ಬ್ರೇಕಿಂಗ್ ನ್ಯೂಸ್
20-08-25 11:01 am HK News Desk ದೇಶ - ವಿದೇಶ
ನವದೆಹಲಿ, ಆ.20 : ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ತನ್ನ ನಿವಾಸದಲ್ಲಿ ಜನಸಂಪರ್ಕ ಕಾರ್ಯಕ್ರಮದಲ್ಲಿದ್ದಾಗ ಅವರ ಮೇಲೆ ಯುವಕನೊಬ್ಬ ಏಕಾಏಕಿ ಹಲ್ಲೆ ನಡೆಸಿದ ಘಡನೆ ನಡೆದಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಡಲೇ ಆರೋಪಿ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರೇಖಾ ಗುಪ್ತಾ ಅವರು ತಮ್ಮ ಅಧಿಕೃತ ನಿವಾಸದಲ್ಲಿ 'ಜನ್ ಸುನ್ ವಾಯಿ' (ಜನರ ಅಹವಾಲು) ಕಾರ್ಯಕ್ರಮದಲ್ಲಿದ್ದಾಗ ಅಂದಾಜು 30ರ ಹರೆಯದ ವ್ಯಕ್ತಿಯೊಬ್ಬ ಕೋರ್ಟ್ ಕೇಸ್ ಸಂಬಂಧಿಸಿ ದಾಖಲೆ ಪತ್ರಗಳನ್ನು ಹಿಡಿದು ಬಂದಿದ್ದು ಏಕಾಏಕಿ ಸಿಟ್ಟಿಗೆದ್ದು ಹಲ್ಲೆ ನಡೆಸಿದ್ದಾನೆ. ತಕ್ಷಣ ಪೊಲೀಸರು ಆತನನ್ನು ಸೆರೆಹಿಡಿದು ವಿಚಾರಣೆ ನಡೆಸಿದ್ದಾರೆ. ದೂರು ಹೇಳುವ ನೆಪದಲ್ಲಿ ಬಂದಿದ್ದು ಇದರ ನಡುವಲ್ಲೇ ಕೈಯನ್ನು ಹಿಡಿದೆಳೆದು ಕೂದಲು ಹಿಡಿದು ಹಲ್ಲೆ ನಡೆಸಿದ್ದಾನೆ. ಇದರಿಂದ ರೇಖಾ ಗುಪ್ತಾ ತನ್ನ ಕುರ್ಚಿಯಿಂದ ಆಯತಪ್ಪಿ ಕೆಳಕ್ಕೆ ಬಿದ್ದಿದ್ದಾರೆ.
ಆಗಂತುಕ ವ್ಯಕ್ತಿಯನ್ನು ರಾಜೇಶ್ ಕಿಮ್ಜಿ ಎಂದು ಗುರುತಿಸಲಾಗಿದ್ದು ಹಲ್ಲೆ ಉದ್ದೇಶ ಏನೆಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಿಎಂ ರೇಖಾ ಗುಪ್ತಾ ಅವರ ಮೇಲಿನ ದಾಳಿಯನ್ನು ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್ದೇವ ಮತ್ತು ದೆಹಲಿ ಕಾಂಗ್ರೆಸ್ ಮುಖ್ಯಸ್ಥ ದೇವೇಂದರ್ ಯಾದವ್ ಖಂಡಿಸಿದ್ದಾರೆ.
ಜನ್ ಸುನ್ವಾಯಿ ಕಾರ್ಯಕ್ರಮದಲ್ಲಿ ಸಾರ್ವಜನಿಕರು ನೇರವಾಗಿ ಮುಖ್ಯಮಂತ್ರಿಗೆ ಅಹವಾಲು, ದೂರುಗಳನ್ನು ಸಲ್ಲಿಸಬಹುದು. ಬುಧವಾರ ಬೆಳಗ್ಗೆ ಎಂದಿನಂತೆ ಸಿಎಂ ಗುಪ್ತಾ ತನ್ನ ಕೆಲಸದಲ್ಲಿ ನಿರತವಾಗಿದ್ದಾಗಲೇ ಯುವಕ ಹಲ್ಲೆ ನಡೆಸಿದ್ದಾನೆ. ಹಲ್ಲೆ ಘಟನೆ ದೆಹಲಿಯಲ್ಲಿ ಭದ್ರತಾ ವೈಫಲ್ಯದ ಬಗ್ಗೆ ಆತಂಕ ಹೆಚ್ಚಿಸಿದೆ. ಮುಖ್ಯಮಂತ್ರಿಗೇ ಭದ್ರತೆ ಕೊಡುವಲ್ಲಿ ದೆಹಲಿ ಪೊಲೀಸರು ವಿಫಲರಾದರೇ ಎಂಬ ಪ್ರಶ್ನೆ ಎದುರಾಗಿದೆ.
Delhi Chief Minister Rekha Gupta was attacked by an intruder while interacting with the public at her official residence during a Jan Sunwai (public grievance hearing) program on Wednesday. She was immediately rushed to the hospital, while police apprehended the accused on the spot.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm