ಬ್ರೇಕಿಂಗ್ ನ್ಯೂಸ್
08-09-25 02:02 pm HK News Desk ದೇಶ - ವಿದೇಶ
ನವದೆಹಲಿ, ಸೆ.7 : ದೃಶ್ಯಂ ಇತ್ಯಾದಿ ಸಿನಿಮಾಗಳಲ್ಲಿ ನಟಿಸಿ ಖ್ಯಾತಿ ಪಡೆದಿರುವ ಮಲಯಾಳಂ ಚಿತ್ರರಂಗದ ಖ್ಯಾತ ನಟಿ ನವ್ಯಾ ನಾಯರ್ ಮಲ್ಲಿಗೆ ಮುಡಿದುಕೊಂಡು ವಿಮಾನದಲ್ಲಿ ಆಸ್ಟ್ರೇಲಿಯಾಕ್ಕೆ ತೆರಳಿದ್ದಕ್ಕೆ 1.14 ಲಕ್ಷ ರೂ. ದಂಡ ತೆರಬೇಕಾಗಿ ಬಂದಿದೆ. ಕೇವಲ 15 ಸೆಂ.ಮೀ ಉದ್ದದ ಮಲ್ಲಿಗೆ ಹೂವಿನ ಹಾರ ಮುಡಿದಿದ್ದ ನವ್ಯಾ ನಾಯರ್ ಅವರನ್ನು ಮೆಲ್ಬೋರ್ನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಡೆದ ಅಲ್ಲಿನ ಅಧಿಕಾರಿಗಳು 1.14 ಲಕ್ಷ ರೂ. (1,980 ಆಸ್ಟ್ರೇಲಿಯನ್ ಡಾಲರ್) ದಂಡ ಹಾಕಿದ್ದಾರೆ.
ವಿಕ್ಟೋರಿಯಾದಲ್ಲಿ ಮಲಯಾಳಿ ಅಸೋಸಿಯೇಷನ್ ಸಂಸ್ಥೆಯು ಆಯೋಜಿಸಿದ್ದ ಓಣಂ ಆಚರಣೆಯಲ್ಲಿ ಭಾಗವಹಿಸಲು ತೆರಳಿದ್ದಾಗ ಈ ಘಟನೆ ನಡೆದಿದೆ. ಆ ಕಾರ್ಯಕ್ರಮಕ್ಕಾಗಿ ನಾನು ಒಂದು ಲಕ್ಷಕ್ಕೂ ಹೆಚ್ಚು ಮೌಲ್ಯದ ಹೂವುಗಳನ್ನು ಧರಿಸಿದ್ದೆ ಎಂದು ನವ್ಯಾ ತಮಾಷೆ ಮಾಡಿದ್ದು, ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
![]()

ಆಸ್ಟ್ರೇಲಿಯಾ ಪ್ರವಾಸಕ್ಕೆ ಹೊರಡುವ ಮೊದಲು ತಂದೆ ಉಡುಗೊರೆಯಾಗಿ ನೀಡಿದ ಮಲ್ಲಿಗೆ ಹಾರವನ್ನು ಧರಿಸಿದ್ದೆ. ಆ ದೇಶದ ನಿಯಮಗಳ ಅರಿವಿಲ್ಲದೆ ಹೀಗಾಗಿದೆ. ವಿಮಾನ ನಿಲ್ದಾಣದಲ್ಲಿ ಮಲ್ಲಿಗೆ ಹೂ ತೆಗೆದುಕೊಂಡು ಹೋಗಬಾರದು ಎಂದು ಯಾರೂ ಹೇಳಿರಲಿಲ್ಲ. ಇದು ದಂಡ ತೆರುವುದಕ್ಕೆ ಕಾರಣವಾಯಿತು ಎಂದು ತಿಳಿಸಿದ್ದಾರೆ.
ಆಸ್ಟ್ರೇಲಿಯಾದಲ್ಲಿ ಆ ದೇಶದ ಸ್ಥಳೀಯ ಸಸ್ಯ ಮತ್ತು ಪ್ರಾಣಿಗಳನ್ನು ರಕ್ಷಿಸಲು ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತದೆ. ಅಲ್ಲಿನ ನಿಯಮಗಳ ಪ್ರಕಾರ ವಿದೇಶಿ ಸಸ್ಯಗಳು, ಹೂವು ಅಥವಾ ಪ್ರಾಣಿಗಳನ್ನು ಆ ದೇಶಕ್ಕೆ ಕೊಂಡೊಯ್ಯುವುದು ಅಪರಾಧ ಎಂದು ಪರಿಗಣಿಸಲಾಗುತ್ತದೆ. ಏಕೆಂದರೆ ಇದು ಅಲ್ಲಿನ ಸ್ಥಳೀಯ ಪ್ರಭೇದಗಳಿಗೆ ಅಪಾಯ ಉಂಟುಮಾಡುತ್ತದೆ ಎಂದು ಆಸ್ಟ್ರೇಲಿಯಾ ಸರ್ಕಾರದ ಕೃಷಿ, ಮೀನುಗಾರಿಕೆ ಮತ್ತು ಅರಣ್ಯ ಇಲಾಖೆ ಈ ನಿಯಮ ತಂದಿದೆ. ಅಲ್ಲಿನ ಸಚಿವಾಲಯದ ಪ್ರಕಾರ, ಯಾವುದೇ ವಿದೇಶಿ ಸಸ್ಯ ಅಥವಾ ಪ್ರಾಣಿಗಳನ್ನು ಸರಿಯಾದ ತಪಾಸಣೆಯ ನಂತರ ಮಾತ್ರ ಆ ದೇಶಕ್ಕೆ ತರಬೇಕು. ನವ್ಯಾ ನಾಯರ್ ಈ ನಿಯಮ ಪಾಲಿಸಿಲ್ಲವಾದ್ದರಿಂದ ಆಕೆ 28 ದಿನಗಳಲ್ಲಿ ದಂಡ ಪಾವತಿಸುವಂತೆ ಸೂಚಿಸಲಾಗಿದೆ.
Malayalam actor Navya Nair was reportedly fined AUD 1,980 (around ₹1.14 lakh) at Melbourne International Airport after officials found her carrying a jasmine gajra.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm