ಬ್ರೇಕಿಂಗ್ ನ್ಯೂಸ್
20-09-25 11:42 am HK News Desk ದೇಶ - ವಿದೇಶ
ನವದೆಹಲಿ, ಸೆ.20: ಪಾಕಿಸ್ತಾನಕ್ಕೆ ಹೋದರೆ ನನಗೆ ಮನೆಗೆ ಹೋದ ರೀತಿಯ ಅನುಭವ ಆಗುತ್ತದೆ ಎಂದು ಕಾಂಗ್ರೆಸ್ ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ಹೇಳಿದ್ದು ಮತ್ತೆ ವಿವಾದಕ್ಕೆ ಗುರಿಯಾಗಿದ್ದಾರೆ.
ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಅವರು, ''ಕೇಂದ್ರ ಸರಕಾರವು ವಿದೇಶಾಂಗ ನೀತಿಯಲ್ಲಿ ನೆರೆಹೊರೆಯ ರಾಷ್ಟ್ರಗಳ ಮೇಲೆ ಗಮನ ಕೇಂದ್ರೀಕರಿಸಬೇಕು. ನೆರೆಹೊರೆಯ ರಾಷ್ಟ್ರಗಳೊಂದಿಗೆ ನಾವು ನಿಜವಾಗಿಯೂ ಸಂಬಂಧವನ್ನು ಗಣನೀಯ ಪ್ರಮಾಣದಲ್ಲಿ ಸುಧಾರಿಸಬಹುದೇ ಎಂಬ ಬಗ್ಗೆ ಯೋಚಿಸಬೇಕು. ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳಕ್ಕೆ ಭೇಟಿ ನೀಡಿದ್ದೇನೆ. ಆ ರಾಷ್ಟ್ರಗಳಿಗೆ ಹೋದಾಗ ನನ್ನ ಮನೆಗೇ ಹೋದ ಅನುಭವವಾಗಿದೆ ಎಂದು ಹೇಳಿದ್ದಾರೆ.
'ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳಕ್ಕೆ ಭೇಟಿ ನೀಡಿದ ವೇಳೆ ನನಗೆ ವಿದೇಶದಲ್ಲಿದ್ದೇನೆ ಎಂದು ಅನಿಸುವುದಿಲ್ಲ. ಅಲ್ಲಿನ ಜನರು ನನ್ನಂತೆ ಕಾಣುವರು, ಅವರು ನನ್ನಂತೆ ಮಾತನಾಡುವರು, ಅವರು ನನ್ನಂತೆಯೇ ಹಾಡುಗಳನ್ನು ಇಷ್ಟಪಡುವರು, ನಾನು ಸೇವಿಸುವ ಆಹಾರಗಳನ್ನೇ ಅವರೂ ಸೇವಿಸುವರು. ನಾವು ಅವರೊಂದಿಗೆ ಶಾಂತಿ ಮತ್ತು ಸಾಮರಸ್ಯದಿಂದ ಬದುಕಲು ಕಲಿಯಬೇಕು ಎಂದು ಪಿತ್ರೋಡಾ ಹೇಳಿದ್ದಾರೆ. ನೆರೆಹೊರೆಯ ದೇಶಗಳಲ್ಲಿ ಹಿಂಸಾಚಾರ ಮತ್ತು ಭಯೋತ್ಪಾದನೆಯಂಥ ಸಮಸ್ಯೆಗಳ ನಡುವೆಯೂ ಭಾರತವು ಆ ರಾಷ್ಟ್ರಗಳ ಜತೆ ಸಂಬಂಧ ಸುಧಾರಣೆಗೆ ಮುಂದಾಗಬೇಕು ಎಂದು ಹೇಳುವ ಮೂಲಕ ಬಿಜೆಪಿ ನಾಯಕರಿಗೆ ಆಹಾರ ಒದಗಿಸಿದ್ದಾರೆ.
ಕಾಂಗ್ರೆಸಿನ ಪಾಕ್ ಪ್ರೀತಿಗೆ ನಿದರ್ಶನ
ಸ್ಯಾಮ್ ಪಿತ್ರೋಡಾ ಹೇಳಿಕೆಯು ಕಾಂಗ್ರೆಸ್ ಪಾಕಿಸ್ತಾನ ಬಗ್ಗೆ ಅತಿಯಾದ ಪ್ರೀತಿ ಹೊಂದಿರುವುದನ್ನು ತೋರಿಸುತ್ತದೆ. ಇವರ ಹೇಳಿಕೆ ನೋಡಿದರೆ, 2008ರ ಮುಂಬೈ ದಾಳಿ ನಂತರವೂ ಅಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರವು ನೆರೆಯ ದೇಶದ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿರುವ ಬಗ್ಗೆ ಕಾರಣ ತಿಳಿಯುತ್ತದೆ, ಇದರಲ್ಲಿ ಅಚ್ಚರಿ ಎನಿಸುತ್ತಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ ಕುಟುಕಿದ್ದಾರೆ. "ಕಾಂಗ್ರೆಸ್ ಮೊದಲಿನಿಂದಲೂ ರಾಷ್ಟ್ರೀಯ ಹಿತಾಸಕ್ತಿಯನ್ನು ಬದಿಗೊತ್ತಿ ಪಾಕಿಸ್ತಾನಕ್ಕೆ ಅನುಕೂಲ ಮಾಡಿಕೊಟ್ಟಿದೆ. ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್ ಮೂಲಕ ಲಷ್ಕರ್ ಉಗ್ರ ಹಫೀಜ್ ಸಯೀದ್ ಜತೆಗೂ ಸಂಪರ್ಕ ಸಾಧಿಸಲಾಗಿತ್ತು. 26/11 ದಾಳಿ, ಪುಲ್ವಾಮಾ, ಪಹಲ್ಗಾಮ್ ದಾಳಿಯಲ್ಲಿ ಕಾಂಗ್ರೆಸ್ ನಾಯಕರು ಪಾಕಿಸ್ತಾನ ಪರ ಮಾತನಾಡಿದ್ದಾರೆ. ಅವರು ಪಾಕಿಸ್ತಾನವನ್ನು ಪ್ರೀತಿಸುತ್ತಿದ್ದು ಐಎನ್ಸಿ ಎಂದರೆ ಇಸ್ಲಾಮಾಬಾದ್ ನ್ಯಾಷನಲ್ ಕಾಂಗ್ರೆಸ್ ಎಂದು ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಟೀಕಿಸಿದ್ದಾರೆ.
Congress’ Overseas Unit Chairman Sam Pitroda has stirred controversy yet again with his latest remark, stating that visiting Pakistan feels like "going home." The comment has drawn sharp criticism from the BJP, which accused the Congress of harboring undue affection for Pakistan.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
27-06-26 11:46 am
HK News Staffer
Mangalore, Police, criminial escapes: ಪಾಂಡೇಶ್...
27-06-26 10:54 am
Mumbai Train Murder, Mangalore: ಮುಂಬೈ ಲೋಕಲ್ ಟ...
26-06-26 07:35 pm
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm