ಬ್ರೇಕಿಂಗ್ ನ್ಯೂಸ್
12-09-25 11:33 am HK News Desk ದೇಶ - ವಿದೇಶ
ವಾಷಿಂಗ್ಟನ್, ಸೆ.12 : ಅಮೆರಿಕದ ವಸತಿಗೃಹವೊಂದರಲ್ಲಿ ವಾಶಿಂಗ್ ಮೆಷಿನ್ ಬಳಕೆಯ ವಿಷಯದಲ್ಲಿ ಉಂಟಾದ ವಾಗ್ವಾದವು ಕನ್ನಡಿಗನೊಬ್ಬನ ಕಗ್ಗೊಲೆಗೆ ಕಾರಣವಾಗಿದೆ. ಅಮೆರಿಕದ ಡಲ್ಲಾಸ್ ಎಂಬಲ್ಲಿಯ ಅತಿಥಿಗೃಹದಲ್ಲಿ ಮ್ಯಾನೇಜರ್ ಆಗಿದ್ದ ಕರ್ನಾಟಕ ಮೂಲದ ಚಂದ್ರ ನಾಗಮಲ್ಲಯ್ಯ ಎಂಬವರನ್ನು ಯೋರ್ಡಾನಿಸ್ ಕೋಬೋಸ್ ಮಾರ್ಟಿನೆಸ್ ಎಂಬಾತ ಮಚ್ಚಿನಿಂದ ಕೊಚ್ಚಿ ಶಿರಚ್ಛೇದ ಮಾಡಿ ಕೊಲೆಗೈದಿದ್ದಾನೆ.
ಅತಿಥಿ ಗೃಹದಲ್ಲಿ ಮ್ಯಾನೇಜರ್ ಆಗಿದ್ದ ಚಂದ್ರ ನಾಗಮಲ್ಲಯ್ಯ ತನ್ನ ಸಹೋದ್ಯೋಗಿಯೊಂದಿಗೆ ವಾಶಿಂಗ್ ಮೆಷಿನ್ ಬಳಕೆಯ ಬಗ್ಗೆ ವಾಗ್ವಾದ ನಡೆಸಿದ್ದು ಇದರಿಂದ ಕೆರಳಿದ ಮಾರ್ಟಿನೆಸ್ ಆತನ ಶಿರಚ್ಛೇದ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಬುಧವಾರ ಘಟನೆ ಸಂಭವಿಸಿದ್ದು ಕರ್ನಾಟಕದ ಚಂದ್ರ ನಾಗಮಲ್ಲಯ್ಯ(50), 37 ವರ್ಷದ ಯೋರ್ಡಾನಿಸ್ ಕೋಬೋಸ್-ಮಾರ್ಟಿನೆಸ್ಗೆ ಕೆಟ್ಟು ಹೋಗಿರುವ ವಾಷಿಂಗ್ ಮೆಷಿನ್ ಅನ್ನು ಬಳಸದಂತೆ ಹೇಳಿದ್ದು ಇದು ವಾಗ್ವಾದಕ್ಕೆ ಕಾರಣವಾಯಿತು. ಇದರಿಂದ ಕೆರಳಿದ ಆರೋಪಿ, ಮಚ್ಚು ತೆಗೆದುಕೊಂಡು ಚಂದ್ರ ನಾಗಮಲ್ಲಯ್ಯರನ್ನು ಅಟ್ಟಾಡಿಸಿಕೊಂಡು ಹಲವು ಬಾರಿ ಇರಿದಿದ್ದ. ಈ ವೇಳೆ ನಾಗಮಲ್ಲಯ್ಯ ಪಾರ್ಕಿಂಗ್ ಸ್ಥಳದಿಂದ ಕಚೇರಿಯ ಕಡೆಗೆ ಓಡಲು ಪ್ರಯತ್ನಿಸಿದರೂ ಆರೋಪಿ ಆತನನ್ನು ಬೆನ್ನಟ್ಟಿ ಶಿರಚ್ಛೇದ ಮಾಡಿದ್ದಾನೆ ಎಂದು ವರದಿಗಳು ತಿಳಿಸಿವೆ.
ನಾಗಮಲ್ಲಯ್ಯ ಅವರ ಪತ್ನಿ ಮತ್ತು 18 ವರ್ಷದ ಪುತ್ರ ಕೋಬೋಸ್- ಮಾರ್ಟಿನೆಸ್ನನ್ನು ತಡೆಯಲು ಪ್ರಯತ್ನಿಸಿದರೂ, ಆತ ಕೋಪದ ಭರದಲ್ಲಿ ಅವರನ್ನು ತಳ್ಳಿ ನಾಗಮಲ್ಲಯ್ಯನನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಆರೋಪಿ ಮಾರ್ಟಿನೆಸ್ ಮಚ್ಚಿನಿಂದ ತಾನು ಕತ್ತರಿಸಿದ ಚಂದ್ರ ನಾಗಮಲ್ಲಯ್ಯನ ತಲೆಯನ್ನು ಎತ್ತಿಕೊಂಡು ಕಸದ ಬುಟ್ಟಿಯತ್ತ ಸಾಗುತ್ತಿರುವ ದೃಶ್ಯದ ವೀಡಿಯೊ ವೈರಲ್ ಆಗಿದೆ. ರಕ್ತದಲ್ಲಿ ಮುಳುಗಿದ ಮಚ್ಚನ್ನು ಹೊತ್ತುಕೊಂಡು ಕಸದ ಬುಟ್ಟಿಗೆ ಬಿಸಾಡಿ ಅಲ್ಲಿಂದ ಹೊರಡುತ್ತಿದ್ದಾಗ ಆತನನ್ನು ಪೊಲೀಸರು ಬಂಧಿಸಿದ್ದಾರೆ.
ಚಂದ್ರ ನಾಗಮಲ್ಲಯ್ಯ ಅವರ ದುರಂತ ಸಾವಿಗೆ ಭಾರತೀಯ ರಾಯಭಾರ ಕಚೇರಿ ಸಂತಾಪ ಸೂಚಿಸಿದ್ದು, ಕೆಲಸದ ಸ್ಥಳದಲ್ಲಿ ಅವರನ್ನು ಕ್ರೂರವಾಗಿ ಕೊಲ್ಲಲಾಗಿದೆ ಎಂದು ಹೇಳಿದೆ. ನಾವು ಚಂದ್ರ ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದೇವೆ ಮತ್ತು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದ್ದೇವೆ. ಆರೋಪಿ ಡಲ್ಲಾಸ್ ಪೊಲೀಸರ ವಶದಲ್ಲಿದ್ದಾನೆ. ಈ ವಿಷಯದ ಬಗ್ಗೆ ನಾವು ನಿಗಾ ಇಡುತ್ತಿದ್ದೇವೆ ಎಂದು ರಾಯಭಾರ ಕಚೇರಿ X ನಲ್ಲಿ ಪೋಸ್ಟ್ ಮಾಡಿದೆ.
In a shocking incident, a dispute over the use of a washing machine led to the brutal killing of a Kannadiga man in the United States. The victim, Chandra Nagamallaiah (50), originally from Karnataka, was working as a manager at a guesthouse in Dallas, Texas, when he was attacked and beheaded by his colleague Yordanis Cobos-Martinez (37).
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm