ಬ್ರೇಕಿಂಗ್ ನ್ಯೂಸ್
31-08-25 01:04 pm HK News Desk ದೇಶ - ವಿದೇಶ
ಕಾಸರಗೋಡು, ಆ.31 : ಕಣ್ಣೂರು ಜಿಲ್ಲೆಯ ಕಣ್ಣಾಪುರಂ ಎಂಬಲ್ಲಿನ ಮನೆಯೊಂದರಲ್ಲಿ ಶನಿವಾರ ಮುಂಜಾನೆ 2 ಗಂಟೆ ಸುಮಾರಿಗೆ ಭಾರೀ ಸ್ಫೋಟ ಸಂಭವಿಸಿದ್ದು, ವ್ಯಕ್ತಿಯೊಬ್ಬ ಛಿದ್ರ ಛಿದ್ರಗೊಂಡಿದ್ದಾನೆ. ಇನ್ನೊಬ್ಬ ವ್ಯಕ್ತಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದಾನೆ. ಕಣ್ಣೂರು ನಗರದ ಚಾಲಾಡ್ ನಿವಾಸಿ ಮುಹಮ್ಮದ್ ಆಶಮ್ ಮೃತಪಟ್ಟವರೆಂದು ಗುರುತು ಪತ್ತೆ ಮಾಡಲಾಗಿದೆ.
ಘಟನೆಯಲ್ಲಿ ಮನೆ ಸಂಪೂರ್ಣ ಧ್ವಂಸಗೊಂಡಿದ್ದು, ಮೃತಪಟ್ಟ ವ್ಯಕ್ತಿಯ ದೇಹ ಛಿದ್ರಗೊಂಡಿದೆ. ಮೂವರು ವ್ಯಕ್ತಿಗಳು ಬಾಡಿಗೆ ಪಡೆದಿದ್ದ ಮನೆಯಲ್ಲಿ ಈ ಘಟನೆ ನಡೆದಿದ್ದು, ಮನೆಯೊಳಗೆ ಬಾಂಬ್ ನಿರ್ಮಾಣ ಸಾಮಗ್ರಿಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಸಂಬಂಧಿಸಿ ಅನು ಮಲಿಕ್ ಎಂಬಾತನನ್ನು ಕಾಞಂಗಾಡ್ನಲ್ಲಿ ಪೊಲೀಸರು ಬಂಧಿಸಿದ್ದಾರೆ.

/newsdrum-in/media/media_files/2025/08/30/kannur-blast-2025-08-30-10-21-46.jpg)



ಸ್ಫೋಟ ನಡೆದ ಮನೆಯನ್ನು ಅನು ಮಲಿಕ್ ಬಾಡಿಗೆಗೆ ಪಡೆದಿದ್ದು, ಮೃತ ವ್ಯಕ್ತಿ ಈತನ ಸಂಬಂಧಿ. ಇವರು ಪೆರಿಯಾರಂನಲ್ಲಿ ಬಿಡಿ ಭಾಗಗಳ ಅಂಗಡಿ ಹೊಂದಿದ್ದು ವ್ಯಾಪಾರ ಮಾಡುತ್ತಿದ್ದರು ಎಂದು ಮನೆಯ ಮಾಲೀಕ ಗೋವಿಂದನ್ ತಿಳಿಸಿದ್ದಾರೆ. ಆಸುಪಾಸಿನ ಮನೆ, ಕಟ್ಟಡಗಳಲ್ಲಿಯೂ ಬಿರುಕು ಉಂಟಾಗಿದ್ದು ಆ ಮನೆ ಪೂರ್ತಿಯಾಗಿ ನೆಲಸಮಗೊಂಡಿದೆ. ಸ್ಥಳದಲ್ಲಿ ಪಟಾಕಿ ದಾಸ್ತಾನು ಮಾದರಿಯ ವಸ್ತುಗಳೂ ಪತ್ತೆಯಾಗಿವೆ. ಬಾಂಬ್ ತಯಾರಿ ನಡೆಸುತ್ತಿದ್ದಾಗ ಸ್ಫೋಟಗೊಂಡಿರುವ ಶಂಕೆಯೂ ವ್ಯಕ್ತವಾಗಿದೆ.
ಅನು ಮಲಿಕ್ ಈ ಹಿಂದೆಯೂ ಸ್ಫೋಟ ಪ್ರಕರಣದ ಆರೋಪಿಯಾಗಿದ್ದಾನೆ. 2016ರಲ್ಲಿ ಕಣ್ಣೂರಿನ ಪೋಡಿಕುಂಡು ಎಂಬಲ್ಲಿ ಅನು ಮಲಿಕ್ ವಾಸವಿದ್ದ ಎರಡು ಅಂತಸ್ತಿನ ಮನೆಯೊಂದರಲ್ಲಿ ಸ್ಫೋಟ ನಡೆದಿತ್ತು. ಪರಿಸರದ 15 ಮನೆಗಳಿಗೂ ಹಾನಿಯಾಗಿತ್ತು. ಘಟನೆಯಲ್ಲಿ ಮಲಿಕ್ ಪತ್ನಿ, ಮಗು ಸೇರಿ ಹತ್ತು ಮಂದಿ ಗಾಯಗೊಂಡಿದ್ದರು. ಮಲಿಕ್ ಸ್ಥಳೀಯವಾಗಿ ದೇವಸ್ಥಾನಗಳಿಗೆ ಪಟಾಕಿ ದಾಸ್ತಾನುಗಳ ಪೂರೈಕೆ ಮಾಡುತ್ತಿದ್ದರು ಎನ್ನುವ ಮಾಹಿತಿಯೂ ಇದ್ದು ಶುಕ್ರವಾರ ರಾತ್ರಿ ತಡವಾಗಿ ಮನೆಗೆ ಬಂದಿದ್ದರೆಂದು ಸ್ಥಳೀಯರು ತಿಳಿಸಿದ್ದಾರೆ.
A powerful explosion rocked a house in Kannapuram, Kannur district, around 2 a.m. on Saturday, leaving one man dismembered and another critically injured. The deceased has been identified as Muhammad Asham of Chalad, Kannur, while the injured has been hospitalized.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm