ಬ್ರೇಕಿಂಗ್ ನ್ಯೂಸ್
20-08-25 10:56 pm HK News Desk ದೇಶ - ವಿದೇಶ
ತಿರುವನಂತಪುರಂ, ಆ.20 : ಹೆದ್ದಾರಿ ಕಾಮಗಾರಿ ಪೂರ್ತಿಯಾಗಿರದಿದ್ದರೆ, ಗುಂಡಿಗಳು ಬಿದ್ದು ವಾಹನ ಸಂಚಾರಕ್ಕೆ ದುಸ್ತರವಾಗಿದ್ದರೆ, ಟ್ರಾಫಿಕ್ ಸಮಸ್ಯೆಗಳಿದ್ದಲ್ಲಿ ಅಂತಹ ಹೆದ್ದಾರಿಯಲ್ಲಿ ಟೋಲ್ ಕಲೆಕ್ಷನ್ ಮಾಡುವುದು ಸರಿಯಲ್ಲ. ಜನರು ಅಂತಹ ಹೆದ್ದಾರಿಗಳಲ್ಲಿ ಟೋಲ್ ಕಟ್ಟಬೇಕೆಂದು ಕಡ್ಡಾಯ ಮಾಡುವಂತಿಲ್ಲ ಎಂದು ಕೇರಳ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.
ತೃಶ್ಶೂರು ಜಿಲ್ಲೆಯ ಪಳ್ಳಿಯೆಕ್ಕರ ಟೋಲ್ ಪ್ಲಾಜಾ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಹೈಕೋರ್ಟ್ ಈ ತೀರ್ಪು ನೀಡಿತ್ತು. ಹೈಕೋರ್ಟ್ ತೀರ್ಪು ಪ್ರಶ್ನಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಹೆದ್ದಾರಿ ಕಾಮಗಾರಿ ನಿರ್ವಹಿಸುತ್ತಿರುವ ಕಂಪನಿಯವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಟೋಲ್ ಪ್ಲಾಜಾ ನಿಲ್ಲಿಸುವುದರಿಂದ ಆರ್ಥಿಕ ನಷ್ಟವಾಗುತ್ತದೆ ಎಂಬ ಅಹವಾಲನ್ನು ಕೋರ್ಟ್ ತಳ್ಳಿಹಾಕಿದೆ.
ಜನರು ರಸ್ತೆ ಸಂಚಾರಕ್ಕೆ ತೆರಿಗೆ ಕಟ್ಟಿಯೇ ವಾಹನ ಇಳಿಸುತ್ತಾರೆ. ಹಾಗಿರುವಾಗ ಹೆದ್ದಾರಿಯೇ ಸುಸ್ಥಿತಿಯಲ್ಲಿಲ್ಲ ಎಂಬ ಸಂದರ್ಭದಲ್ಲಿ ಮತ್ತೆ ಶುಲ್ಕ ಕಟ್ಟುವಂತೆ ಅವರಿಗೆ ಹೊರೆ ಹೊರಿಸುವುದು ಸರಿಯಲ್ಲ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ ಬಿ.ಆರ್ ಗವಾಯಿ, ಕೆ.ವಿನೋದ್ ಚಂದ್ರನ್ ಮತ್ತು ಎನ್.ವಿ ಅಂಜಾರಿಯಾ ಅವರಿದ್ದ ಪೀಠವು ಅಭಿಪ್ರಾಯಪಟ್ಟಿದೆ. ಈ ಕುರಿತು ಕೇರಳ ಹೈಕೋರ್ಟ್ ಆ.6ರಂದು ತೀರ್ಪು ನೀಡಿತ್ತು. ಹೈಕೋರ್ಟ್ ನೀಡಿರುವ ಕಾರಣಗಳನ್ನು ನಾವು ನಿರಾಕರಿಸಲು ಬರುವುದಿಲ್ಲ. ಜನಸಾಮಾನ್ಯರ ಹಿತದೃಷ್ಟಿಯಿಂದ ಈ ರೀತಿಯ ತೀರ್ಪು ನೀಡಿದ್ದನ್ನು ನಾವು ಎತ್ತಿ ಹಿಡಿಯುತ್ತೇವೆ. ಹೆದ್ದಾರಿ ಸುಸ್ಥಿತಿಯಲ್ಲಿದ್ದರೆ ಮಾತ್ರ ಜನರು ಶುಲ್ಕ ಕಟ್ಟಿ ಹೋದರೆ ಸಾಕು ಎಂದು ಅಭಿಪ್ರಾಯಿಸಿದೆ.
65 ಕಿಮೀ ಉದ್ದದ ಹೆದ್ದಾರಿಯಲ್ಲಿ 5 ಕಿಮೀ ರಸ್ತೆ ಆಗಿಲ್ಲ ಎಂದರೂ ಜನರಿಗೆ ಟ್ರಾಫಿಕ್ ಸಮಸ್ಯೆ ತಂದೊಡ್ಡುತ್ತದೆ. ಅಂಡರ್ ಪಾಸ್ ಆಗಿಲ್ಲ, ಕಾಮಗಾರಿ ನಡೆಸುತ್ತಿದ್ದೇವೆ ಎನ್ನುವುದು ನಿರ್ವಹಣೆ ವಿಚಾರದಲ್ಲಿ ಕಪ್ಪು ಚುಕ್ಕೆ ಆಗುತ್ತದೆ. ಇಂತಹ ಹೆದ್ದಾರಿಯನ್ನು ದಾಟುವುದು ಗಂಟೆಗಳಷ್ಟು ವಿಳಂಬಕ್ಕೆ ಕಾರಣವಾಗುತ್ತದೆ ಎಂದು ಹೇಳಿರುವ ಕೋರ್ಟ್, ಅರ್ಜಿದಾರರ ವಾದವನ್ನು ನಿರಾಕರಿಸಿದೆ. ಇಡಪ್ಪಳ್ಳಿ-ಮನ್ನುತ್ತಿ ಹೆದ್ದಾರಿಯಲ್ಲಿ ಟ್ರಾಫಿಕ್ ಸಮಸ್ಯೆಯಿಂದಾಗಿ ಇತ್ತೀಚೆಗೆ ವೀಕೆಂಡ್ ನಲ್ಲಿ ವಾಹನ ಸಂಚಾರ 12 ಗಂಟೆ ವಿಳಂಬಕ್ಕೆ ಕಾರಣವಾಗಿತ್ತು. ಇಂತಹ ಹೆದ್ದಾರಿಗೆ ಜನರು ಯಾಕೆ 150 ರೂ. ಶುಲ್ಕ ಕಟ್ಟಬೇಕು ಎಂದು ಕೋರ್ಟ್ ಪ್ರಶ್ನಿಸಿದೆ.
ಹಿರಿಯ ವಕೀಲ ಶ್ಯಾಮ್ ದಿವಾನ್ ಮತ್ತು ಕೇಂದ್ರ ಸರಕಾರದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೆದ್ದಾರಿ ಪ್ರಾಧಿಕಾರ ಪರವಾಗಿ ಟೋಲ್ ಪ್ಲಾಜಾ ನಿಲ್ಲಿಸುವುದರಿಂದ ದಿನಕ್ಕೆ 49 ಲಕ್ಷದಷ್ಟು ನಷ್ಟವಾಗುತ್ತದೆ. ಹೆದ್ದಾರಿ ನಿರ್ವಹಣೆಗೆ ಹಣಕಾಸು ಅತ್ಯಗತ್ಯ ಎಂದು ಹೇಳಿದರೂ ಕೋರ್ಟ್ ಕೇಳಲಿಲ್ಲ. ಮೂರನೇ ವ್ಯಕ್ತಿಗೆ ಗುತ್ತಿಗೆ ಕೊಟ್ಟು ಬ್ಲಾಕ್ ಸ್ಪಾಟ್ ಆಗುವುದಕ್ಕೆ ಯಾಕೆ ಹೆದ್ದಾರಿ ಪ್ರಾಧಿಕಾರ ಅವಕಾಶ ಕೊಡುತ್ತದೆ. ರಸ್ತೆ ನಿರ್ವಹಣೆ ಮಾಡುವುದು ನಿಮ್ಮ ಜವಾಬ್ದಾರಿಯಲ್ಲವೇ ಎಂದು ಪ್ರಶ್ನಿಸಿದೆ.
In a significant judgment, the Supreme Court has upheld the Kerala High Court's ruling that toll collection on incomplete or poorly maintained highways is unjustified. If roads have potholes, incomplete construction, or cause severe traffic congestion, the public cannot be compelled to pay tolls, the apex court observed.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm