ಬ್ರೇಕಿಂಗ್ ನ್ಯೂಸ್
15-09-25 04:57 pm HK News Desk ದೇಶ - ವಿದೇಶ
ನವದೆಹಲಿ, ಸೆ.15 : ಕೇಂದ್ರ ಸರಕಾರ ಜಾರಿಗೆ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆಯಲ್ಲಿ ಕೆಲವು ಅಂಶಗಳಿಗೆ ತಡೆ ಹೇರಿ ಸುಪ್ರೀಂಕೋರ್ಟ್ ಮಧ್ಯಂತರ ತೀರ್ಪು ಪ್ರಕಟಿಸಿದೆ. ತಿದ್ದುಪಡಿ ಕಾಯ್ದೆಗೆ ತಡೆ ನೀಡಲು ನಿರಾಕರಿಸಿದ ನ್ಯಾಯಾಲಯ, ರಾಜ್ಯ ಮತ್ತು ಕೇಂದ್ರ ವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರ ಸದಸ್ಯರ ಸಂಖ್ಯೆ ಮೂರಕ್ಕಿಂತ ಹೆಚ್ಚಿರಬಾರದು ಎಂದು ನ್ಯಾಯಾಲಯ ಹೇಳಿದೆ.
ಅಲ್ಲದೆ ವಕ್ಫ್ ಮಂಡಳಿಯ ಸದಸ್ಯರಾಗಲು ಕನಿಷ್ಠ ಐದು ವರ್ಷ ಇಸ್ಲಾಂ ಧರ್ಮವನ್ನು ಅನುಸರಿಸಿರಬೇಕೆಂಬ ಷರತ್ತನ್ನು ನ್ಯಾಯಾಲಯ ತಡೆಹಿಡಿದಿದೆ. ಈ ನಿಟ್ಟಿನಲ್ಲಿ ಸರಿಯಾದ ನಿಯಮಗಳನ್ನು ರೂಪಿಸುವ ವರೆಗೆ ಈ ನಿಬಂಧನೆಯನ್ನು ಜಾರಿಗೊಳಿಸುವಂತಿಲ್ಲ ಎಂದು ಕೋರ್ಟ್ ಹೇಳಿದೆ. ಇದಲ್ಲದೆ, ಸೆಕ್ಷನ್ 3(74) ಗೆ ಸಂಬಂಧಿಸಿದ ಕಂದಾಯ ವಿಭಾಗದ ದಾಖಲೆಗಳ ಸಂಗ್ರಹಕ್ಕೂ ತಡೆಹಿಡಿಯಲಾಗಿದೆ.
ವಕ್ಫ್ ಕಾಯ್ದೆಯ ಸೆಕ್ಷನ್ 3 ಮತ್ತು 4 ಅನ್ನು ನ್ಯಾಯಾಲಯ ತಡೆ ಹೇರಿದ್ದು, ಆದರೆ ಸಂಪೂರ್ಣ ಕಾನೂನನ್ನು ನಿಷೇಧಿಸುವ ಹಕ್ಕು ನಮಗಿಲ್ಲ ಎಂದು ನ್ಯಾಯಾಲಯ ಹೇಳಿದೆ. ಆದರೆ ವಕ್ಫ್ ಮಂಡಳಿಯ ಸಿಇಒ ಆಗುವ ವ್ಯಕ್ತಿ ಮುಸ್ಲಿಂ ಸಮುದಾಯದ್ದೇ ಆಗಿರಬೇಕು ಎಂದು ನ್ಯಾಯಾಲಯ ಹೇಳಿದೆ. ವಕ್ಫ್ ಮಂಡಳಿಯ 11 ಸದಸ್ಯರಲ್ಲಿ ಮೂರಕ್ಕಿಂತ ಹೆಚ್ಚು ಮುಸ್ಲಿಮೇತರರು ಇರಬಾರದು ಎಂದೂ ನ್ಯಾಯಾಲಯ ಸ್ಪಷ್ಟಪಡಿಸಿದೆ.
ವಕ್ಫ್ ತಿದ್ದುಪಡಿ ಕಾಯ್ದೆ ಪ್ರಕಾರ ಒಬ್ಬ ವ್ಯಕ್ತಿಯು ವಕ್ಫ್ ರಚಿಸಲು ಕನಿಷ್ಠ 5 ವರ್ಷಗಳ ಕಾಲ ಇಸ್ಲಾಂ ಧರ್ಮದ ಅನುಸರಣೆ ಮಾಡಿರಬೇಕು. ಒಬ್ಬ ವ್ಯಕ್ತಿ ಇಸ್ಲಾಂ ಧರ್ಮದ ಅನುಯಾಯಿಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸಲು ರಾಜ್ಯ ಸರ್ಕಾರಗಳು ಸ್ಪಷ್ಟ ನಿಯಮಗಳನ್ನು ರೂಪಿಸುವ ವರೆಗೆ ಮೇಲಿನ ನಿಷೇಧ ಜಾರಿಯಲ್ಲಿರುತ್ತದೆ ಎಂದು ನ್ಯಾಯಾಲಯ ಹೇಳಿದೆ.
The Supreme Court has issued an interim order on the Waqf Amendment Act brought by the Central Government, refusing to strike down the law entirely but staying the implementation of certain provisions.
05-03-26 08:41 pm
HK News Staffer
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm