ಬ್ರೇಕಿಂಗ್ ನ್ಯೂಸ್
08-09-25 02:02 pm HK News Desk ದೇಶ - ವಿದೇಶ
ನವದೆಹಲಿ, ಸೆ.7 : ದೃಶ್ಯಂ ಇತ್ಯಾದಿ ಸಿನಿಮಾಗಳಲ್ಲಿ ನಟಿಸಿ ಖ್ಯಾತಿ ಪಡೆದಿರುವ ಮಲಯಾಳಂ ಚಿತ್ರರಂಗದ ಖ್ಯಾತ ನಟಿ ನವ್ಯಾ ನಾಯರ್ ಮಲ್ಲಿಗೆ ಮುಡಿದುಕೊಂಡು ವಿಮಾನದಲ್ಲಿ ಆಸ್ಟ್ರೇಲಿಯಾಕ್ಕೆ ತೆರಳಿದ್ದಕ್ಕೆ 1.14 ಲಕ್ಷ ರೂ. ದಂಡ ತೆರಬೇಕಾಗಿ ಬಂದಿದೆ. ಕೇವಲ 15 ಸೆಂ.ಮೀ ಉದ್ದದ ಮಲ್ಲಿಗೆ ಹೂವಿನ ಹಾರ ಮುಡಿದಿದ್ದ ನವ್ಯಾ ನಾಯರ್ ಅವರನ್ನು ಮೆಲ್ಬೋರ್ನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಡೆದ ಅಲ್ಲಿನ ಅಧಿಕಾರಿಗಳು 1.14 ಲಕ್ಷ ರೂ. (1,980 ಆಸ್ಟ್ರೇಲಿಯನ್ ಡಾಲರ್) ದಂಡ ಹಾಕಿದ್ದಾರೆ.
ವಿಕ್ಟೋರಿಯಾದಲ್ಲಿ ಮಲಯಾಳಿ ಅಸೋಸಿಯೇಷನ್ ಸಂಸ್ಥೆಯು ಆಯೋಜಿಸಿದ್ದ ಓಣಂ ಆಚರಣೆಯಲ್ಲಿ ಭಾಗವಹಿಸಲು ತೆರಳಿದ್ದಾಗ ಈ ಘಟನೆ ನಡೆದಿದೆ. ಆ ಕಾರ್ಯಕ್ರಮಕ್ಕಾಗಿ ನಾನು ಒಂದು ಲಕ್ಷಕ್ಕೂ ಹೆಚ್ಚು ಮೌಲ್ಯದ ಹೂವುಗಳನ್ನು ಧರಿಸಿದ್ದೆ ಎಂದು ನವ್ಯಾ ತಮಾಷೆ ಮಾಡಿದ್ದು, ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
![]()

ಆಸ್ಟ್ರೇಲಿಯಾ ಪ್ರವಾಸಕ್ಕೆ ಹೊರಡುವ ಮೊದಲು ತಂದೆ ಉಡುಗೊರೆಯಾಗಿ ನೀಡಿದ ಮಲ್ಲಿಗೆ ಹಾರವನ್ನು ಧರಿಸಿದ್ದೆ. ಆ ದೇಶದ ನಿಯಮಗಳ ಅರಿವಿಲ್ಲದೆ ಹೀಗಾಗಿದೆ. ವಿಮಾನ ನಿಲ್ದಾಣದಲ್ಲಿ ಮಲ್ಲಿಗೆ ಹೂ ತೆಗೆದುಕೊಂಡು ಹೋಗಬಾರದು ಎಂದು ಯಾರೂ ಹೇಳಿರಲಿಲ್ಲ. ಇದು ದಂಡ ತೆರುವುದಕ್ಕೆ ಕಾರಣವಾಯಿತು ಎಂದು ತಿಳಿಸಿದ್ದಾರೆ.
ಆಸ್ಟ್ರೇಲಿಯಾದಲ್ಲಿ ಆ ದೇಶದ ಸ್ಥಳೀಯ ಸಸ್ಯ ಮತ್ತು ಪ್ರಾಣಿಗಳನ್ನು ರಕ್ಷಿಸಲು ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತದೆ. ಅಲ್ಲಿನ ನಿಯಮಗಳ ಪ್ರಕಾರ ವಿದೇಶಿ ಸಸ್ಯಗಳು, ಹೂವು ಅಥವಾ ಪ್ರಾಣಿಗಳನ್ನು ಆ ದೇಶಕ್ಕೆ ಕೊಂಡೊಯ್ಯುವುದು ಅಪರಾಧ ಎಂದು ಪರಿಗಣಿಸಲಾಗುತ್ತದೆ. ಏಕೆಂದರೆ ಇದು ಅಲ್ಲಿನ ಸ್ಥಳೀಯ ಪ್ರಭೇದಗಳಿಗೆ ಅಪಾಯ ಉಂಟುಮಾಡುತ್ತದೆ ಎಂದು ಆಸ್ಟ್ರೇಲಿಯಾ ಸರ್ಕಾರದ ಕೃಷಿ, ಮೀನುಗಾರಿಕೆ ಮತ್ತು ಅರಣ್ಯ ಇಲಾಖೆ ಈ ನಿಯಮ ತಂದಿದೆ. ಅಲ್ಲಿನ ಸಚಿವಾಲಯದ ಪ್ರಕಾರ, ಯಾವುದೇ ವಿದೇಶಿ ಸಸ್ಯ ಅಥವಾ ಪ್ರಾಣಿಗಳನ್ನು ಸರಿಯಾದ ತಪಾಸಣೆಯ ನಂತರ ಮಾತ್ರ ಆ ದೇಶಕ್ಕೆ ತರಬೇಕು. ನವ್ಯಾ ನಾಯರ್ ಈ ನಿಯಮ ಪಾಲಿಸಿಲ್ಲವಾದ್ದರಿಂದ ಆಕೆ 28 ದಿನಗಳಲ್ಲಿ ದಂಡ ಪಾವತಿಸುವಂತೆ ಸೂಚಿಸಲಾಗಿದೆ.
Malayalam actor Navya Nair was reportedly fined AUD 1,980 (around ₹1.14 lakh) at Melbourne International Airport after officials found her carrying a jasmine gajra.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 12:56 pm
Mangaluru Staffer
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm