದೇಶ - ವಿದೇಶ
ನವದೆಹಲಿ, ಆ.17 : ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್ಎಸ್ ) ಭೇಟಿ ನೀಡಿದ ಭಾರತದ ಮೊದಲ ಗಗನಯಾತ್ರಿ ಕ್ಯಾಪ್ಟನ್ ಶುಭಾಂಶು ಶುಕ್ಲಾ ಭಾನುವಾರ ನಸುಕಿನ ವೇಳೆ ಸ್ವದೇಶಕ್ಕೆ ಮರಳಿದ್ದಾರೆ.
ಶುಭಾಂಶು ಶುಕ್ಲಾ ಐಎಸ್ಎಸ್ ನಲ್ಲಿ ಹಾರಾಟ ನಡೆಸಿದ ಬಳಿಕ ಅಮೆರಿಕದ ಕ್ಯಾಲಿಫೋರ್ನಿಯಾಗೆ ಸುರಕ್ಷಿತವಾಗಿ ಬಂದಿಳಿದಿದ್ದರು. ಭಾನುವಾರ ನಸುಕಿನ ವೇಳೆಗೆ ದೆಹಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಅವರ ಕುಟುಂಬ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೊದಲಾದ ಅನೇಕ ಗಣ್ಯರು ಶುಭಾಂಶು ಅವರನ್ನು ಬರಮಾಡಿಕೊಂಡರು.





ಭಾರತೀಯ ವಾಯುಪಡೆಯಲ್ಲಿ ಗ್ರೂಪ್ ಕ್ಯಾಪ್ಟನ್ ಆಗಿರುವ ಶುಭಾಂಶು ಶುಕ್ಲಾ ಅವರನ್ನು ಬಾಹ್ಯಾಕಾಶಕ್ಕೆ ಕಳಿಸಲು ಏರ್ಪಾಡು ಮಾಡಲಾಗಿತ್ತು. ತರಬೇತಿ ಬಳಿಕ ಅವರನ್ನು ಆಕ್ಸಿಯಮ್ -4 ಮಿಷನ್ನ (Axiom-4 mission) ಪೈಲಟ್ ಮಾಡಲಾಗಿತ್ತು. ಜೂನ್ 25ರಂದು ಅಮೆರಿಕದ ಫ್ಲೋರಿಡಾದಲ್ಲಿರುವ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಗಗನಯಾತ್ರ ಕೈಗೊಂಡಿದ್ದರು. ಜೂನ್ 26ರಂದು ಐಎಸ್ಎಸ್ ಗೆ ಸಂಪರ್ಕ ಕಲ್ಪಿಸಲಾಗಿತ್ತು.
ಶುಭಾಂಶು ಶುಕ್ಲಾ ಒಂದು ವರ್ಷದಿಂದ ಅಮೇರಿಕಾದಲ್ಲಿರುವ ನಾಸಾ, ಆಕ್ಸಿಯಂ ಮತ್ತು ಸ್ಪೇಸ್ ಎಕ್ಸ್ ಸಹಾಯದಿಂದ ತರಬೇತಿ ಪಡೆಯುತ್ತಿದ್ದರು. ಶುಕ್ಲಾ ಅವರ ಗಗನಯಾತ್ರೆಯ ಈ ಅನುಭವವು ಭಾರತದ ಬಾಹ್ಯಾಕಾಶ ಕನಸಿಗೆ ದೊಡ್ಡ ಕೊಡುಗೆ ನೀಡಿದೆ. ಭಾರತದ ಮಹತ್ವಾಕಾಂಕ್ಷೆಯ ಮಾನವ ಸಹಿತ ಗಗನಯಾನದಲ್ಲಿ (2027) ಪ್ರಮುಖ ಪಾತ್ರ ವಹಿಸಲಿದೆ. ಇದರ ಹೊರತಾಗಿ 2035ರ ವೇಳೆಗೆ ಭಾರತೀಯ ಬಾಹ್ಯಾಕಾಶ ನಿಲ್ದಾಣ (ಭಾರತೀಯ ಅಂತರಿಕ್ಷ ನಿಲ್ದಾಣ) ಮತ್ತು 2040ರ ವೇಳೆಗೆ ಮಾನವ ಸಹಿತ ಚಂದ್ರನಲ್ಲಿಗೆ ತೆರಳುವ ಕಾರ್ಯಾಚರಣೆಗೂ ಸಹಕಾರಿಯಾಗಲಿದೆ.
ಪ್ರಧಾನಿ ಭೇಟಿಗೆ ದಿನ ನಿಗದಿ
ಪ್ರಧಾನಿ ನರೇಂದ್ರ ಮೋದಿಯವರು ಕೆಂಪು ಕೋಟೆಯಲ್ಲಿ ತಮ್ಮ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಶುಕ್ಲಾ ಅವರ ಬಗ್ಗೆ ಪ್ರಸ್ತಾಪಿಸಿದ್ದರು. ಭಾರತಕ್ಕೆ ಬಂದಿರುವ ಶುಕ್ಲಾ ಅವರು ಪ್ರಧಾನಿಯವರನ್ನು ಭೇಟಿ ಆಗಲಿದ್ದಾರೆ. ಆಗಸ್ಟ್ 23ರಂದು ನಡೆಯಲಿರುವ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆಯ ಕಾರ್ಯಕ್ರಮದಲ್ಲೂ ಭಾಗವಹಿಸಲಿದ್ದಾರೆ. ಸಂಸತ್ತಿನಲ್ಲೂ ಸೋಮವಾರ ಶುಕ್ಲಾ ಅವರ ಧ್ಯೇಯದ ಕುರಿತು ವಿಶೇಷ ಚರ್ಚೆ ನಡೆಯಲಿದೆ.
Astronaut Shubhanshu Shukla returned to India early Sunday to a rousing welcome by a large number of people waving the tricolour and beating drums at the airport here to celebrate his historic visit to the International Space Station (ISS).
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm