ಬ್ರೇಕಿಂಗ್ ನ್ಯೂಸ್
14-09-25 10:49 pm HK News Desk ದೇಶ - ವಿದೇಶ
ಗುವಾಹಟಿ, ಸೆ.14 : ನಾನು ಶಿವನನ್ನು ಆರಾಧಿಸುವ ಭಕ್ತ. ನನ್ನ ಮೇಲೆ ಪ್ರಯೋಗಿಸುವ ನಿಂದನೆಗಳ ವಿಷವನ್ನು ನುಂಗಿ ಜೀರ್ಣಿಸಿಕೊಳ್ಳುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಅಸ್ಸಾಂನ ದರಂಗ್ನಲ್ಲಿ ಭಾನುವಾರ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ, ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ನಾನು ಶಿವಭಕ್ತ, ಎಲ್ಲಾ ವಿಷವನ್ನು ನಾನು ನುಂಗುತ್ತೇನೆ. ನನಗೆ ಎಷ್ಟೇ ನಿಂದನೆ ಮಾಡಿದರೂ ತಡೆದುಕೊಳ್ಳುತ್ತೇನೆ. ಆದರೆ ಬೇರೆಯವರಿಗೆ ಅವಮಾನವಾದರೆ, ಮೌನವಾಗಿರಲು ಸಾಧ್ಯವಿಲ್ಲ ಎಂದು ಆರ್ಜೆಡಿ -ಕಾಂಗ್ರೆಸ್ ಮೈತ್ರಿಕೂಟದ ಆರೋಪಕ್ಕೆ ತಿರುಗೇಟು ನೀಡಿದರು.

ಬಿಹಾರದಲ್ಲಿ ವಿಪಕ್ಷಗಳು ನಿಂದನೆಯ ಮಾತುಗಳಿಂದ ಟೀಕೆ ಮಾಡುತ್ತಿರುವ ಬಗ್ಗೆ ಮೋದಿ ಈ ರೀತಿ ತಿರುಗೇಟು ನೀಡಿದ್ದಾರೆ. ಇಡೀ ಕಾಂಗ್ರೆಸ್ ನನ್ನನ್ನು ಗುರಿಯಾಗಿಸಿ ದಾಳಿ ಮಾಡುತ್ತಿದೆ. ಆದರೆ ಜನರೇ ನನ್ನ ದೇವರು ; ನಾನು ನನ್ನ ನೋವನ್ನು ಅವರ ಮುಂದೆ ವ್ಯಕ್ತಪಡಿಸದಿದ್ದರೆ ಮತ್ತೆಲ್ಲಿ ಮಾಡಲಿ? ಜನರೇ ನನ್ನ ಯಜಮಾನರು, ಅವರೇ ನನ್ನ ರಿಮೋಟ್ ಕಂಟ್ರೋಲ್, ನನ್ನ ನೋವನ್ನು ಅವರಲ್ಲಿ ಹೇಳಿಕೊಳ್ಳದೆ ಬೇರೆ ಯಾರಲ್ಲಿ ಹೇಳಲಿ ಎಂದು ಕೇಳಿದರು.
ಪಾಕಿಸ್ತಾನಿ ಪ್ರೇರಿತ ಭಯೋತ್ಪಾದಕರನ್ನು ಕಾಂಗ್ರೆಸ್ ಬೆಂಬಲಿಸುತ್ತಿದೆ. ಕಾಂಗ್ರೆಸ್ ಆಡಳಿತದಲ್ಲಿ ಭಯೋತ್ಪಾದನೆ ನಡೆದಾಗ ಮೌನವಾಗಿರುತ್ತಿತ್ತು. ಆದರೆ ಈಗ ಭಯೋತ್ಪಾದಕರು ಕೆಣಕಿದರೆ ನಮ್ಮ ಭದ್ರತಾ ಪಡೆಗಳು ಆಪರೇಷನ್ ಸಿಂದೂರ್ ನಡೆಸುತ್ತವೆ. ಪಾಕಿಸ್ತಾನದ ಪ್ರತಿಯೊಂದು ಮೂಲೆಯಿಂದಲೂ ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತು ಹಾಕುತ್ತವೆ. ಇಷ್ಟಾದರೂ ಕಾಂಗ್ರೆಸ್ ನಾಯಕರು ಮಾತ್ರ ಪಾಕಿಸ್ತಾನದ ಸೇನೆಯ ಪರವಾಗಿ ನಿಲ್ಲುತ್ತಾರೆ, ಪಾಕಿಸ್ತಾನದ ಸುಳ್ಳುಗಳೇ ಕಾಂಗ್ರೆಸ್ ಅಜೆಂಡಾಗಳಾಗುತ್ತವೆ ಎಂದರು.
Prime Minister Narendra Modi, during a public address in Assam’s Darrang district on Sunday, launched a sharp counterattack on the opposition RJD-Congress alliance, asserting that he has the strength to endure their continuous criticism.
21-11-25 05:25 pm
HK News Desk
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
DK Suresh, CM Siddaramaiah : ಸಿಎಂ ಕುರ್ಚಿ ಕ್ಲೈ...
20-11-25 03:01 pm
ಆನೇಕಲ್ ನಲ್ಲಿ ಕಚಡಾ ಡಾಕ್ಟರ್ ; ಇನ್ಪೆಕ್ಟರ್ ಅಮಾನತಿ...
19-11-25 02:16 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
21-11-25 10:39 pm
Mangalore Correspondent
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
ಸುರತ್ಕಲ್- ನಂತೂರು- ಬಿಸಿ ರೋಡ್ ಹೆದ್ದಾರಿ ಎನ್ಎಚ...
21-11-25 09:55 pm
Snake Bite, Mangalore, Detection Kit: ಹಾವು ಕಚ...
21-11-25 08:45 pm
ಮಾನಸಿಕ ಖಿನ್ನತೆ ; ಶಿಕ್ಷಕಿ ತಾಯಿಯನ್ನು ಕಾಲೇಜು ಬಿಟ...
20-11-25 10:48 pm
21-11-25 11:07 pm
Bangalore Correspondent
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm
Bangalore ATM Van Robbery, Update: ಬೆಂಗಳೂರಿನ...
20-11-25 11:51 am