ಬ್ರೇಕಿಂಗ್ ನ್ಯೂಸ್
03-09-25 09:59 pm HK News Desk ದೇಶ - ವಿದೇಶ
ನವದೆಹಲಿ, ಸೆ. 3 : ದೆಹಲಿಯಲ್ಲಿ ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ದೆಹಲಿಯ ಬೀದಿಗಳು ಹೊಳೆಯಂತಾಗಿವೆ. ಅಲ್ಲದೆ ದೆಹಲಿಯ ಮಾರ್ಕೆಟ್ ಗಳು ನದಿ ನೀರಲ್ಲಿ ಮುಳುಗಿದ್ದು, ಎಲ್ಲಿ ನೋಡಿದರಲ್ಲಿ ಕೆಸರು ತುಂಬಿದ ಸನ್ನಿವೇಶಗಳೇ ಕಾಣುತ್ತಿವೆ.
ತಗ್ಗು ಪ್ರದೇಶಗಳು ಪೂರ್ತಿ ನೀರಲ್ಲಿ ಮುಳುಗಿದ್ದು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ದೆಹಲಿಯ ಪ್ರಸಿದ್ಧ ಮಜ್ನು ಕಾ ತಿಲ (ಮಿನಿ ಟಿಬೇಟ್) ಕಾಲೋನಿಯಿಂದ ಹಿಡಿದು, ಮದನ್ ಪುರ, ಖಾದರ್, ಬದರ್ ಪುರ ಮೊದಲಾದೆಡೆಯ ಸಾವಿರಾರು ಕುಟುಂಬಗಳು ಬೇರೆಡೆ ತೆರಳಿದ್ದು ನೀರು ಕಡಿಮೆಯಾಗುವುದನ್ನೇ ಕಾಯುತ್ತಿದ್ದಾರೆ.







ಯಮುನಾ ನದಿ ಬುಧವಾರ ಮಧ್ಯಾಹ್ನ ತನಕವೂ ಅಪಾಯದ ಮಟ್ಟ ಮೀರಿ ಹರಿಯುತಿತ್ತು. ಅಧಿಕಾರಿಗಳು ಅಪಾಯದ ಸ್ಥಳಗಳಿಂದ ಜನರನ್ನು ಸ್ಥಳಾಂತರ ಮಾಡುತ್ತಿದ್ದು, ಹಳೇ ರೈಲ್ವೆ ಬ್ರಿಡ್ಜ್ ನಲ್ಲಿ ವಾಹನ ಸಂಚಾರ ತಡೆ ಹಿಡಿದಿದ್ದಾರೆ. ಸದಾ ಗಿಜಿಗುಟ್ಟುತ್ತಿರುವ ದೆಹಲಿಯ ಮಜ್ನು ಕಾ ತಿಲ ಮಾರುಕಟ್ಟೆ ನೀರಿನಿಂದ ಆವೃತ್ತವಾಗಿದ್ದು ಜನ ಸಂಚಾರವಿಲ್ಲದೆ ಬಿಕೋ ಎನ್ನುತ್ತಿತ್ತು. ಮದನ್ ಪುರದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದ್ದರಿಂದ ಜನ ಹಳೇ ಪ್ಲಾಸ್ಟಿಕ್ ಶೀಟುಗಳನ್ನು ಅಡ್ಡ ಹಾಕಿ ಆಶ್ರಯ ಪಡೆದಿದ್ದು ನದಿ ಪ್ರವಾಹ ಕಡಿಮೆಯಾಗುವುದನ್ನು ಕಾಯುತ್ತಿದ್ದಾರೆ. ಬೀದಿನಾಯಿಗಳು ಕೂಡ ಮನೆಯ ಚಾವಣಿ ಏರಿ ಕೆಲವು ಕಡೇ ಆಶ್ರಯ ಪಡೆದಿರುವುದು ಕಂಡು ಬಂದಿದೆ.
ಯಮುನಾ ಬಜಾರ್ ಸಮೀಪ ಮನೆಗಳು ಮತ್ತು ಅಂಗಡಿಗಳು ನೀರಿನ ಮಧ್ಯೆಯೇ ನಿರ್ಮಾಣ ಆಗಿವೆಯೇ ಎಂದು ಭಾಸವಾಗುವಂತಿತ್ತು. ಬದರ್ ಪುರದಲ್ಲಿ ಮನೆಗಳ ಚಾವಣಿಯಷ್ಟೇ ಕಾಣುವಷ್ಟರ ಮಟ್ಟಿಗೆ ನೀರು ಏರಿಕೆಯಾಗಿದೆ.
ಸುಮಾರು 14,000ಕ್ಕೂ ಅಧಿಕ ಜನರನ್ನು ಬೇರೆಡೆ ಸ್ಥಳಾಂತರ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಯಮುನಾ ನದಿ 207.41 ಮೀಟರ್ ಎತ್ತರದಲ್ಲಿ ಹರಿಯುತ್ತಿದ್ದು ಇದು ಈವರೇಗಿನ ಮೂರನೇ ಅತ್ಯಂತ ಹೆಚ್ಚಿನ ನೀರಿನ ಹರಿವಿನ ಮಟ್ಟವಾಗಿದೆ. 1978 ಮತ್ತು 2023ರ ಪ್ರವಾಹದ ಸಂದರ್ಭದಲ್ಲಿ ಯಮುನಾ ನದಿ ಇದಕ್ಕಿಂತಲೂ ಹೆಚ್ಚಿನ ಮಟ್ಟದಲ್ಲಿ ಹರಿದಿತ್ತು.
The Yamuna River has surged above the danger mark, leaving Delhi’s streets looking like flowing rivers and markets submerged under muddy waters. Several low-lying areas have been completely inundated, forcing thousands of residents to move to safer locations.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am