ಬ್ರೇಕಿಂಗ್ ನ್ಯೂಸ್
12-09-25 11:33 am HK News Desk ದೇಶ - ವಿದೇಶ
ವಾಷಿಂಗ್ಟನ್, ಸೆ.12 : ಅಮೆರಿಕದ ವಸತಿಗೃಹವೊಂದರಲ್ಲಿ ವಾಶಿಂಗ್ ಮೆಷಿನ್ ಬಳಕೆಯ ವಿಷಯದಲ್ಲಿ ಉಂಟಾದ ವಾಗ್ವಾದವು ಕನ್ನಡಿಗನೊಬ್ಬನ ಕಗ್ಗೊಲೆಗೆ ಕಾರಣವಾಗಿದೆ. ಅಮೆರಿಕದ ಡಲ್ಲಾಸ್ ಎಂಬಲ್ಲಿಯ ಅತಿಥಿಗೃಹದಲ್ಲಿ ಮ್ಯಾನೇಜರ್ ಆಗಿದ್ದ ಕರ್ನಾಟಕ ಮೂಲದ ಚಂದ್ರ ನಾಗಮಲ್ಲಯ್ಯ ಎಂಬವರನ್ನು ಯೋರ್ಡಾನಿಸ್ ಕೋಬೋಸ್ ಮಾರ್ಟಿನೆಸ್ ಎಂಬಾತ ಮಚ್ಚಿನಿಂದ ಕೊಚ್ಚಿ ಶಿರಚ್ಛೇದ ಮಾಡಿ ಕೊಲೆಗೈದಿದ್ದಾನೆ.
ಅತಿಥಿ ಗೃಹದಲ್ಲಿ ಮ್ಯಾನೇಜರ್ ಆಗಿದ್ದ ಚಂದ್ರ ನಾಗಮಲ್ಲಯ್ಯ ತನ್ನ ಸಹೋದ್ಯೋಗಿಯೊಂದಿಗೆ ವಾಶಿಂಗ್ ಮೆಷಿನ್ ಬಳಕೆಯ ಬಗ್ಗೆ ವಾಗ್ವಾದ ನಡೆಸಿದ್ದು ಇದರಿಂದ ಕೆರಳಿದ ಮಾರ್ಟಿನೆಸ್ ಆತನ ಶಿರಚ್ಛೇದ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಬುಧವಾರ ಘಟನೆ ಸಂಭವಿಸಿದ್ದು ಕರ್ನಾಟಕದ ಚಂದ್ರ ನಾಗಮಲ್ಲಯ್ಯ(50), 37 ವರ್ಷದ ಯೋರ್ಡಾನಿಸ್ ಕೋಬೋಸ್-ಮಾರ್ಟಿನೆಸ್ಗೆ ಕೆಟ್ಟು ಹೋಗಿರುವ ವಾಷಿಂಗ್ ಮೆಷಿನ್ ಅನ್ನು ಬಳಸದಂತೆ ಹೇಳಿದ್ದು ಇದು ವಾಗ್ವಾದಕ್ಕೆ ಕಾರಣವಾಯಿತು. ಇದರಿಂದ ಕೆರಳಿದ ಆರೋಪಿ, ಮಚ್ಚು ತೆಗೆದುಕೊಂಡು ಚಂದ್ರ ನಾಗಮಲ್ಲಯ್ಯರನ್ನು ಅಟ್ಟಾಡಿಸಿಕೊಂಡು ಹಲವು ಬಾರಿ ಇರಿದಿದ್ದ. ಈ ವೇಳೆ ನಾಗಮಲ್ಲಯ್ಯ ಪಾರ್ಕಿಂಗ್ ಸ್ಥಳದಿಂದ ಕಚೇರಿಯ ಕಡೆಗೆ ಓಡಲು ಪ್ರಯತ್ನಿಸಿದರೂ ಆರೋಪಿ ಆತನನ್ನು ಬೆನ್ನಟ್ಟಿ ಶಿರಚ್ಛೇದ ಮಾಡಿದ್ದಾನೆ ಎಂದು ವರದಿಗಳು ತಿಳಿಸಿವೆ.
ನಾಗಮಲ್ಲಯ್ಯ ಅವರ ಪತ್ನಿ ಮತ್ತು 18 ವರ್ಷದ ಪುತ್ರ ಕೋಬೋಸ್- ಮಾರ್ಟಿನೆಸ್ನನ್ನು ತಡೆಯಲು ಪ್ರಯತ್ನಿಸಿದರೂ, ಆತ ಕೋಪದ ಭರದಲ್ಲಿ ಅವರನ್ನು ತಳ್ಳಿ ನಾಗಮಲ್ಲಯ್ಯನನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಆರೋಪಿ ಮಾರ್ಟಿನೆಸ್ ಮಚ್ಚಿನಿಂದ ತಾನು ಕತ್ತರಿಸಿದ ಚಂದ್ರ ನಾಗಮಲ್ಲಯ್ಯನ ತಲೆಯನ್ನು ಎತ್ತಿಕೊಂಡು ಕಸದ ಬುಟ್ಟಿಯತ್ತ ಸಾಗುತ್ತಿರುವ ದೃಶ್ಯದ ವೀಡಿಯೊ ವೈರಲ್ ಆಗಿದೆ. ರಕ್ತದಲ್ಲಿ ಮುಳುಗಿದ ಮಚ್ಚನ್ನು ಹೊತ್ತುಕೊಂಡು ಕಸದ ಬುಟ್ಟಿಗೆ ಬಿಸಾಡಿ ಅಲ್ಲಿಂದ ಹೊರಡುತ್ತಿದ್ದಾಗ ಆತನನ್ನು ಪೊಲೀಸರು ಬಂಧಿಸಿದ್ದಾರೆ.
ಚಂದ್ರ ನಾಗಮಲ್ಲಯ್ಯ ಅವರ ದುರಂತ ಸಾವಿಗೆ ಭಾರತೀಯ ರಾಯಭಾರ ಕಚೇರಿ ಸಂತಾಪ ಸೂಚಿಸಿದ್ದು, ಕೆಲಸದ ಸ್ಥಳದಲ್ಲಿ ಅವರನ್ನು ಕ್ರೂರವಾಗಿ ಕೊಲ್ಲಲಾಗಿದೆ ಎಂದು ಹೇಳಿದೆ. ನಾವು ಚಂದ್ರ ಅವರ ಕುಟುಂಬದೊಂದಿಗೆ ಸಂಪರ್ಕದಲ್ಲಿದ್ದೇವೆ ಮತ್ತು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದ್ದೇವೆ. ಆರೋಪಿ ಡಲ್ಲಾಸ್ ಪೊಲೀಸರ ವಶದಲ್ಲಿದ್ದಾನೆ. ಈ ವಿಷಯದ ಬಗ್ಗೆ ನಾವು ನಿಗಾ ಇಡುತ್ತಿದ್ದೇವೆ ಎಂದು ರಾಯಭಾರ ಕಚೇರಿ X ನಲ್ಲಿ ಪೋಸ್ಟ್ ಮಾಡಿದೆ.
In a shocking incident, a dispute over the use of a washing machine led to the brutal killing of a Kannadiga man in the United States. The victim, Chandra Nagamallaiah (50), originally from Karnataka, was working as a manager at a guesthouse in Dallas, Texas, when he was attacked and beheaded by his colleague Yordanis Cobos-Martinez (37).
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm