ಬ್ರೇಕಿಂಗ್ ನ್ಯೂಸ್
08-09-25 10:59 pm HK News Desk ದೇಶ - ವಿದೇಶ
ನವದೆಹಲಿ, ಸೆ.8 : ನೇಪಾಳ ಸರ್ಕಾರವು ಜಾಲತಾಣಗಳಾದ ಫೇಸ್ಬುಕ್, ಯೂಟ್ಯೂಬ್, ಇನ್ಸ್ಟಾಗ್ರಾಮ್ ಮತ್ತು ಎಕ್ಸ್ನಂತಹ 26 ಪ್ರಮುಖ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ನಿಷೇಧಿಸಿದ ಬೆನ್ನಲ್ಲೇ ದೇಶಾದ್ಯಂತ ಯುವಜನರ ಆಕ್ರೋಶ ಭುಗಿಲೆದ್ದಿದೆ. ಜನರು ಬೀದಿಗಿಳಿದು ಹಿಂಸೆಗೆ ಇಳಿದಿದ್ದು ಪೊಲೀಸರ ಜೊತೆಗಿನ ಸಂಘರ್ಷದಲ್ಲಿ 19 ಮಂದಿ ಸಾವನ್ನಪ್ಪಿದ್ದಾರೆ. 500ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಯುವಕರು ರೀಲ್ಸ್ ಮಾಡುವುದಕ್ಕೆ ನೇಪಾಳ ಸರ್ಕಾರ ಕಡಿವಾಣ ಹಾಕಿದ್ದು ಇದನ್ನು ವಿರೋಧಿಸಿ ಯುವಜನತೆ ಬೀದಿಗಿಳಿದು ಪ್ರತಿಭಟನೆ ಆರಂಭಿಸಿದೆ. ಜನರು ಸರ್ಕಾರದ ಬಗ್ಗೆ ಪ್ರಶ್ನೆ ಮಾಡುತ್ತಲೇ ಇತ್ತ ಉದ್ರಿಕ್ತರ ನಿಯಂತ್ರಣಕ್ಕೆ ಸೇನೆಯನ್ನು ನಿಯೋಜಿದ್ದು ಕರ್ಫ್ಯೂ ವಿಧಿಸಲಾಗಿದೆ.






ರಾಜಧಾನಿ ಕಾಠ್ಮಂಡುವಿನಲ್ಲಿ ಸಂಸತ್ತಿನ ಮೇಲೆ ಉದ್ರಿಕ್ತ ಯುವಕರು ದಾಳಿ ನಡೆಸಿದ್ದು ಅವರನ್ನು ಚದುರಿಸಲು ಲಾಟಿ ಚಾರ್ಜ್, ಅಶ್ರುವಾಯು ಪ್ರಯೋಗಿಸಿದ್ದಾರೆ. ಅಲ್ಲದೆ, ನಗರದಾದ್ಯಂತ ಕರ್ಫ್ಯೂ ಹೇರಲಾಗಿದ್ದು ಜನರನ್ನು ಹೊರಕ್ಕೆ ಬರದಂತೆ ನಿಯಂತ್ರಣ ವಿಧಿಸಲಾಗಿದೆ.
ಸೋಶಿಯಲ್ ಮೀಡಿಯಾ ಮೂಲಕ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ, ಅದರಿಂದ ಕ್ರೈಮ್ ಹೆಚ್ಚುತ್ತಿದೆ ಎಂಬ ನೆಪದಲ್ಲಿ ನೇಪಾಳ ಸರ್ಕಾರ ಸಾಮಾಜಿಕ ವೇದಿಕೆಗಳನ್ನು ನಿಷೇಧಿಸಿದೆ. ಇದರ ಬೆನ್ನಲ್ಲೇ ಕಾಲೇಜು ವಿದ್ಯಾರ್ಥಿಗಳು ಬೀದಿಗಿಳಿದು ಭ್ರಷ್ಟಾಚಾರ ನಿಲ್ಲಿಸಿ, ಸೋಶಿಯಲ್ ಮೀಡಿಯಾವನ್ನಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶಾದ್ಯಂತ ಜನಾಕ್ರೋಶ ವ್ಯಕ್ತವಾಗಿದ್ದು ಭಾರತದ ಗಡಿಭಾಗದಲ್ಲಿ ಕಟ್ಟೆಚ್ಚರ ವಿಧಿಸಲಾಗಿದೆ. ಹಿಂಸೆ ಹೆಚ್ಚಿದ ಹಿನ್ನೆಲೆಯಲ್ಲಿ ನೇಪಾಳದ ಕೆಪಿ ಓಲಿ ಸರ್ಕಾರದ ವಿರುದ್ಧ ಆಕ್ರೋಶ ಹೆಚ್ಚಿದೆ. ಇದರಿಂದಾಗಿ ಗೃಹ ಸಚಿವ ರಮೇಶ್ ಲೇಖಕ್ ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡಿದ್ದಾರೆ.
Widespread chaos has gripped Nepal after the government imposed a ban on 26 major social media platforms, including Facebook, YouTube, Instagram, and X (formerly Twitter). The move triggered massive outrage, particularly among the youth, leading to violent protests, clashes with security forces, and the death of at least 19 people. Over 500 others have been reported injured.
05-03-26 09:40 pm
HK News Staffer
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm