ಬ್ರೇಕಿಂಗ್ ನ್ಯೂಸ್
30-08-25 06:44 pm HK News Desk ದೇಶ - ವಿದೇಶ
ನವದೆಹಲಿ, ಆ.30 : ಅಸ್ಸಾಂನಲ್ಲಿ ಅಕ್ರಮ ವಲಸಿಗರನ್ನು ಹೊರಹಾಕುವ ರಾಜ್ಯ ಸರ್ಕಾರದ ನಿರ್ಧಾರವನ್ನು ಟೀಕಿಸಿರುವ ಜಮಾತ್ ಮುಖ್ಯಸ್ಥ ಅರ್ಷದ್ ಮದನಿ, ಹಿಮಂತ ಬಿಸ್ವ ಶರ್ಮಗೆ ಕಾಂಗ್ರೆಸ್ ಟಿಕೆಟ್ ನೀಡಬಾರದು ಎಂದು ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದೆ ಎಂದು ಹೇಳಿರುವುದು ಬಿರುಸಿನ ಚರ್ಚೆಗೆ ಕಾರಣವಾಗಿದೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತ ಜಮಾತ್ ಉಲೇಮಾ -ಇ-ಹಿಂದ್ (ಎ) ಸಂಘಟನೆಯ ಮುಖ್ಯಸ್ಥ ಅರ್ಷದ್ ಮದನಿ, ಹಿಮಂತ ಬಿಸ್ವಾ ಶರ್ಮಗೆ ಆರಂಭದಲ್ಲಿ ಕಾಂಗ್ರೆಸ್ ಟಿಕೆಟ್ ಕೊಡಬೇಡಿ ಎಂದು ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿದ್ದೆ. ಹಿಮಂತ್ ಶರ್ಮ ಆರೆಸ್ಸೆಸ್ ಮನಸ್ಥಿತಿಯ ವ್ಯಕ್ತಿ. ಆತನಿಗೆ ಟಿಕೆಟ್ ಕೊಡಬೇಡಿ ಎಂದು ಕಾಂಗ್ರೆಸ್ ನಾಯಕರಿಗೆ ಎಚ್ಚರಿಸಿದ್ದೆ. ನೋಡಿ ಈಗ ಆ ಮನುಷ್ಯ ಅಸ್ಸಾಂನಲ್ಲಿ ಬೆಂಕಿ ಹಚ್ಚುತ್ತಿದ್ದಾನೆ ಎಂದು ಹೇಳಿದ್ದಾರೆ.
ಜಮಾತ್ ಮುಖ್ಯಸ್ಥರ ಈ ಹೇಳಿಕೆಗೆ ಬಿಜೆಪಿ ಮುಖಂಡರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಕೂಡ ಕಟು ಪ್ರತಿಕ್ರಿಯೆ ನೀಡಿದ್ದು, ಮದನಿ ನನಗೆ ಬೆದರಿಕೆ ಹಾಕಿದ್ದಾರೆ, ರಾಹುಲ್ ಗಾಂಧಿ ಕೂಡ ಅನೇಕ ಸಲ ಇದೇ ಎಚ್ಚರಿಕೆ ನೀಡಿದ್ದಾರೆ. ನೀವು ಎಷ್ಟು ಬೆದರಿಕೆ ಹಾಕುತ್ತಿರೋ ನಾವು ಅಷ್ಟೇ ಪ್ರಬಲವಾಗಿ ಕೆಲಸ ಮಾಡುತ್ತೇವೆ. ನಿಮ್ಮ ಬೆದರಿಕೆಗಳಿಗೆ ಅಸ್ಸಾಂ ಜನ ಜಗ್ಗುವುದಿಲ್ಲ. ಅಸ್ಸಾಂನಿಂದ ಅಕ್ರಮ ವಲಸಿಗರನ್ನು ಹೊಡೆದೋಡಿಸಿ, ಇಲ್ಲಿಯ ಮೂಲ ನಿವಾಸಿಗಳ ಹಕ್ಕನ್ನು ರಕ್ಷಿಸುತ್ತೇವೆ. ಮದನಿ ಮತ್ತು ರಾಹುಲ್ ಗಾಂಧಿ ಅಸ್ಸಾಂ ಜನರಿಗಾಗಿ ಹೋರಾಡಲಿ. ಇಲ್ಲಿಯ ಜನ ಅವರನ್ನು ಸೋಲಿಸುತ್ತಾರೆ. ನನಗೆ ಬೆದರಿಕೆ ಹಾಕುವವರು ಅರ್ಷದ್ ಮದನಿಯೇ ಆಗಿರಲಿ, ಮೊಹಮದ್ ಮದನಿಯೇ ಆಗಿರಲಿ, ನಾನು ಯಾರನ್ನೂ ಲೆಕ್ಕಿಸುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ.
ಅರ್ಷದ್ ಮದನಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿರುವ ವಿಡಿಯೋ ಶೇರ್ ಮಾಡಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ವಕ್ತಾರ ಅಮಿತ್ ಮಾಳವೀಯ, ಕಾಂಗ್ರೆಸ್ ನಲ್ಲಿ ಯಾರಿಗೆ ಟಿಕೆಟ್ ಕೊಡಬೇಕು, ಯಾರಿಗೆ ಕೊಡಬಾರದು ಎಂದು ನಿರ್ಧರಿಸುವುದು ಮೌಲ್ವಿಗಳೇ ಎಂದು ಪ್ರಶ್ನಿಸಿದ್ದಾರೆ.
ಹಿಮಂತ ಬಿಸ್ವ ಶರ್ಮ ಕಾಂಗ್ರೆಸ್ ಪಕ್ಷದಿಂದ ಮೊದಲನೇ ಸಲ 2001ರಲ್ಲಿ ಜಲೂಕ್ ಬಾರಿ ಕ್ಷೇತ್ರದಿಂದ ಗೆದ್ದು ಬಂದಿದ್ದು, 2006 ಮತ್ತು 2011ರಲ್ಲಿ ಅದೇ ಕ್ಷೇತ್ರದಿಂದ ಮತ್ತೆ ಗೆದ್ದಿದ್ದರು. ಆ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಸರ್ಕಾರದಲ್ಲಿ ಪ್ರಮುಖ ಖಾತೆಗಳಾದ ಕೃಷಿ, ನಗರ ಯೋಜನೆ, ನಗರಾಭಿವೃದ್ಧಿ, ಹಣಕಾಸು, ಅರೋಗ್ಯ, ಶಿಕ್ಷಣ ಸಚಿವರಾಗಿದ್ದರು. ಆದರೆ ಆಗಿನ ಮುಖ್ಯಮಂತ್ರಿ ತರುಣ್ ಗೊಗೋಯ್ ಜೊತೆಗಿನ ಭಿನ್ನಾಭಿಪ್ರಾಯಗಳಿಂದಾಗಿ 2014ರಲ್ಲಿ ಕಾಂಗ್ರೆಸ್ ಪಕ್ಷ ತ್ಯಜಿಸಿ 2015ರಲ್ಲಿ ಬಿಜೆಪಿ ಸೇರ್ಪಡೆಯಾದರು.
2016ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಗೆದ್ದು ಬಿಜೆಪಿಯ ಸರ್ಬಾನಂದ ಸೋನಾವಾಲ್ ಸರ್ಕಾರದಲ್ಲಿ ಸಚಿವರಾದರು. 2021ರ ಚುನಾವಣೆ ಬಳಿಕ ಅಸ್ಸಾಂ ಮುಖ್ಯಮಂತ್ರಿ ಗಾದಿ ಏರಿದರು. ಮುಖ್ಯಮಂತ್ರಿ ಆದ ಬಳಿಕ ಅಸ್ಸಾಂನಲ್ಲಿ ಅಕ್ರಮ ವಲಸಿಗರನ್ನು ಹೊರ ಹಾಕುವ ಕಾರ್ಯದಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತಿರುವುದು ಕಾಂಗ್ರೆಸ್ ಮತ್ತು ಮುಸ್ಲಿಂ ಮೂಲಭೂತವಾದಿಗಳ ಕೆಂಗಣ್ಣಿಗೆ ಗುರಿಯಾಗಿದೆ.
A political storm has erupted after Jamiat Ulama-e-Hind (A) chief Arshad Madani revealed that he had written a letter to Sonia Gandhi years ago, urging her not to give a Congress ticket to Himanta Biswa Sharma, citing his ideological leanings.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am