ಬ್ರೇಕಿಂಗ್ ನ್ಯೂಸ್
08-09-25 06:07 pm HK News Desk ದೇಶ - ವಿದೇಶ
ನವದೆಹಲಿ, ಸೆ.8 : ಕೈದಿಯೊಬ್ಬ ನಿಗದಿತ ಏಳು ವರ್ಷಗಳ ಶಿಕ್ಷೆ ಪೂರ್ಣಗೊಳಿಸಿದ ಬಳಿಕವೂ ಅಧಿಕಾರಿಗಳು ಹೆಚ್ಚುವರಿಯಾಗಿ ನಾಲ್ಕು ವರ್ಷ ಏಳು ತಿಂಗಳ ಕಾಲ ಜೈಲಿನಲ್ಲಿರಿಸಿದ್ದಕ್ಕೆ ಪ್ರತಿಯಾಗಿ 25 ಲಕ್ಷ ರು. ಪರಿಹಾರ ನೀಡುವಂತೆ ಸುಪ್ರೀಂ ಕೋರ್ಟ್ ಸೋಮವಾರ ಮಧ್ಯಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ನ್ಯಾಯಮೂರ್ತಿಗಳಾದ ಜೆಬಿ ಪಾರ್ದಿವಾಲಾ ಮತ್ತು ಕೆವಿ ವಿಶ್ವನಾಥನ್ ಅವರಿದ್ದ ದ್ವಿಸದಸ್ಯ ಪೀಠವು, ಪ್ರಕರಣ ಸಂಬಂಧಿಸಿ ಮಧ್ಯಪ್ರದೇಶ ಸರ್ಕಾರವನ್ನು ತೀವ್ರ ತರಾಟೆಗೆತ್ತಿಕೊಂಡಿದ್ದಲ್ಲದೆ, ವ್ಯಕ್ತಿಗೆ ಪರಿಹಾರ ನೀಡಲು ಆದೇಶಿಸಿದೆ. ಅಪರಾಧಿ ಸೋಹನ್ ಸಿಂಗ್ ಪರ ವಾದ ಮಂಡಿಸಿದ ವಕೀಲ ಮಹ್ಫೂಜ್ ನಜ್ಕಿ, ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆ ಪೂರ್ಣಗೊಂಡ ನಂತರವೂ ನಾಲ್ಕು ವರ್ಷ ಏಳು ತಿಂಗಳು ಹೆಚ್ಚುವರಿಯಾಗಿ ಜೈಲಿನಲ್ಲಿ ಕಳೆದಿದ್ದಾರೆ. ಅವರು ಒಟ್ಟು 11 ವರ್ಷ 7 ತಿಂಗಳು ಜೈಲಿನಲ್ಲಿ ಕಳೆದಿದ್ದಾರೆ. ಅವರಿಗೆ ವಿಧಿಸಿದ್ದ ಜೈಲು ಶಿಕ್ಷೆ ಕೇವಲ 7 ವರ್ಷಗಳಾದರೂ ಹೆಚ್ಚುವರಿಯಾಗಿ ಜೈಲಿನಲ್ಲಿ ಇರಿಸಲಾಗಿದೆ ಎಂದು ಆಕ್ಷೇಪಿಸಿದ್ದಾರೆ.
ತಪ್ಪು ದಾರಿಗೆಳೆಯುವ ಅಫಿಡವಿಟ್ ಸಲ್ಲಿಸಿದ್ದಕ್ಕಾಗಿ ರಾಜ್ಯ ಸರ್ಕಾರದ ಪರ ವಕೀಲರನ್ನು ತರಾಟೆಗೆ ತೆಗೆದಿದ್ದಲ್ಲದೆ, 25 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿತು. ಇದೇ ರೀತಿ ಅಕ್ರಮವಾಗಿ ಜೈಲಿನಲ್ಲಿ ಯಾರನ್ನಾದರೂ ಇರಿಸಲಾಗಿದೆಯೇ ಎಂದು ಪರಿಶೀಲಿಸಲು ಮಧ್ಯಪ್ರದೇಶ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿತು. ಶಿಕ್ಷೆಯನ್ನು ಪೂರ್ಣಗೊಳಿಸಿದ ನಂತರ ಅಪರಾಧಿಗಳನ್ನು ತಕ್ಷಣವೇ ಜೈಲಿನಿಂದ ಬಿಡುಗಡೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಇದೇ ವೇಳೆ ಹೇಳಿದೆ.
ಇದಕ್ಕೂ ಮೊದಲು ಏಳು ವರ್ಷಗಳ ಸಂಪೂರ್ಣ ಶಿಕ್ಷೆಯನ್ನು ಅನುಭವಿಸಿದ ನಂತರವೂ ನಾಲ್ಕು ವರ್ಷ ಹೆಚ್ಚು ಕಾಲ ಜೈಲಿನಲ್ಲಿ ಏಕೆ ಇದ್ದರು ಮತ್ತು ಅಂತಹ ಗಂಭೀರ ಲೋಪ ಹೇಗೆ ಸಂಭವಿಸಿತು ಎಂಬ ಬಗ್ಗೆ ವಿವರಣೆ ನೀಡುವಂತೆ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠವು ಆಗಸ್ಟ್ 22 ರಂದು ರಾಜ್ಯ ಸರ್ಕಾರಕ್ಕೆ ವರದಿ ಕೇಳಿತ್ತು. ಸರ್ಕಾರದ ಪರ ವಕೀಲರ ವರದಿ ಮತ್ತು ತಪ್ಪಾದ ಅಫಿಡವಿಟ್ ನೋಡಿ ಗರಂ ಆಗಿರುವ ನ್ಯಾಯಪೀಠವು ಸರ್ಕಾರಕ್ಕೆ ಛೀಮಾರಿ ಹಾಕಿದ್ದಲ್ಲದೆ, 25 ಲಕ್ಷ ಪರಿಹಾರ ನೀಡಲು ಆದೇಶಿಸಿದೆ.
In a strong rebuke to the Madhya Pradesh government, the Supreme Court on Monday directed the state to pay ₹25 lakh in compensation to a man who was wrongfully kept in prison for four years and seven months beyond his legally mandated sentence.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm