ಬ್ರೇಕಿಂಗ್ ನ್ಯೂಸ್
22-08-25 08:07 pm HK News Desk ದೇಶ - ವಿದೇಶ
ಕೊಲಂಬೊ, ಆ.22: ಸರ್ಕಾರಿ ಹಣವನ್ನು ದುರ್ಬಳಕೆ ಮಾಡಿಕೊಂಡು ಬ್ರಿಟನ್ ತೆರಳಿದ್ದರು ಎಂಬ ಆರೋಪದಲ್ಲಿ ಶ್ರೀಲಂಕಾದ ಮಾಜಿ ಅಧ್ಯಕ್ಷ 76 ವರ್ಷದ ರನಿಲ್ ವಿಕ್ರಮಸಿಂಘೆ ಅವರನ್ನು ಶುಕ್ರವಾರ ಕೊಲಂಬೋದಲ್ಲಿ ಸಿಐಡಿ ವಿಭಾಗದ ಅಧಿಕಾರಿಗಳು ಬಂಧಿಸಿದ್ದಾರೆ.
ರನಿಲ್ ವಿಕ್ರಮಸಿಂಘೆ ಅವರು ಶ್ರೀಲಂಕಾ ಅಧ್ಯಕ್ಷರಾಗಿದ್ದಾಗ ಸೆಪ್ಟೆಂಬರ್ 2023ರಲ್ಲಿ ಬ್ರಿಟನ್ ವಿಶ್ವವಿದ್ಯಾಲಯದಲ್ಲಿ ತಮ್ಮ ಪತ್ನಿಯ ಪದವಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಲು ಲಂಡನ್ಗೆ ಭೇಟಿ ನೀಡಲು ಸರ್ಕಾರಿ ಹಣವನ್ನು ಬಳಸಿಕೊಂಡಿದ್ದಾರೆಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಕೊಲಂಬೋ ಸಿಐಡಿ ಕಚೇರಿಯಲ್ಲಿ ಹೇಳಿಕೆ ನೀಡಲು ರನಿಲ್ ಅವರು ಶುಕ್ರವಾರ ಬಂದಿದ್ದಾಗಲೇ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. 76 ವರ್ಷದ ವಿಕ್ರಮಸಿಂಘೆ ಅವರನ್ನು ಸಿಐಡಿ ಪ್ರಧಾನ ಕಚೇರಿಯಲ್ಲಿ ಬಂಧಿಸಲಾಗಿದೆ.
ವಿಕ್ರಮಸಿಂಘೆ ಅವರು ಬ್ರಿಟಿಷ್ ವಿಶ್ವವಿದ್ಯಾಲಯದಲ್ಲಿ ತಮ್ಮ ಪತ್ನಿ ಪ್ರೊಫೆಸರ್ ಮೈತ್ರಿ ಅವರ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಸೆಪ್ಟೆಂಬರ್ 2023ರಲ್ಲಿ ಲಂಡನ್ಗೆ ಭೇಟಿ ನೀಡಲು ಸರ್ಕಾರದ ಹಣ ಬಳಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ವಿಕ್ರಮಸಿಂಘೆ ಅವರು ಅಧಿಕೃತ ಕಾರ್ಯಕ್ರಮದ ನಂತರ ಅಮೆರಿಕದಿಂದ ಹಿಂತಿರುಗುತ್ತಿದ್ದರು ಮತ್ತು ಅವರ ಪತ್ನಿಯ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸರ್ಕಾರದ ವೆಚ್ಚದಲ್ಲಿ ಲಂಡನ್ಗೆ ತೆರಳಿದ್ದರು ಎಂದು ಆರೋಪಿಸಲಾಗಿದೆ.
ಆರು ಬಾರಿ ಲಂಕಾ ಪ್ರಧಾನಿಯಾಗಿದ್ದ ರನಿಲ್ ವಿಕ್ರಮಸಿಂಘೆ ಅವರನ್ನು 2022ರ ಜುಲೈನಲ್ಲಿ ಆರ್ಥಿಕ ತುರ್ತುಸ್ಥಿತಿ ಏರ್ಪಟ್ಟಾಗ ಅಧ್ಯಕ್ಷ ಹುದ್ದೆಗೇರಿಸಲಾಗಿತ್ತು. ಸೆಪ್ಟೆಂಬರ್ 2024 ರ ವರೆಗೆ ಅವರು ಶ್ರೀಲಂಕಾ ಅಧ್ಯಕ್ಷರಾಗಿದ್ದರು. ಇದೇ ಸಂದರ್ಭದಲ್ಲಿ ತನ್ನ ಖಾಸಗಿ ಕಾರ್ಯಕ್ರಮಕ್ಕಾಗಿ ಬ್ರಿಟನ್ ತೆರಳಿದ್ದು ಈಗ ಅವರಿಗೆ ಮುಳುವಾಗಿದೆ. ವಿಕ್ರಮಸಿಂಘೆ ಅವರು ಲಂಕಾದ ಸಿರಿವಂತ ಕುಟುಂಬದ ವ್ಯಕ್ತಿಯಾಗಿದ್ದು ತನ್ನ 29ನೇ ವಯಸ್ಸಿನಲ್ಲೇ ಸಚಿವ ಸ್ಥಾನಕ್ಕೇರಿ ಸಾರ್ವಜನಿಕ ಜೀವನ ಆರಂಭಿಸಿದ್ದರು.
Former Sri Lankan president Ranil Wickremesinghe was arrested on Friday for allegedly "misusing government funds".
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm