ಬ್ರೇಕಿಂಗ್ ನ್ಯೂಸ್
03-09-25 09:59 pm HK News Desk ದೇಶ - ವಿದೇಶ
ನವದೆಹಲಿ, ಸೆ. 3 : ದೆಹಲಿಯಲ್ಲಿ ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ದೆಹಲಿಯ ಬೀದಿಗಳು ಹೊಳೆಯಂತಾಗಿವೆ. ಅಲ್ಲದೆ ದೆಹಲಿಯ ಮಾರ್ಕೆಟ್ ಗಳು ನದಿ ನೀರಲ್ಲಿ ಮುಳುಗಿದ್ದು, ಎಲ್ಲಿ ನೋಡಿದರಲ್ಲಿ ಕೆಸರು ತುಂಬಿದ ಸನ್ನಿವೇಶಗಳೇ ಕಾಣುತ್ತಿವೆ.
ತಗ್ಗು ಪ್ರದೇಶಗಳು ಪೂರ್ತಿ ನೀರಲ್ಲಿ ಮುಳುಗಿದ್ದು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ದೆಹಲಿಯ ಪ್ರಸಿದ್ಧ ಮಜ್ನು ಕಾ ತಿಲ (ಮಿನಿ ಟಿಬೇಟ್) ಕಾಲೋನಿಯಿಂದ ಹಿಡಿದು, ಮದನ್ ಪುರ, ಖಾದರ್, ಬದರ್ ಪುರ ಮೊದಲಾದೆಡೆಯ ಸಾವಿರಾರು ಕುಟುಂಬಗಳು ಬೇರೆಡೆ ತೆರಳಿದ್ದು ನೀರು ಕಡಿಮೆಯಾಗುವುದನ್ನೇ ಕಾಯುತ್ತಿದ್ದಾರೆ.







ಯಮುನಾ ನದಿ ಬುಧವಾರ ಮಧ್ಯಾಹ್ನ ತನಕವೂ ಅಪಾಯದ ಮಟ್ಟ ಮೀರಿ ಹರಿಯುತಿತ್ತು. ಅಧಿಕಾರಿಗಳು ಅಪಾಯದ ಸ್ಥಳಗಳಿಂದ ಜನರನ್ನು ಸ್ಥಳಾಂತರ ಮಾಡುತ್ತಿದ್ದು, ಹಳೇ ರೈಲ್ವೆ ಬ್ರಿಡ್ಜ್ ನಲ್ಲಿ ವಾಹನ ಸಂಚಾರ ತಡೆ ಹಿಡಿದಿದ್ದಾರೆ. ಸದಾ ಗಿಜಿಗುಟ್ಟುತ್ತಿರುವ ದೆಹಲಿಯ ಮಜ್ನು ಕಾ ತಿಲ ಮಾರುಕಟ್ಟೆ ನೀರಿನಿಂದ ಆವೃತ್ತವಾಗಿದ್ದು ಜನ ಸಂಚಾರವಿಲ್ಲದೆ ಬಿಕೋ ಎನ್ನುತ್ತಿತ್ತು. ಮದನ್ ಪುರದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದ್ದರಿಂದ ಜನ ಹಳೇ ಪ್ಲಾಸ್ಟಿಕ್ ಶೀಟುಗಳನ್ನು ಅಡ್ಡ ಹಾಕಿ ಆಶ್ರಯ ಪಡೆದಿದ್ದು ನದಿ ಪ್ರವಾಹ ಕಡಿಮೆಯಾಗುವುದನ್ನು ಕಾಯುತ್ತಿದ್ದಾರೆ. ಬೀದಿನಾಯಿಗಳು ಕೂಡ ಮನೆಯ ಚಾವಣಿ ಏರಿ ಕೆಲವು ಕಡೇ ಆಶ್ರಯ ಪಡೆದಿರುವುದು ಕಂಡು ಬಂದಿದೆ.
ಯಮುನಾ ಬಜಾರ್ ಸಮೀಪ ಮನೆಗಳು ಮತ್ತು ಅಂಗಡಿಗಳು ನೀರಿನ ಮಧ್ಯೆಯೇ ನಿರ್ಮಾಣ ಆಗಿವೆಯೇ ಎಂದು ಭಾಸವಾಗುವಂತಿತ್ತು. ಬದರ್ ಪುರದಲ್ಲಿ ಮನೆಗಳ ಚಾವಣಿಯಷ್ಟೇ ಕಾಣುವಷ್ಟರ ಮಟ್ಟಿಗೆ ನೀರು ಏರಿಕೆಯಾಗಿದೆ.
ಸುಮಾರು 14,000ಕ್ಕೂ ಅಧಿಕ ಜನರನ್ನು ಬೇರೆಡೆ ಸ್ಥಳಾಂತರ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಯಮುನಾ ನದಿ 207.41 ಮೀಟರ್ ಎತ್ತರದಲ್ಲಿ ಹರಿಯುತ್ತಿದ್ದು ಇದು ಈವರೇಗಿನ ಮೂರನೇ ಅತ್ಯಂತ ಹೆಚ್ಚಿನ ನೀರಿನ ಹರಿವಿನ ಮಟ್ಟವಾಗಿದೆ. 1978 ಮತ್ತು 2023ರ ಪ್ರವಾಹದ ಸಂದರ್ಭದಲ್ಲಿ ಯಮುನಾ ನದಿ ಇದಕ್ಕಿಂತಲೂ ಹೆಚ್ಚಿನ ಮಟ್ಟದಲ್ಲಿ ಹರಿದಿತ್ತು.
The Yamuna River has surged above the danger mark, leaving Delhi’s streets looking like flowing rivers and markets submerged under muddy waters. Several low-lying areas have been completely inundated, forcing thousands of residents to move to safer locations.
05-03-26 09:40 pm
HK News Staffer
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm