ಬ್ರೇಕಿಂಗ್ ನ್ಯೂಸ್
25-12-20 12:51 pm Headline Karnataka News Network ದೇಶ - ವಿದೇಶ
ಮೀರತ್, ಡಿ.25 : ಜೀನ್ಸ್ ತೊಡಲ್ಲ, ಡ್ಯಾನ್ಸ್ ಮಾಡಲ್ಲವೆಂದ ಪತ್ನಿಗೆ ವ್ಯಕ್ತಿಯೊಬ್ಬ ತ್ರಿಪಲ್ ತಲಾಖ್ ನೀಡಿದ ವಿಲಕ್ಷಣ ಘಟನೆ ಉತ್ತರಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಮೀರತ್ ಬಳಿಯ ಹಾಪುರದ ಪಿಲ್ಖುವಾ ನಿವಾಸಿ ಅನಾಸ್ ತನ್ನ ಪತ್ನಿಗೆ ತಲಾಖ್ ನೀಡಿದ ಭೂಪ. ನಗರದ ಲಿಸಾರಿ ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನ್ಯೂ ಇಸ್ಮಾಯಿಲ್ ನಗರದ ನಿವಾಸಿ ಅಮೀರುದ್ದೀನ್ ಅವರು 8 ವರ್ಷಗಳ ಹಿಂದೆ ತನ್ನ ಮಗಳನ್ನು ಅನಾಸ್ ಗೆ ಮದುವೆ ಮಾಡಿಕೊಟ್ಟಿದ್ದರು.
ದೆಹಲಿಯಲ್ಲಿ ಕೆಲಸ ಮಾಡುತ್ತಿದ್ದ ಅನಾಸ್ ತನ್ನ ಪತ್ನಿಗೆ ಜೀನ್ಸ್ ಹಾಕುವಂತೆ ಒತ್ತಾಯಿಸುತ್ತಿದ್ದ. ಅಲ್ಲದೆ ಡ್ಯಾನ್ಸ್ ಮಾಡು, ಹಾಡು ಹೇಳು ಎಂದೆಲ್ಲ ಕಿರುಕುಳ ನೀಡುತ್ತಿದ್ದ. ಆದರೆ ಪತಿಯ ಈ ವರ್ತನೆಯನ್ನು ಪತ್ನಿ ನಿರಾಕರಿಸುತ್ತಿದ್ದಳು. ಇದರಿಂದ ಸಿಟ್ಟಿಗೆದ್ದ ಅನಾಸ್, ಡಿಸೆಂಬರ್ 22ರಂದು ಪತ್ನಿಗೆ ತ್ರಿವಳಿ ತಲಾಖ್ ನೀಡಿದ್ದಾನೆ.

ಪತ್ನಿಯನ್ನು ಆಕೆಯ ತಾಯಿ ಮನೆಗೆ ಕಳಿಸಿಕೊಟ್ಟಿದ್ದಾನೆ. ತಲಾಖ್ ನೀಡಿದ ಬಳಿಕ ಅನಾಸ್ ನೇರವಾಗಿ ಆಕೆಯ ತವರು ಮನೆಗೆ ಬಂದಿದ್ದಾನೆ. ನಂತರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾನೆ. ಕೂಡಲೇ ಪತ್ನಿ ಕುಟುಂಬಸ್ಥರು ಬೆಂಕಿ ನಂದಿಸುವ ಮೂಲಕ ಅನಾಸ್ ನನ್ನು ರಕ್ಷಣೆ ಮಾಡಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಈ ಹಿಂದೆ, ಜೀನ್ಸ್ ತೊಟ್ಟರೆ, ಹಾಡು ಹಾಡಿರೆ, ಡ್ಯಾನ್ಸ್ ಮಾಡಿದರೆ ಇಸ್ಲಾಂ ವಿರುದ್ಧ ಎಂದು ಫತ್ವಾ ನೀಡುವ ಪರಿಪಾಠ ಇತ್ತು. ಕೆಲವು ಮೂಲಭೂತವಾದಿ ಮೌಲ್ವಿಗಳು ಈಗಲೂ ಇಂಥ ಫತ್ವಾ ಹೇರಿಕೆಯನ್ನು ಮಾಡುತ್ತಾರೆ. ಆದರೆ, ಇಲ್ಲೊಬ್ಬ ಮುಸ್ಲಿಂ ಅದರ ವಿರುದ್ಧವೇ ವರ್ತಿಸಿದ್ದಲ್ಲದೆ, ಅದಕ್ಕಾಗಿ ಪತ್ನಿಯನ್ನೇ ಅಗಲುವ ಹಂತಕ್ಕೆ ಹೋಗಿದ್ದಾನೆ.
In a shocking incident reported from the Meerut district of Uttar Pradesh, a man pronounced triple talaq to his wife after she allegedly refused to dance and wear jeans.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm