ಬ್ರೇಕಿಂಗ್ ನ್ಯೂಸ್
17-08-25 09:09 pm HK News Desk ದೇಶ - ವಿದೇಶ
ನವದೆಹಲಿ, ಆ.17 : ಉಪ ರಾಷ್ಟ್ರಪತಿ ಚುನಾವಣೆಗೆ ಎನ್.ಡಿ.ಎ ಮೈತ್ರಿಕೂಟ ತನ್ನ ಅಭ್ಯರ್ಥಿಯನ್ನು ಘೋಷಿಸಿದ್ದು ಹಾಲಿ ಮಹಾರಾಷ್ಟ್ರ ರಾಜ್ಯಪಾಲ, ತಮಿಳುನಾಡು ಮೂಲದ ಸಿ.ಪಿ ರಾಧಾಕೃಷ್ಣನ್ ಅವರನ್ನು ಅಭ್ಯರ್ಥಿಯಾಗಿ ಆರಿಸಲಾಗಿದೆ.
ಸೆ.9ರಂದು ಉಪ ರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಅಭ್ಯರ್ಥಿ ಆಯ್ಕೆ ಸಲುವಾಗಿ ಬಿಜೆಪಿ ಸಂಸದೀಯ ಸಮಿತಿಯ ಸಭೆ ನಡೆಸಲಾಯಿತು. ಸಭೆಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ರಾಧಾಕೃಷ್ಣನ್ ಹೆಸರು ಫೈನಲ್ ಮಾಡಲಾಗಿದೆ. ತಮಿಳುನಾಡು ಮೂಲದ ಅಭ್ಯರ್ಥಿ ಘೋಷಣೆ ಮೂಲಕ ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆ ನಿಟ್ಟಿನಲ್ಲಿ ಎನ್.ಡಿ.ಎ ಮಾಸ್ಟರ್ ಸ್ಟ್ರೋಕ್ ನೀಡಿದೆ.

ಸಿ.ಪಿ ರಾಧಾಕೃಷ್ಣನ್ ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷರಾಗಿದ್ದು, ಕೊಯಂಬತ್ತೂರು ಕ್ಷೇತ್ರದಿಂದ ಎರಡು ಬಾರಿ ಸಂಸದರೂ ಆಗಿದ್ದರು. 2003ರಿಂದ 2006ರ ಅವಧಿಯಲ್ಲಿ ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿದ್ದ ರಾಧಾಕೃಷ್ಣನ್ 1998 ಮತ್ತು 1999ರಲ್ಲಿ ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಸಂಸದರಾಗಿದ್ದರು. ಆರೆಸ್ಸೆಸ್ ಹಿನ್ನೆಲೆಯಿದ್ದು, ಭಾರತೀಯ ಜನಸಂಘದಿಂದ ರಾಜಕೀಯ ಜೀವನ ಆರಂಭಿಸಿದ್ದ ರಾಧಾಕೃಷ್ಣನ್, ವಾಜಪೇಯಿ ಅವರ ಒಡನಾಡಿಯಾಗಿದ್ದರು. 2024ರ ಜುಲೈ 31ರಿಂದ ಮಹಾರಾಷ್ಟ್ರ ರಾಜ್ಯಪಾಲರಾಗಿ ನೇಮಕಗೊಂಡಿದ್ದರು. ಅದಕ್ಕೂ ಹಿಂದೆ ಜಾರ್ಖಂಡ್ ರಾಜ್ಯಪಾಲರಾಗಿದ್ದರು. ಕೆಲಕಾಲ ತೆಲಂಗಾಣ ರಾಜ್ಯಪಾಲ ಹಾಗೂ ಕೇಂದ್ರಾಡಳಿತ ಪ್ರದೇಶ ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಕೂಡ ಹೆಚ್ಚುವರಿ ಜವಾಬ್ದಾರಿ ಹೊಂದಿದ್ದರು.
ಉಪ ರಾಷ್ಟ್ರಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಆಗಸ್ಟ್ 21 ಕೊನೆಯ ದಿನವಾಗಿದೆ. ಇಂಡಿಯಾ ಒಕ್ಕೂಟದಿಂದ ಅಭ್ಯರ್ಥಿ ಘೋಷಿಸುವ ವಿಚಾರ ಇನ್ನೂ ಚರ್ಚೆಗೆ ಬಂದಿಲ್ಲ.
In a surprise move, the NDA alliance has announced Maharashtra Governor and Tamil Nadu native C.P. Radhakrishnan as its official candidate for the upcoming Vice Presidential election scheduled for September 9.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am