ಬ್ರೇಕಿಂಗ್ ನ್ಯೂಸ್
29-08-25 01:47 pm HK News Desk ದೇಶ - ವಿದೇಶ
ಟೋಕಿಯೋ, ಆ.29 : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಬೆಳಗ್ಗೆ ಜಪಾನ್ಗೆ ಭೇಟಿ ನೀಡಿದ್ದು, ಅಲ್ಲಿನ ಜಪಾನ್ ಸಮುದಾಯವು ಗಾಯತ್ರಿ ಮಂತ್ರದ ಉಚ್ಛಾರದೊಂದಿಗೆ ಮೋದಿಯವರನ್ನು ಸ್ವಾಗತಿಸಿದೆ. ಗಾಯತ್ರಿ ಮಂತ್ರದ ಜಪದೊಂದಿಗೆ ಟೋಕಿಯೋದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಾಂಸ್ಕೃತಿಕವಾಗಿ ಸ್ವಾಗತ ಕೋರಲಾಯಿತು. ಅನೇಕ ಜಾನಪದ ಹಾಗೂ ಮಂತ್ರ, ಶ್ಲೋಕಗಳ ಮೂಲಕ ಜಪಾನಿಯರು ಮೋದಿಯವರನ್ನು ತಮ್ಮ ದೇಶಕ್ಕೆ ಬರಮಾಡಿಕೊಂಡರು.
ಟೋಕಿಯೋ ವಿಮಾನ ನಿಲ್ದಾಣದಲ್ಲಿ ಜಪಾನಿನ ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿದ್ದು, ಅಲ್ಲಿನ ಭಾರತೀಯ ವಲಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಮೋದಿಯವರನ್ನು ಬರಮಾಡಿಕೊಂಡರು. ಜಪಾನ್ ಭೇಟಿಗೂ ಮುನ್ನ ಪ್ರಧಾನಿಯವರು ಈ ಭೇಟಿಯು ಭಾರತ ಮತ್ತು ಜಪಾನ್ ನಡುವಿನ ಬಾಂಧವ್ಯ ಬಲಪಡಿಸುವ ಗುರಿ ಹೊಂದಿದೆ ಎಂದು ಹೇಳಿದ್ದು, ಜಪಾನ್ ಭೇಟಿ ಎರಡು ದಿನ ನಿಗದಿಯಾಗಿದೆ. ಈ ವೇಳೆ ಜಪಾನ್ ಪ್ರಧಾನಿ ಇಶಿಬಾ ಅವರೊಂದಿಗೆ ಪ್ರಧಾನಿಯವರು ಮಾತುಕತೆ ನಡೆಸಲಿದ್ದಾರೆ.








ಜಪಾನ್ ಭೇಟಿ ಮೂಲಕ ದೇಶದ ಬೆಳವಣಿಗೆಗೆ ಪೂರಕವಾಗಿ ಜಂಟಿ ಸಹಯೋಗದಲ್ಲಿ ಕಾರ್ಯಾಚರಣೆ ಮಾಡುವುದು, ಆರ್ಥಿಕ ಮತ್ತು ಹೂಡಿಕೆ ಸಂಬಂಧಗಳ ವ್ಯಾಪ್ತಿ ಮತ್ತು ಮಹತ್ವಾಕಾಂಕ್ಷೆಯನ್ನು ವಿಸ್ತರಿಸುವುದು, ಎಐ ಮತ್ತು ಸೆಮಿ ಕಂಡಕ್ಟರ್ಗಳು ಸೇರಿದಂತೆ ಹೊಸ ಮತ್ತು ಉದಯೋನ್ಮುಖ ತಂತ್ರಜ್ಞಾನಗಳಲ್ಲಿ ಸಹಕಾರವನ್ನು ಹೆಚ್ಚಿಸುವ ಉದ್ದೇಶ ಹೊಂದಲಾಗಿದೆ.
ಜಪಾನ್ ಬಳಿಕ ಚೀನಾಕ್ಕೆ ಭೇಟಿ
ಜಪಾನ್ ಭೇಟಿ ಬಳಿಕ ಪ್ರಧಾನಿ ಮೋದಿಯವರು ಚೀನಾಕ್ಕೆ ಭೇಟಿ ನೀಡಲಿದ್ದಾರೆ. ಆಗಸ್ಟ್ 31 ಮತ್ತು ಸೆಪ್ಟೆಂಬರ್ 1ರಂದು ಅವರು ಟಿಯಾಂಜಿನ್ನಲ್ಲಿ ನಡೆಯುವ ಎಸ್ಸಿಒ (ಶಾಂಘೈ ಕಾರ್ಪೊರೇಷನ್ ಆರ್ಗನೈಸೇಶನ್) ಶೃಂಗಸಭೆಯಲ್ಲಿ ಭಾಗವಹಿಸಲು ಚೀನಾಕ್ಕೆ ತೆರಳಲಿದ್ದಾರೆ. ಭಾರತಕ್ಕೆ ಅಮೆರಿಕ ಸುಂಕ ಬೆದರಿಕೆ ಹಿನ್ನೆಲೆಯಲ್ಲಿ ಚೀನಾ ಅಧ್ಯಕ್ಷರೇ ಮೋದಿಯವರನ್ನು ಸ್ವಾಗತಿಸಿ ಪಾಶ್ಚಾತ್ಯ ದೇಶಗಳಿಗೆ ಸಂದೇಶ ನೀಡುವ ನಿರೀಕ್ಷೆಯಿದೆ.
Prime Minister Narendra Modi received a grand cultural welcome upon his arrival in Japan on Friday morning, with the local Indian diaspora and Japanese community chanting the Gayatri Mantra at the Tokyo airport. The recitation of traditional mantras and shlokas created a spiritual ambiance as Japan warmly embraced the Indian leader.
05-03-26 09:40 pm
HK News Staffer
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm