ಬ್ರೇಕಿಂಗ್ ನ್ಯೂಸ್
31-08-25 01:04 pm HK News Desk ದೇಶ - ವಿದೇಶ
ಕಾಸರಗೋಡು, ಆ.31 : ಕಣ್ಣೂರು ಜಿಲ್ಲೆಯ ಕಣ್ಣಾಪುರಂ ಎಂಬಲ್ಲಿನ ಮನೆಯೊಂದರಲ್ಲಿ ಶನಿವಾರ ಮುಂಜಾನೆ 2 ಗಂಟೆ ಸುಮಾರಿಗೆ ಭಾರೀ ಸ್ಫೋಟ ಸಂಭವಿಸಿದ್ದು, ವ್ಯಕ್ತಿಯೊಬ್ಬ ಛಿದ್ರ ಛಿದ್ರಗೊಂಡಿದ್ದಾನೆ. ಇನ್ನೊಬ್ಬ ವ್ಯಕ್ತಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದಾನೆ. ಕಣ್ಣೂರು ನಗರದ ಚಾಲಾಡ್ ನಿವಾಸಿ ಮುಹಮ್ಮದ್ ಆಶಮ್ ಮೃತಪಟ್ಟವರೆಂದು ಗುರುತು ಪತ್ತೆ ಮಾಡಲಾಗಿದೆ.
ಘಟನೆಯಲ್ಲಿ ಮನೆ ಸಂಪೂರ್ಣ ಧ್ವಂಸಗೊಂಡಿದ್ದು, ಮೃತಪಟ್ಟ ವ್ಯಕ್ತಿಯ ದೇಹ ಛಿದ್ರಗೊಂಡಿದೆ. ಮೂವರು ವ್ಯಕ್ತಿಗಳು ಬಾಡಿಗೆ ಪಡೆದಿದ್ದ ಮನೆಯಲ್ಲಿ ಈ ಘಟನೆ ನಡೆದಿದ್ದು, ಮನೆಯೊಳಗೆ ಬಾಂಬ್ ನಿರ್ಮಾಣ ಸಾಮಗ್ರಿಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಸಂಬಂಧಿಸಿ ಅನು ಮಲಿಕ್ ಎಂಬಾತನನ್ನು ಕಾಞಂಗಾಡ್ನಲ್ಲಿ ಪೊಲೀಸರು ಬಂಧಿಸಿದ್ದಾರೆ.

/newsdrum-in/media/media_files/2025/08/30/kannur-blast-2025-08-30-10-21-46.jpg)



ಸ್ಫೋಟ ನಡೆದ ಮನೆಯನ್ನು ಅನು ಮಲಿಕ್ ಬಾಡಿಗೆಗೆ ಪಡೆದಿದ್ದು, ಮೃತ ವ್ಯಕ್ತಿ ಈತನ ಸಂಬಂಧಿ. ಇವರು ಪೆರಿಯಾರಂನಲ್ಲಿ ಬಿಡಿ ಭಾಗಗಳ ಅಂಗಡಿ ಹೊಂದಿದ್ದು ವ್ಯಾಪಾರ ಮಾಡುತ್ತಿದ್ದರು ಎಂದು ಮನೆಯ ಮಾಲೀಕ ಗೋವಿಂದನ್ ತಿಳಿಸಿದ್ದಾರೆ. ಆಸುಪಾಸಿನ ಮನೆ, ಕಟ್ಟಡಗಳಲ್ಲಿಯೂ ಬಿರುಕು ಉಂಟಾಗಿದ್ದು ಆ ಮನೆ ಪೂರ್ತಿಯಾಗಿ ನೆಲಸಮಗೊಂಡಿದೆ. ಸ್ಥಳದಲ್ಲಿ ಪಟಾಕಿ ದಾಸ್ತಾನು ಮಾದರಿಯ ವಸ್ತುಗಳೂ ಪತ್ತೆಯಾಗಿವೆ. ಬಾಂಬ್ ತಯಾರಿ ನಡೆಸುತ್ತಿದ್ದಾಗ ಸ್ಫೋಟಗೊಂಡಿರುವ ಶಂಕೆಯೂ ವ್ಯಕ್ತವಾಗಿದೆ.
ಅನು ಮಲಿಕ್ ಈ ಹಿಂದೆಯೂ ಸ್ಫೋಟ ಪ್ರಕರಣದ ಆರೋಪಿಯಾಗಿದ್ದಾನೆ. 2016ರಲ್ಲಿ ಕಣ್ಣೂರಿನ ಪೋಡಿಕುಂಡು ಎಂಬಲ್ಲಿ ಅನು ಮಲಿಕ್ ವಾಸವಿದ್ದ ಎರಡು ಅಂತಸ್ತಿನ ಮನೆಯೊಂದರಲ್ಲಿ ಸ್ಫೋಟ ನಡೆದಿತ್ತು. ಪರಿಸರದ 15 ಮನೆಗಳಿಗೂ ಹಾನಿಯಾಗಿತ್ತು. ಘಟನೆಯಲ್ಲಿ ಮಲಿಕ್ ಪತ್ನಿ, ಮಗು ಸೇರಿ ಹತ್ತು ಮಂದಿ ಗಾಯಗೊಂಡಿದ್ದರು. ಮಲಿಕ್ ಸ್ಥಳೀಯವಾಗಿ ದೇವಸ್ಥಾನಗಳಿಗೆ ಪಟಾಕಿ ದಾಸ್ತಾನುಗಳ ಪೂರೈಕೆ ಮಾಡುತ್ತಿದ್ದರು ಎನ್ನುವ ಮಾಹಿತಿಯೂ ಇದ್ದು ಶುಕ್ರವಾರ ರಾತ್ರಿ ತಡವಾಗಿ ಮನೆಗೆ ಬಂದಿದ್ದರೆಂದು ಸ್ಥಳೀಯರು ತಿಳಿಸಿದ್ದಾರೆ.
A powerful explosion rocked a house in Kannapuram, Kannur district, around 2 a.m. on Saturday, leaving one man dismembered and another critically injured. The deceased has been identified as Muhammad Asham of Chalad, Kannur, while the injured has been hospitalized.
05-03-26 09:40 pm
HK News Staffer
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm