ಬ್ರೇಕಿಂಗ್ ನ್ಯೂಸ್
04-09-25 08:47 pm HK News Desk ದೇಶ - ವಿದೇಶ
ಮುಂಬೈ, ಸೆ.4: ಮುಂಬೈ ಮತ್ತು ಮಹಾನಗರದ ವಿವಿಧ ಪ್ರದೇಶಗಳಲ್ಲಿ ಗಣೇಶ ವಿಸರ್ಜನೆ ವಿಜೃಂಭಣೆಯಿಂದ ನಡೆಯಲಿರುವ ಕಾರಣ ಮಹಾರಾಷ್ಟ್ರ ಸರ್ಕಾರವು ಮುಂಬೈನಲ್ಲಿ ಈದ್ ಮಿಲಾದ್ ರಜೆಯನ್ನು ಸೆ5ರ ಬದಲು ಸೆ.8ಕ್ಕೆ ಬದಲಾವಣೆ ಮಾಡಿದೆ. ಅದೇ ದಿನ ಈದ್ ಮೆರವಣಿಗೆ ಇನ್ನಿತರ ಹಬ್ಬದ ಕಾರ್ಯಕ್ರಮಗಳ ನಡೆಯಲಿವೆ.
ಮುಸ್ಲಿಂ ಸಮುದಾಯವು ಅದ್ದೂರಿಯಾಗಿ ಈದ್ ಮಿಲಾದ್ ಆಚರಣೆ ಮಾಡುವುದರಿಂದ ಒಂದೇ ದಿನ ಎರಡು ಸಮುದಾಯದ ಹಬ್ಬಗಳು ನಡೆದು ಸಂಭಾವ್ಯ ಅಪಾಯಗಳು ನಡೆಯುವುದನ್ನು ತಪ್ಪಿಸಲು ಮಹಾರಾಷ್ಟ್ರ ಸರ್ಕಾರವು ಮುಂಬೈನಲ್ಲಿ ಈದ್-ಎ-ಮಿಲಾದ್ ಸಾರ್ವಜನಿಕ ರಜೆಯನ್ನು ಸೆಪ್ಟೆಂಬರ್ 8ಕ್ಕೆ ಬದಲಾಯಿಸಿದೆ. ಅನಂತ ಚತುರ್ದಶಿ (ಗಣೇಶ ವಿಗ್ರಹಗಳನ್ನು ಮೆರವಣಿಗೆಯಲ್ಲಿ ತೆಗೆದುಕೊಂಡು ಹೋಗಿ ನೀರಿನಲ್ಲಿ ಮುಳುಗಿಸುವ ಹಿಂದೂ ಹಬ್ಬ) ಸೆಪ್ಟೆಂಬರ್ 6ರಂದು ಬರುವುದರಿಂದ ಈ ಬದಲಾವಣೆ ಮಾಡಲಾಗಿದೆ.
ಸಂಭಾವ್ಯ ಜನಸಂದಣಿ ತಪ್ಪಿಸಲು ಮತ್ತು ಶಾಂತಿಯಿಂದ ಹಬ್ಬದ ಆಚರಣೆ ನಡೆಯಲು ಅನುಕೂಲವಾಗುವಂತೆ ಮುಸ್ಲಿಂ ಸಮುದಾಯವು ಈದ್ ಹಬ್ಬದ ಆಚರಣೆಗೆ ನಿರ್ಧರಿಸಿದ್ದು, ಅದಕ್ಕಾಗಿ ಈದ್ ಮಿಲಾದ್ ಮೆರವಣಿಗೆಯನ್ನು ಸೆಪ್ಟೆಂಬರ್ 8ರಂದು ನಡೆಸಲು ತೀರ್ಮಾನಿಸಿದೆ. ಆದ್ದರಿಂದ ಸರ್ಕಾರವು ಸೆ.5ರ ರಜೆಯನ್ನು ಆ ದಿನಾಂಕಕ್ಕೆ ಬದಲಾಯಿಸಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯದ ಇತರ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 5ರಂದೇ ರಜೆ ಇರಲಿದೆ. ಮುಂಬೈ ನಗರ ಮತ್ತು ಉಪ ನಗರಗಳಲ್ಲಿ ಮಾತ್ರ ಸೆಪ್ಟೆಂಬರ್ 8ಕ್ಕೆ ಬದಲಾಯಿಸಲಾಗಿದೆ ಎಂದು ಸರ್ಕಾರದ ಸುತ್ತೋಲೆ ತಿಳಿಸಿದೆ. ಮುಂಬೈ ನಗರ ಮತ್ತು ಉಪನಗರಗಳಲ್ಲಿನ ಸರ್ಕಾರಿ ಕಚೇರಿಗಳು ಸೆಪ್ಟೆಂಬರ್ 5ರಂದು ಎಂದಿನಂತೆ ತೆರೆದಿರುತ್ತವೆ ಎಂದೂ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.
In view of the grand Ganesh Visarjan celebrations across Mumbai and surrounding areas, the Maharashtra government has officially rescheduled the Eid Milad (Eid-e-Milad) public holiday in Mumbai from September 5 to September 8.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 11:07 pm
Mangalore Correspondent
Dharmasthala, Sameer Md, House Raid: ಧರ್ಮಸ್ಥಳ...
04-09-25 10:29 pm
Brijesh Chowta, Mangalore: ಜಿಎಸ್ಟಿ ಹೊರೆ ಇಳಿಸಿ...
04-09-25 07:57 pm
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm