ಬ್ರೇಕಿಂಗ್ ನ್ಯೂಸ್
23-09-25 11:05 am HK News Desk ದೇಶ - ವಿದೇಶ
ಕೋಲ್ಕತ್ತಾ, ಸೆ.23 : ಸೋಮವಾರ ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ಕೋಲ್ಕತ್ತಾದ ಹಲವು ಕಡೆ ನೀರು ನಿಂತು ಪ್ರವಾಹ ಪರಿಸ್ಥಿತಿ ತಲೆದೋರಿದ್ದು ಐದು ಜನ ಮೃತಪಟ್ಟಿದ್ದಾರೆ. ಕೋಲ್ಕತ್ತಾದ ಮಧ್ಯ ಹಾಗೂ ದಕ್ಷಿಣ ಭಾಗಗಳಾದ ಬೆನಿಯಾಪುಕುರ್, ಕಾಳಿಕಾಪುರ, ನೇತಾಜಿ ನಗರ, ಗರಿಯಾಹತ್ ಮತ್ತು ಇಕ್ಬಾಲ್ಪುರದಲ್ಲಿ ನಡೆದಿರುವ ಮಳೆ ಸಂಬಂಧಿತ ಪ್ರತ್ಯೇಕ ಘಟನೆಗಳಲ್ಲಿ ಸಾವುಗಳು ಸಂಭವಿಸಿವೆ.
ಭಾರಿ ಮಳೆಯಿಂದ ರಸ್ತೆಗಳು ಜಲಾವೃತಗೊಂಡಿದ್ದು ವಾಹನ ಸಂಚಾರಕ್ಕೂ ಅಡ್ಡಿಯಾಗಿದೆ. ರೈಲು ಮತ್ತು ಮೆಟ್ರೋ ಸೇವೆಗಳಿಗೂ ತೊಂದರೆಯಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಮನೆಗಳಿಗೆ ನುಗ್ಗಿ ಅಪಾರ ಆಸ್ತಿಪಾಸ್ತಿಗೆ ಹಾನಿಯಾಗಿದೆ. ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಷನ್ನ ಮಾಹಿತಿಯ ಪ್ರಕಾರ, ಗರಿಯಾ ಕಾಮದಹರಿಯಲ್ಲಿ ಕೆಲವೇ ಗಂಟೆಗಳಲ್ಲಿ 332 ಮಿ.ಮೀ. ಮಳೆಯಾಗಿದ., ಜೋಧ್ಪುರ ಪಾರ್ಕ್ನಲ್ಲಿ 285 ಮಿ.ಮೀ., ಕಾಳಿಘಾಟ್ನಲ್ಲಿ 280 ಮಿ.ಮೀ., ಟಾಪ್ಸಿಯಾದಲ್ಲಿ 275 ಮಿ.ಮೀ. ಮತ್ತು ಬ್ಯಾಲಿಗಂಗೆಯಲ್ಲಿ 264 ಮಿ.ಮೀ. ಮಳೆಯಾಗಿದೆ.




ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶದ ಪರಿಣಾಮವಾಗಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಸರಾ ಮಹೋತ್ಸವ, ದುರ್ಗಾಪೂಜೆಯ ಸಂಭ್ರಮಕ್ಕೆ ಕೆಲವು ದಿನಗಳ ಮೊದಲು ಕೋಲ್ಕತ್ತಾದಲ್ಲಿ ಭಾರೀ ಮಳೆಯಾಗಿದೆ. ದುರ್ಗಾಪೂಜೆಯ ಸಂದರ್ಭ ಅಪಾರ ಜನರನ್ನು ಆಕರ್ಷಿಸುವ ಜಾಯ್ ನಗರದ ಪೂಜಾ ಪೆಂಡಾಲ್ಗಳು ಬಹುತೇಕ ಸಿದ್ಧವಾಗಿದ್ದು, ಮಳೆಯಿಂದ ಅದನ್ನು ರಕ್ಷಿಸಿಕೊಳ್ಳುವುದು ಸವಾಲಾಗಿ ಪರಿಣಮಿಸಿದೆ.
Torrential rains that lashed Kolkata through Monday night have left several parts of the city waterlogged, triggering flood-like conditions and claiming five lives. The deaths were reported in separate rain-related incidents across central and south Kolkata localities including Beniapukur, Kalikapur, Netaji Nagar, Gariahat, and Ekbalpur.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm