ಬ್ರೇಕಿಂಗ್ ನ್ಯೂಸ್
10-09-25 04:22 pm HK News Desk ದೇಶ - ವಿದೇಶ
ಕಾಠ್ಮಂಡು, ಸೆ.10 : ನೇಪಾಳದಲ್ಲಿ ತೀವ್ರ ಹಿಂಸಾಚಾರದ ಬಳಿಕ ಪ್ರಧಾನಿ ಕೆಪಿ ಶರ್ಮಾ ಓಲಿ ಅವರ ಸರಕಾರ ಪತನಗೊಂಡಿದೆ. ಯುವಜನರು ಸರಕಾರದ ಭ್ರಷ್ಟಾಚಾರ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆಸಿದ್ದು ಹಿಂಸಾಚಾರಕ್ಕೆ ತಿರುಗಿತ್ತು. ಇದರ ಬೆನ್ನಲ್ಲೇ ಯುವ ನಾಯಕನೊಬ್ಬನ ಹೆಸರು ಪ್ರಧಾನಿ ಸ್ಥಾನಕ್ಕೆ ಕೇಳಿಬಂದಿದೆ.
ಕಾಠ್ಮಂಡು ನಗರದಲ್ಲಿ ಕಳೆದ ಮೂರು ವರ್ಷಗಳಿಂದ ಮೇಯರ್ ಆಗಿರುವ ಬಾಲೇಂದ್ರ ಶಾ ಎನ್ನುವ 35 ವರ್ಷದ ಯುವಕನ ಹೆಸರನ್ನು ಜನರು ಪ್ರಧಾನಿ ಸ್ಥಾನಕ್ಕೆ ಸೂಚಿಸಿದ್ದಾರೆ. ಇಂಜಿನಿಯರಿಂಗ್ ಪದವಿ ಮುಗಿಸಿದ ಬಳಿಕ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹಾಡು ಬರೆದು ರಾಪರ್ ಆಗಿ ಜನರ ಗಮನ ಸೆಳೆದಿದ್ದ ಬಾಲೇಂದ್ರ ಶಾ 2022ರಲ್ಲಿ, ಮೊದಲ ಬಾರಿಗೆ ಪಕ್ಷೇತರನಾಗಿ ಚುನಾವಣೆಗೆ ನಿಂತು ಜಯ ಸಾಧಿಸಿದ್ದರು. ಆನಂತರ, ಕಾಠ್ಮಂಡು ನಗರದಲ್ಲಿ ಮೇಯರ್ ಆಗಿ ಆಯ್ಕೆಯಾಗಿದ್ದರು.







ಇದೀಗ ನೇಪಾಳ ದೇಶದ ಸರಕಾರ ಪತನಗೊಂಡಿದ್ದರಿಂದ ಮುಂದಿನ ಪ್ರಧಾನಿ ಯಾರು ಎನ್ನುವ ಬಗ್ಗೆ ಚರ್ಚೆಯಾಗಿದೆ. ಹೆಚ್ಚಿನ ಜನರು ಬಾಲೆನ್ ಅವರನ್ನು ಸೂಚಿಸುತ್ತಿದ್ದಾರೆ. ಭ್ರಷ್ಟಾಚಾರ ಮತ್ತು ಅಸಮಾನತೆ ವಿರುದ್ಧ ಧ್ವನಿಯೆತ್ತಿ ಸಾರ್ವಜನಿಕ ಜೀವನಕ್ಕೆ ಬಂದಿರುವ ಶಾ ಅವರನ್ನು ಮುಂದಿನ ನಾಯಕನ ಸ್ಥಾನದಲ್ಲಿ ನೋಡುತ್ತಿದ್ದಾರೆ. ಬಾಲೆನ್ ಅವರಿಗೂ ಭಾರತಕ್ಕೆ ಹತ್ತಿರದ ನಂಟು ಇದೆ. ಅವರು ಬೆಂಗಳೂರಿನ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್ ಇಂಜಿನಿಯರಿಂಗ್ ಎಂಟೆಕ್ ಪೂರೈಸಿದ್ದರು.
ಶಿಕ್ಷಣದ ಬಳಿಕ ಹಿಪ್ ಹಾಪ್ ಮ್ಯೂಸಿಕ್ ಮೂಲಕ ಜನರ ಗಮನ ಸೆಳೆದಿದ್ದರು. ಇದರ ಮಧ್ಯೆಯೇ ಭ್ರಷ್ಟಾಚಾರ ವಿಷಯದಲ್ಲಿ ಹಾಡುಗಳನ್ನ ಹಾಡುತ್ತ ಜನರಿಗೆ ಹತ್ತಿರವಾಗಿದ್ದರು. 2023ರಲ್ಲಿ ಭಾರತದ ಚಿತ್ರಗಳನ್ನು ರಾಜಧಾನಿ ಕಾಠ್ಮಂಡುವಿನಲ್ಲಿ ಪ್ರದರ್ಶನ ಮಾಡದಂತೆ ನಿಷೇಧಿಸಿದ್ದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯುವಂತಾಗಿತ್ತು. ಆದಿಪುರುಷ್ ಚಿತ್ರದ ಕೆಲವು ಸಂಭಾಷಣೆಗೆ ಆಕ್ಷೇಪ ಕೇಳಿಬಂದಿದ್ದರಿಂದ ಮೇಯರ್ ಆಗಿದ್ದ ಬಾಲೆಂದ್ರ ಶಾ ತನ್ನ ರಾಜಧಾನಿ ನಗರದಲ್ಲಿ ಚಿತ್ರ ಪ್ರಸಾರ ಮಾಡಬಾರದೆಂದು ಆದೇಶ ಮಾಡಿದ್ದರು.
ಮಂಗಳವಾರ ಸಂಸತ್ತು, ಪ್ರಧಾನಿ, ಅಧ್ಯಕ್ಷರ ನಿವಾಸಗಳಿಗೆ ನುಗ್ಗಿ ಜನರು ಬೆಂಕಿ ಹಚ್ಚಿದ ಘಟನೆ ಹಿನ್ನೆಲೆಯಲ್ಲಿ ಬಾಲೇಂದ್ರ ಶಾ, ಹಿಂಸಾ ನಿರತರು ಶಾಂತಿ ಕಾಯ್ದುಕೊಳ್ಳಬೇಕೆಂದು ಮನವಿ ಮಾಡಿದ್ದರು. ನಿಮ್ಮ ಹಿಂಸೆಯಿಂದಾಗಿ ದೇಶದ ಸಂಪತ್ತು ಹಾಳಾಗುತ್ತಿದೆ ಎಂದರೆ, ಅದು ನಮ್ಮದೇ ಸಂಪತ್ತು ನಾಶವಾಗ್ತಿದೆ ಎಂದೇ ಅರ್ಥ ಎಂದು ಹೇಳುವ ಮೂಲಕ ಸರಕಾರದ ಸೊತ್ತುಗಳನ್ನು ಹಾಳಮಾಡಬೇಡಿ, ಅದು ನಮ್ಮೆಲ್ಲರ ಸಂಪತ್ತು ಎಂದು ಬೀದಿಗಿಳಿದ ಯುವಜನರಲ್ಲಿ ಮನವಿ ಮಾಡಿದ್ದರು. ಬೀದಿಗಿಳಿದ ಜೆನ್ ಝೆಡ್ ಯುವಜನರು ಭ್ರಷ್ಟಾಚಾರಕ್ಕೆ ಉತ್ತರದಾಯಿತ್ವ ತೋರಿಸಿ ಎಂದು ರಾಜಕಾರಣಿಗಳ ವಿರುದ್ಧ ಪ್ರತಿಭಟನೆ ನಡೆಸಿದ್ದರು.
Nepal’s Communist government led by Prime Minister K.P. Sharma Oli has collapsed following violent unrest across the country. Youth-led protests against corruption spiraled into clashes and arson, eventually forcing the government to step down. In the aftermath, the name of a young leader has quickly emerged as a possible contender for the top post.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 12:56 pm
Mangaluru Staffer
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm