ಬ್ರೇಕಿಂಗ್ ನ್ಯೂಸ್
09-09-25 09:38 pm HK News Desk ದೇಶ - ವಿದೇಶ
ನವದೆಹಲಿ, ಸೆ. 9 : ಮಹಾರಾಷ್ಟ್ರ ಮಾಜಿ ರಾಜ್ಯಪಾಲ, ಎನ್.ಡಿ.ಎ ಮೈತ್ರಿಕೂಟದ ಅಭ್ಯರ್ಥಿ ಸಿ.ಪಿ ರಾಧಾಕೃಷ್ಣನ್ ಭಾರತದ ನೂತನ ಉಪ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಜಗದೀಪ್ ಧನಕರ್ ದಿಢೀರ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನವನ್ನು 68 ವರ್ಷದ ರಾಧಾಕೃಷ್ಣನ್ ತುಂಬಲಿದ್ದಾರೆ.
ಮಂಗಳವಾರ ನಡೆದ ಚುನಾವಣೆಯಲ್ಲಿ ರಾಧಾಕೃಷ್ಣನ್ ಮೊದಲ ಪ್ರಾಶಸ್ತ್ಯದ 452 ಮತಗಳನ್ನು ಪಡೆದರು. ಎದುರಾಳಿ ಇಂಡಿಯಾ ಕೂಟದ ಅಭ್ಯರ್ಥಿ, ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶ ಬಿ. ಸುದರ್ಶನ್ ರೆಡ್ಡಿ 300 ಮತಗಳನ್ನಷ್ಟೇ ಪಡೆದರು. ಸಂಸದರು ಹಾಗೂ ರಾಜ್ಯಸಭಾ ಸದಸ್ಯರು ಒಟ್ಟು ಸೇರಿ 754 ಮತಗಳು ಚಲಾವಣೆಯಾಗಿದ್ದು 15 ಮತಗಳು ಅಸಿಂಧುವಾಯಿತು. ಮೊದಲ ಪ್ರಾಶಸ್ತ್ಯದ ಮತಗಳ ಹಿನ್ನೆಲೆಯಲ್ಲಿ ರಾಧಾಕೃಷ್ಣನ್ ವಿಜೇತರಾಗಿದ್ದಾರೆ ಎಂದು ಚುನಾವಣಾಧಿಕಾರಿ ಪಿ.ವಿ ಮೋದಿ ಘೋಷಿಸಿದರು.

150 ಮತಗಳ ಗೆಲುವು
ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ವಿಜೇತರಾದವರ ಅತ್ಯಂತ ಕಡಿಮೆ ಅಂತರದ ಗೆಲುವಾಗಿದೆ. ಈ ಹಿಂದೆ ಜಗದೀಪ್ ಧನಕರ್ ಅವರು ಮಾರ್ಗರೆಟ್ ಆಳ್ವ ಅವರನ್ನು 182 ಮತಗಳಿಂದ ಸೋಲಿಸಿದ್ದು ಅತೀ ಕಡಿಮೆ ಅಂತರದ ಗೆಲುವಾಗಿತ್ತು.
ಕಾಂಗ್ರೆಸ್ ಕ್ರಾಸ್ ವೋಟಿಂಗ್
ಮತದಾನ ಪ್ರಕ್ರಿಯೆಯಲ್ಲಿ ಅಡ್ಡ ಮತದಾನ ನಡೆದಿರುವುದು ಸಾಬೀತಾಗಿದೆ. ಕನಿಷ್ಠ 15 ಲೋಕಸಭಾ ಸದಸ್ಯರು ಇಂಡಿಯಾ ಬ್ಲಾಕ್ ಗೆ ಕೈಕೊಟ್ಟು ಎನ್.ಡಿ.ಎ ಅಭ್ಯರ್ಥಿಗೆ ಮತ ಚಲಾಯಿಸಿದ್ದಾರೆ. ಕಾಂಗ್ರೆಸ್ ತಮ್ಮ ಬಳಿ 315 ಎಂಪಿಗಳಿದ್ದಾರೆ ಎಂದು ಹೇಳಿಕೊಂಡಿತ್ತು. ಆದರೆ ಅದಕ್ಕೆ 15 ಕಡಿಮೆ ಮತ ಕಡಿಮೆ ಬಿದ್ದಿದೆ.
ಎನ್.ಡಿ.ಎ ಬಳಿ ರಾಜ್ಯಸಭೆ ಸೇರಿ 427 ಸಂಸದರಿದ್ದರು. ವೈಎಸ್ಸಾರ್ ಕಾಂಗ್ರೆಸ್ ಪಕ್ಷದ 11 ಸದಸ್ಯರು ರಾಧಾಕೃಷ್ಣನ್ ಅವರನ್ನು ಬೆಂಬಲಿಸಿ ಮತ ಚಲಾಯಿಸಿದ್ದರು. ಆದರೂ ರಾಧಾಕೃಷ್ಣನ್ ಗೆ 14 ಮತಗಳು ಹೆಚ್ಚು ಬಿದ್ದಿದ್ದು ಕಾಂಗ್ರೆಸ್ ಒಕ್ಕೂಟದಿಂದ ಕ್ರಾಸ್ ವೋಟಿಂಗ್ ಆಗಿರೋದು ಸ್ಪಷ್ಟವಾಗಿದೆ.
Maharashtra Governor CP Radhakrishnan, the NDA candidate for the post of the Vice President, will succeed Jagdeep Dhankhar in the post. The 68-year-old sailed through the election today, scooping up 452 first preference votes, leaving Opposition candidate and retired Supreme Court judge B Sudershan Reddy trailing with 300 first preference votes.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 12:56 pm
Mangaluru Staffer
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm