ಬ್ರೇಕಿಂಗ್ ನ್ಯೂಸ್
20-08-25 11:01 am HK News Desk ದೇಶ - ವಿದೇಶ
ನವದೆಹಲಿ, ಆ.20 : ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ತನ್ನ ನಿವಾಸದಲ್ಲಿ ಜನಸಂಪರ್ಕ ಕಾರ್ಯಕ್ರಮದಲ್ಲಿದ್ದಾಗ ಅವರ ಮೇಲೆ ಯುವಕನೊಬ್ಬ ಏಕಾಏಕಿ ಹಲ್ಲೆ ನಡೆಸಿದ ಘಡನೆ ನಡೆದಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಡಲೇ ಆರೋಪಿ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರೇಖಾ ಗುಪ್ತಾ ಅವರು ತಮ್ಮ ಅಧಿಕೃತ ನಿವಾಸದಲ್ಲಿ 'ಜನ್ ಸುನ್ ವಾಯಿ' (ಜನರ ಅಹವಾಲು) ಕಾರ್ಯಕ್ರಮದಲ್ಲಿದ್ದಾಗ ಅಂದಾಜು 30ರ ಹರೆಯದ ವ್ಯಕ್ತಿಯೊಬ್ಬ ಕೋರ್ಟ್ ಕೇಸ್ ಸಂಬಂಧಿಸಿ ದಾಖಲೆ ಪತ್ರಗಳನ್ನು ಹಿಡಿದು ಬಂದಿದ್ದು ಏಕಾಏಕಿ ಸಿಟ್ಟಿಗೆದ್ದು ಹಲ್ಲೆ ನಡೆಸಿದ್ದಾನೆ. ತಕ್ಷಣ ಪೊಲೀಸರು ಆತನನ್ನು ಸೆರೆಹಿಡಿದು ವಿಚಾರಣೆ ನಡೆಸಿದ್ದಾರೆ. ದೂರು ಹೇಳುವ ನೆಪದಲ್ಲಿ ಬಂದಿದ್ದು ಇದರ ನಡುವಲ್ಲೇ ಕೈಯನ್ನು ಹಿಡಿದೆಳೆದು ಕೂದಲು ಹಿಡಿದು ಹಲ್ಲೆ ನಡೆಸಿದ್ದಾನೆ. ಇದರಿಂದ ರೇಖಾ ಗುಪ್ತಾ ತನ್ನ ಕುರ್ಚಿಯಿಂದ ಆಯತಪ್ಪಿ ಕೆಳಕ್ಕೆ ಬಿದ್ದಿದ್ದಾರೆ.
ಆಗಂತುಕ ವ್ಯಕ್ತಿಯನ್ನು ರಾಜೇಶ್ ಕಿಮ್ಜಿ ಎಂದು ಗುರುತಿಸಲಾಗಿದ್ದು ಹಲ್ಲೆ ಉದ್ದೇಶ ಏನೆಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಿಎಂ ರೇಖಾ ಗುಪ್ತಾ ಅವರ ಮೇಲಿನ ದಾಳಿಯನ್ನು ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್ದೇವ ಮತ್ತು ದೆಹಲಿ ಕಾಂಗ್ರೆಸ್ ಮುಖ್ಯಸ್ಥ ದೇವೇಂದರ್ ಯಾದವ್ ಖಂಡಿಸಿದ್ದಾರೆ.
ಜನ್ ಸುನ್ವಾಯಿ ಕಾರ್ಯಕ್ರಮದಲ್ಲಿ ಸಾರ್ವಜನಿಕರು ನೇರವಾಗಿ ಮುಖ್ಯಮಂತ್ರಿಗೆ ಅಹವಾಲು, ದೂರುಗಳನ್ನು ಸಲ್ಲಿಸಬಹುದು. ಬುಧವಾರ ಬೆಳಗ್ಗೆ ಎಂದಿನಂತೆ ಸಿಎಂ ಗುಪ್ತಾ ತನ್ನ ಕೆಲಸದಲ್ಲಿ ನಿರತವಾಗಿದ್ದಾಗಲೇ ಯುವಕ ಹಲ್ಲೆ ನಡೆಸಿದ್ದಾನೆ. ಹಲ್ಲೆ ಘಟನೆ ದೆಹಲಿಯಲ್ಲಿ ಭದ್ರತಾ ವೈಫಲ್ಯದ ಬಗ್ಗೆ ಆತಂಕ ಹೆಚ್ಚಿಸಿದೆ. ಮುಖ್ಯಮಂತ್ರಿಗೇ ಭದ್ರತೆ ಕೊಡುವಲ್ಲಿ ದೆಹಲಿ ಪೊಲೀಸರು ವಿಫಲರಾದರೇ ಎಂಬ ಪ್ರಶ್ನೆ ಎದುರಾಗಿದೆ.
Delhi Chief Minister Rekha Gupta was attacked by an intruder while interacting with the public at her official residence during a Jan Sunwai (public grievance hearing) program on Wednesday. She was immediately rushed to the hospital, while police apprehended the accused on the spot.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm