ಬ್ರೇಕಿಂಗ್ ನ್ಯೂಸ್
22-08-25 08:07 pm HK News Desk ದೇಶ - ವಿದೇಶ
ಕೊಲಂಬೊ, ಆ.22: ಸರ್ಕಾರಿ ಹಣವನ್ನು ದುರ್ಬಳಕೆ ಮಾಡಿಕೊಂಡು ಬ್ರಿಟನ್ ತೆರಳಿದ್ದರು ಎಂಬ ಆರೋಪದಲ್ಲಿ ಶ್ರೀಲಂಕಾದ ಮಾಜಿ ಅಧ್ಯಕ್ಷ 76 ವರ್ಷದ ರನಿಲ್ ವಿಕ್ರಮಸಿಂಘೆ ಅವರನ್ನು ಶುಕ್ರವಾರ ಕೊಲಂಬೋದಲ್ಲಿ ಸಿಐಡಿ ವಿಭಾಗದ ಅಧಿಕಾರಿಗಳು ಬಂಧಿಸಿದ್ದಾರೆ.
ರನಿಲ್ ವಿಕ್ರಮಸಿಂಘೆ ಅವರು ಶ್ರೀಲಂಕಾ ಅಧ್ಯಕ್ಷರಾಗಿದ್ದಾಗ ಸೆಪ್ಟೆಂಬರ್ 2023ರಲ್ಲಿ ಬ್ರಿಟನ್ ವಿಶ್ವವಿದ್ಯಾಲಯದಲ್ಲಿ ತಮ್ಮ ಪತ್ನಿಯ ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ಲಂಡನ್ಗೆ ಭೇಟಿ ನೀಡಲು ಸರ್ಕಾರಿ ಹಣವನ್ನು ಬಳಸಿಕೊಂಡಿದ್ದಾರೆಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಕೊಲಂಬೋ ಸಿಐಡಿ ಕಚೇರಿಯಲ್ಲಿ ಹೇಳಿಕೆ ನೀಡಲು ರನಿಲ್ ಅವರು ಶುಕ್ರವಾರ ಬಂದಿದ್ದಾಗಲೇ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. 76 ವರ್ಷದ ವಿಕ್ರಮಸಿಂಘೆ ಅವರನ್ನು ಸಿಐಡಿ ಪ್ರಧಾನ ಕಚೇರಿಯಲ್ಲಿ ಬಂಧಿಸಲಾಗಿದೆ.
ವಿಕ್ರಮಸಿಂಘೆ ಅವರು ಬ್ರಿಟಿಷ್ ವಿಶ್ವವಿದ್ಯಾಲಯದಲ್ಲಿ ತಮ್ಮ ಪತ್ನಿ ಪ್ರೊಫೆಸರ್ ಮೈತ್ರಿ ಅವರ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಸೆಪ್ಟೆಂಬರ್ 2023ರಲ್ಲಿ ಲಂಡನ್ಗೆ ಭೇಟಿ ನೀಡಲು ಸರ್ಕಾರದ ಹಣ ಬಳಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ವಿಕ್ರಮಸಿಂಘೆ ಅವರು ಅಧಿಕೃತ ಕಾರ್ಯಕ್ರಮದ ನಂತರ ಅಮೆರಿಕದಿಂದ ಹಿಂತಿರುಗುತ್ತಿದ್ದರು ಮತ್ತು ಅವರ ಪತ್ನಿಯ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸರ್ಕಾರದ ವೆಚ್ಚದಲ್ಲಿ ಲಂಡನ್ಗೆ ತೆರಳಿದ್ದರು ಎಂದು ಆರೋಪಿಸಲಾಗಿದೆ.
ಆರು ಬಾರಿ ಲಂಕಾ ಪ್ರಧಾನಿಯಾಗಿದ್ದ ರನಿಲ್ ವಿಕ್ರಮಸಿಂಘೆ ಅವರನ್ನು 2022ರ ಜುಲೈನಲ್ಲಿ ಆರ್ಥಿಕ ತುರ್ತುಸ್ಥಿತಿ ಏರ್ಪಟ್ಟಾಗ ಅಧ್ಯಕ್ಷ ಹುದ್ದೆಗೇರಿಸಲಾಗಿತ್ತು. ಸೆಪ್ಟೆಂಬರ್ 2024 ರ ವರೆಗೆ ಅವರು ಶ್ರೀಲಂಕಾ ಅಧ್ಯಕ್ಷರಾಗಿದ್ದರು. ಇದೇ ಸಂದರ್ಭದಲ್ಲಿ ತನ್ನ ಖಾಸಗಿ ಕಾರ್ಯಕ್ರಮಕ್ಕಾಗಿ ಬ್ರಿಟನ್ ತೆರಳಿದ್ದು ಈಗ ಅವರಿಗೆ ಮುಳುವಾಗಿದೆ. ವಿಕ್ರಮಸಿಂಘೆ ಅವರು ಲಂಕಾದ ಸಿರಿವಂತ ಕುಟುಂಬದ ವ್ಯಕ್ತಿಯಾಗಿದ್ದು ತನ್ನ 29ನೇ ವಯಸ್ಸಿನಲ್ಲೇ ಸಚಿವ ಸ್ಥಾನಕ್ಕೇರಿ ಸಾರ್ವಜನಿಕ ಜೀವನ ಆರಂಭಿಸಿದ್ದರು.
Former Sri Lankan president Ranil Wickremesinghe was arrested on Friday for allegedly "misusing government funds".
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm