ಬ್ರೇಕಿಂಗ್ ನ್ಯೂಸ್
29-08-25 10:56 am HK News Desk ದೇಶ - ವಿದೇಶ
ನವದೆಹಲಿ, ಆ.29 : ದೇಶದಲ್ಲಿ ಹಿಂದು - ಮುಸ್ಲಿಮರ ಡಿಎನ್ಎ ಒಂದೇ ಆಗಿದೆ. ದೇಶದ ಹಿತದೃಷ್ಟಿಯಿಂದ ಪ್ರತೀ ಭಾರತೀಯ ಕುಟುಂಬಗಳು ಸರಾಸರಿ ಮೂರು ಮಕ್ಕಳನ್ನು ಹೊಂದಲೇಬೇಕು. ಇದು ದೇಶಕ್ಕೂ ಒಳ್ಳೆಯದು, ಕುಟುಂಬಕ್ಕೂ ಒಳ್ಳೆಯದು. ಅದಕ್ಕಿಂತ ಕಡಿಮೆ ಜನಸಂಖ್ಯೆ ಪ್ರಮಾಣ ಇದ್ದರೆ ಅಂತಹ ಕುಟುಂಬಗಳು ನಶಿಸುತ್ತವೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಆರ್ಎಸ್ಎಸ್ 100 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮೂರಕ್ಕಿಂತ ಕಡಿಮೆ ಜನನ ಪ್ರಮಾಣ ದರ ಹೊಂದಿರುವ ಸಮುದಾಯಗಳು ನಿಧಾನವಾಗಿ ನಶಿಸಿಹೋಗುತ್ತವೆ ಎಂದು ತಜ್ಞರು ಹೇಳುತ್ತಾರೆ. ಎಲ್ಲಾ ದೇಶಗಳಲ್ಲೂ ಈ ಪ್ರಕ್ರಿಯೆ ಕಂಡುಬರುತ್ತಿದೆ. ಆದ್ದರಿಂದ ಎಲ್ಲ ಕುಟುಂಬಗಳು ಮೂರಕ್ಕಿಂತ ಹೆಚ್ಚಿನ ಜನನ ಪ್ರಮಾಣವನ್ನು ಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಸರಿಯಾದ ವಯಸ್ಸಿನಲ್ಲಿ ಮದ್ವೆಯಾಗೋದ್ರಿಂದ ಮೂವರು ಮಕ್ಕಳನ್ನು ಹೊಂದಬಹುದು. ಇದರಿಂದ ಪೋಷಕರು ಮತ್ತು ಮಕ್ಕಳು ಇಬ್ಬರೂ ಆರೋಗ್ಯವಾಗಿರ್ತಾರೆ ಅಂತ ವೈದ್ಯರೇ ಹೇಳಿದ್ದಾರೆ. ಮೂವರು ಒಡಹುಟ್ಟಿದ ಮಕ್ಕಳು ಇರುವ ಮನೆಗಳಲ್ಲಿ ಅಹಂಕಾರ ನಿಯಂತ್ರಿಸೋದನ್ನ ಕಲಿಯುತ್ತಾರೆ. ಇದರಿಂದ ಭವಿಷ್ಯದಲ್ಲಿ ಅವರಿಗೆ ಯಾವುದೇ ತೊಂದರೆ ಇರೋದಿಲ್ಲ. ಇದಕ್ಕೂ ಕೂಡ ವೈದ್ಯರೇ ಹೇಳಿರುವುದಾಗಿ ತಿಳಿಸಿದರು.
ಪ್ರಸ್ತುತ ದೇಶದ ಜನಸಂಖ್ಯೆ 2.1 ಜನನ ದರವನ್ನ ಶಿಫಾರಸು ಮಾಡುತ್ತದೆ. ಇದು ಉತ್ತಮ ನೀತಿಯಾಗಿದೆ. ಈ ನೀತಿ ಪ್ರಕಾರ ಯಾರೊಬ್ಬರೂ ಒಂದು ಮಗು ಹೊಂದಲು ಸಾಧ್ಯವಿಲ್ಲ. ಗಣಿತದಲ್ಲಿ 2.1 ಅಂದರೆ 2 ಆಗುತ್ತದೆ. ಆದ್ದರಿಂದ ಮೂರು ಮಕ್ಕಳ ನೀತಿ ಉತ್ತಮ ಎಂದು ಮೋಹನ್ ಭಾಗವತ್ ಹೇಳಿದರು.
ಜನಸಂಖ್ಯಾ ಮಾದರಿಗಳ ಮೇಲೆ ಪರಿಣಾಮ ಬೀರುವ ಕೆಲವೊಂದು ಅಂಶಗಳನ್ನು ಮೋಹನ್ ಭಾಗವತ್ ಗುರುತಿಸಿದ್ದು, ಮತಾಂತರವೂ ಒಂದು ಸಮಸ್ಯೆಯಾಗಿದೆ ಎಂದು ಹೇಳಿದ್ದಾರೆ. ಮತಾಂತರ ದೇಶದ ಜನಂಖ್ಯೆ ಮೇಲೆ ಪರಿಣಾಮ ಬೀರುತ್ತದೆ. ಆದ್ರೆ ಕ್ಯಾಥೊಲಿಕರು, ಉಲೇಮಾಗಳು ನಾವು ಮತಾಂತರದಲ್ಲಿ ತೊಡಗುವುದಿಲ್ಲ ಎನ್ನುತ್ತಾರೆ ಎಂದು ವಿವರಿಸಿದರು.
ಭಾರತ ಉಪಖಂಡದಲ್ಲಿ ಹಿಂದೂ – ಮುಸ್ಲಿಂ ಇಬ್ಬರ ಡಿಎನ್ಎ ಒಂದೇ ಆಗಿದೆ. ಇದೇ ವೇಳೆ ಹಿಂದೂ ಮತ್ತು ಮುಸ್ಲಿಮರ ನಡುವಿನ ಸಂಬಂಧಗಳನ್ನುದ್ದೇಶಿಸಿ ಮಾತನಾಡಿದ ಭಾಗವತ್, ಹಿಂದೂ ಮುಸ್ಲಿಮರು ಮೂಲಭೂತವಾಗಿ ಪ್ರತ್ಯೇಕ ಅಲ್ಲ. ನಮ್ಮ ನಡುವೆ ಏಕತೆಯಿದೆ. ಆದ್ರೆ ಒಂದು ಭಯವನ್ನು ಸೃಷ್ಟಿಸಲಾಗಿದೆ. ಹಿಂದೂಗಳು ಎಲ್ಲವನ್ನೂ ತೆಗೆದುಕೊಳ್ತಾರೆ ಅಂತ ಭಾವಿಸುವಂತೆ ಮಾಡಲಾಗಿದೆ. ಆದ್ರೆ ವಾಸ್ತವದಲ್ಲಿ ನಮ್ಮ ಗುರುತು ಏಕೀಕೃತವಾಗಿದೆ. ಸಾಂಸ್ಕೃತಿಕವಾಗಿ, ನಾವೆಲ್ಲ ಹಿಂದೂಗಳು ಎಂದು ಬಣ್ಣಿಸಿದರು.
Rashtriya Swayamsevak Sangh (RSS) chief Mohan Bhagwat has said that every Indian family must have at least three children, warning that families with fewer children may gradually disappear.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm