ಬ್ರೇಕಿಂಗ್ ನ್ಯೂಸ್
14-09-25 07:31 pm HK News Desk ದೇಶ - ವಿದೇಶ
ಗುವಾಹಟಿ, ಸೆ.14 : ಅಸ್ಸಾಂ ರಾಜಧಾನಿ ಗುವಾಹಟಿಯಲ್ಲಿ ಭೂಕಂಪ ಸಂಭವಿಸಿದ್ದು, ಪಕ್ಕದ ಉತ್ತರ ಬಂಗಾಳ ಮತ್ತು ಭೂತಾನ್ ನಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ಭಾನುವಾರ ಸಂಜೆ 4.41ರ ಸುಮಾರಿಗೆ ಗುವಾಹತಿಯಲ್ಲಿ ಭೂಕಂಪದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 5.8ರ ತೀವ್ರತೆ ದಾಖಲಾಗಿದೆ. ಇದುವರೆಗೆ ಯಾವುದೇ ಜೀವಹಾನಿ ಹಾಗೂ ಆಸ್ತಿ ನಷ್ಟದ ವರದಿಯಾಗಿಲ್ಲ.
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗಲೇ ಭೂಕಂಪನದ ಅನುಭವ ಆಗಿದೆ. ಗುವಾಹಟಿ ಬಳಿಯ ಉದೈಗುರಿ ಎಂಬಲ್ಲಿ ಭೂಕಂಪದ ಕೇಂದ್ರ ಬಿಂದು ಇತ್ತು ಮತ್ತು 5 ಕಿಮೀ ಆಳದಲ್ಲಿತ್ತು ಎಂದು ಭೂವಿಜ್ಞಾನಿಗಳು ತಿಳಿಸಿದ್ದಾರೆ. ಯಾವುದೇ ದೊಡ್ಡ ಅನಾಹುತ ಆಗಿಲ್ಲ. ಪರಿಸ್ಥಿತಿಯ ಬಗ್ಗೆ ನಿಗಾ ಇರಿಸಿದ್ದೇವೆ ಎಂದು ಅಸ್ಸಾಂ ಸಿಎಂ ಹಿಮಾಂತ ಶರ್ಮಾ ತಿಳಿಸಿದ್ದಾರೆ.
ಅಸ್ಸಾಂ ಭೂಕಂಪ ತೀವ್ರತೆಯ ಪ್ರದೇಶವಾಗಿದ್ದು, ಹಿಮಾಲಯದ ತಪ್ಪಲು ಪ್ರದೇಶವಾಗಿರುವ ಕಾರಣ ಭೂಕಂಪದಂತ ಪ್ರಕೃತಿ ವಿಕೋಪಗಳು ಇಲ್ಲಿ ವರದಿಯಾಗುತ್ತಿರುತ್ತವೆ ಎಂದು ತಜ್ಞರು ಹೇಳುತ್ತಾರೆ. ಇದೇ ಸೆ.2ರಂದು ಅಸ್ಸಾಂ ರಾಜ್ಯದ ಸೋನಿತ್ ಪುರ್ ಜಿಲ್ಲೆಯಲ್ಲಿ 3.5 ತೀವ್ರತೆಯ ಭೂಕಂಪನ ಸಂಭವಿಸಿತ್ತು. ಪದೇ ಪದೇ ಲಘು ಕಂಪನ ಆಗುತ್ತಿರುವುದು ದೊಡ್ಡ ಘಟನೆಯ ಮುನ್ಸೂಚನೆಯೇ ಎನ್ನುವ ಆತಂಕ ಇದೆ. ಇತ್ತೀಚೆಗಷ್ಟೇ ಅಫ್ಘಾನಿಸ್ತಾನದಲ್ಲಿ ಭಾರೀ ಭೂಕಂಪ ಉಂಟಾಗಿ ಸಾವಿರಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದರು.
A 5.8 magnitude earthquake jolted Assam's Guwahati at 4:41 pm, with tremors felt as far as North Bengal and neighbouring Bhutan. The quake had a depth of 5 kilometers and its epicenter was in the town of Udalguri, according to India's National Center for Seismology. Terrified residents rushed outside their homes in Guwahati. No reports of injury or damage to property have been received so far.
05-03-26 09:40 pm
HK News Staffer
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm