ಬ್ರೇಕಿಂಗ್ ನ್ಯೂಸ್
25-12-20 12:51 pm Headline Karnataka News Network ದೇಶ - ವಿದೇಶ
ಮೀರತ್, ಡಿ.25 : ಜೀನ್ಸ್ ತೊಡಲ್ಲ, ಡ್ಯಾನ್ಸ್ ಮಾಡಲ್ಲವೆಂದ ಪತ್ನಿಗೆ ವ್ಯಕ್ತಿಯೊಬ್ಬ ತ್ರಿಪಲ್ ತಲಾಖ್ ನೀಡಿದ ವಿಲಕ್ಷಣ ಘಟನೆ ಉತ್ತರಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಮೀರತ್ ಬಳಿಯ ಹಾಪುರದ ಪಿಲ್ಖುವಾ ನಿವಾಸಿ ಅನಾಸ್ ತನ್ನ ಪತ್ನಿಗೆ ತಲಾಖ್ ನೀಡಿದ ಭೂಪ. ನಗರದ ಲಿಸಾರಿ ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನ್ಯೂ ಇಸ್ಮಾಯಿಲ್ ನಗರದ ನಿವಾಸಿ ಅಮೀರುದ್ದೀನ್ ಅವರು 8 ವರ್ಷಗಳ ಹಿಂದೆ ತನ್ನ ಮಗಳನ್ನು ಅನಾಸ್ ಗೆ ಮದುವೆ ಮಾಡಿಕೊಟ್ಟಿದ್ದರು.
ದೆಹಲಿಯಲ್ಲಿ ಕೆಲಸ ಮಾಡುತ್ತಿದ್ದ ಅನಾಸ್ ತನ್ನ ಪತ್ನಿಗೆ ಜೀನ್ಸ್ ಹಾಕುವಂತೆ ಒತ್ತಾಯಿಸುತ್ತಿದ್ದ. ಅಲ್ಲದೆ ಡ್ಯಾನ್ಸ್ ಮಾಡು, ಹಾಡು ಹೇಳು ಎಂದೆಲ್ಲ ಕಿರುಕುಳ ನೀಡುತ್ತಿದ್ದ. ಆದರೆ ಪತಿಯ ಈ ವರ್ತನೆಯನ್ನು ಪತ್ನಿ ನಿರಾಕರಿಸುತ್ತಿದ್ದಳು. ಇದರಿಂದ ಸಿಟ್ಟಿಗೆದ್ದ ಅನಾಸ್, ಡಿಸೆಂಬರ್ 22ರಂದು ಪತ್ನಿಗೆ ತ್ರಿವಳಿ ತಲಾಖ್ ನೀಡಿದ್ದಾನೆ.

ಪತ್ನಿಯನ್ನು ಆಕೆಯ ತಾಯಿ ಮನೆಗೆ ಕಳಿಸಿಕೊಟ್ಟಿದ್ದಾನೆ. ತಲಾಖ್ ನೀಡಿದ ಬಳಿಕ ಅನಾಸ್ ನೇರವಾಗಿ ಆಕೆಯ ತವರು ಮನೆಗೆ ಬಂದಿದ್ದಾನೆ. ನಂತರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ. ಕೂಡಲೇ ಪತ್ನಿ ಕುಟುಂಬಸ್ಥರು ಬೆಂಕಿ ನಂದಿಸುವ ಮೂಲಕ ಅನಾಸ್ ನನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಈ ಹಿಂದೆ, ಜೀನ್ಸ್ ತೊಟ್ಟರೆ, ಹಾಡು ಹಾಡಿರೆ, ಡ್ಯಾನ್ಸ್ ಮಾಡಿದರೆ ಇಸ್ಲಾಂ ವಿರುದ್ಧ ಎಂದು ಫತ್ವಾ ನೀಡುವ ಪರಿಪಾಠ ಇತ್ತು. ಕೆಲವು ಮೂಲಭೂತವಾದಿ ಮೌಲ್ವಿಗಳು ಈಗಲೂ ಇಂಥ ಫತ್ವಾ ಹೇರಿಕೆಯನ್ನು ಮಾಡುತ್ತಾರೆ. ಆದರೆ, ಇಲ್ಲೊಬ್ಬ ಮುಸ್ಲಿಂ ಅದರ ವಿರುದ್ಧವೇ ವರ್ತಿಸಿದ್ದಲ್ಲದೆ, ಅದಕ್ಕಾಗಿ ಪತ್ನಿಯನ್ನೇ ಅಗಲುವ ಹಂತಕ್ಕೆ ಹೋಗಿದ್ದಾನೆ.
In a shocking incident reported from the Meerut district of Uttar Pradesh, a man pronounced triple talaq to his wife after she allegedly refused to dance and wear jeans.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm