ಬ್ರೇಕಿಂಗ್ ನ್ಯೂಸ್
24-09-25 01:07 pm HK News Desk ದೇಶ - ವಿದೇಶ
ಹ್ಯೂಸ್ಟನ್, ಸೆ.24 : ಅಮೆರಿಕದ ಟೆಕ್ಸಾಸ್ ರಾಜ್ಯದ ಶುಗರ್ ಲ್ಯಾಂಡ್ ಪಟ್ಟಣದಲ್ಲಿ ನಿರ್ಮಿಸಲಾಗಿರುವ 90 ಅಡಿ ಎತ್ತರದ ಕಂಚಿನ ಹನುಮಂತನ ಪ್ರತಿಮೆ ಕುರಿತು ಅಮೆರಿಕದಲ್ಲಿ ವಿವಾದ ಭುಗಿಲೆದ್ದಿದೆ. ಅಮೆರಿಕ ಕ್ರಿಶ್ಚಿಯನ್ ರಾಷ್ಟ್ರವಾಗಿದ್ದು ಟೆಕ್ಸಾಸ್ ರಾಜ್ಯದಲ್ಲಿ ಹಿಂದೂ ದೇವರಾದ ಹನುಮಂತನ ನಕಲಿ ಪ್ರತಿಮ ನಿರ್ಮಿಸಲಾಗಿದೆ. ನಾವಿದಕ್ಕೆ ಏಕೆ ಅನುಮತಿಸಬೇಕು? ಎಂದು ಸ್ಥಳೀಯ ರಿಪಬ್ಲಿಕನ್ ನಾಯಕ ಅಲೆಕ್ಸಾಂಡರ್ ಡಂಕನ್ ವಿಡಿಯೊ ಸಮೇತ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದು, ಭಾರಿ ವಿವಾದಕ್ಕೆ ಕಾರಣವಾಗಿದೆ.
ಇನ್ನೊಂದು ಪೋಸ್ಟ್ನಲ್ಲಿ ಅವರು ಬೈಬಲ್ ಉಲ್ಲೇಖಿಸಿ, ''ನನ್ನ ನಂಬಿಕೆಯ ದೇವರು ಹೊರತುಪಡಿಸಿ ನಿಮಗೆ ಬೇರೆ ದೇವರು ಇರಬಾರದು. ನೀವು ನಿಮಗಾಗಿ ಯಾವುದೇ ರೀತಿಯ ವಿಗ್ರಹವನ್ನು ಸ್ವರ್ಗದಲ್ಲಿ, ಭೂಮಿಯಲ್ಲಿ ಅಥವಾ ಸಮುದ್ರದಲ್ಲಿ ಮಾಡಿಟ್ಟುಕೊಳ್ಳಬಾರದು," ಎಂದು ಬರೆದು ಉದ್ಧಟತನ ತೋರಿದ್ದಾರೆ.
ಡಂಕನ್ ಅವರ ಈ ಮಾತಿಗೆ ಅಮೆರಿಕದಲ್ಲಿರುವ ಹಿಂದೂ ಸಂಘಟನೆಗಳಿಂದ ಭಾರಿ ವಿರೋಧ ವ್ಯಕ್ತವಾಗಿದೆ. ಹಿಂದೂ ಅಮೆರಿಕನ್ ಫೌಂಡೇಷನ್, ಇದೊಂದು ಹಿಂದೂ ವಿರೋಧಿ ಮತ್ತು ಪ್ರಚೋದನಕಾರಿ ಹೇಳಿಕೆಯಾಗಿದೆ. ಟೆಕ್ಸಾಸ್ ಆಡಳಿತ, ನಿಮ್ಮ ಸ್ವಂತ ಮಾರ್ಗಸೂಚಿಗಳನ್ನು ಉಲ್ಲಂಘಿಸುವ ಮತ್ತು ಹಿಂದೂ ವಿರೋಧಿ ದ್ವೇಷ ಹರಡುತ್ತಿರುವ ನಿಮ್ಮ ಪಕ್ಷದ ಸೆನೆಟ್ ಅಭ್ಯರ್ಥಿ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಡೊನಾಲ್ಡ್ ಟ್ರಂಪ್ ಅವರನ್ನು 'ಎಕ್ಸ್'ನಲ್ಲಿ ಆಗ್ರಹಿಸಿದೆ. ಈ ಹೇಳಿಕೆಯು ಧಾರ್ಮಿಕ ತಾರತಮ್ಯವನ್ನು ಉತ್ತೇಜಿಸುತ್ತದೆ ಮತ್ತು ಅಮೆರಿಕ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದೂ ಎಚ್ ಎಎಫ್ ಹೇಳಿದೆ.
'ಎಕ್ಸ್' ಬಳಕೆದಾರರೊಬ್ಬರು, "ನೀವು ಹಿಂದೂ ಅಲ್ಲದ ಕಾರಣಕ್ಕೆ ಹನುಮನನ್ನು ಸುಳ್ಳು ದೇವ ಎಂದು ಹೇಳಲು ಸಾಧ್ಯವಿಲ್ಲ. ಯೇಸು ಭೂಮಿಗೆ ಬರುವ 2 ಸಾವಿರ ವರ್ಷಗಳ ಮೊದಲೇ ವೇದಗಳನ್ನು ರಚಿಸಲಾಗಿದೆ ಎಂದು ಕುಟುಕಿದ್ದಾರೆ. ಟೆಕ್ಸಾಸ್ನ ಅಷ್ಟಲಕ್ಷ್ಮಿ ದೇವಸ್ಥಾನದಲ್ಲಿ ಭಗವಾನ್ ಹನುಮಂತನ 90 ಅಡಿ ಕಂಚಿನ ಪ್ರತಿಮೆ ಇದೆ. ಈ ಪ್ರತಿಮೆಯನ್ನು 2024ರಲ್ಲಿ ಅನಾವರಣಗೊಳಿಸಲಾಗಿದ್ದು, 'ಸ್ಟಾಚ್ಯೂ ಆಫ್ ಯೂನಿಯನ್' ಎಂದು ಕರೆಯಲಾಗುತ್ತಿದೆ. ಆಗಲೂ ಇದರ ವಿರುದ್ಧ ಟ್ರಂಪ್ ಬೆಂಬಲಿಗರಿಂದ ಅಭಿಯಾನ ನಡೆದಿತ್ತು.
A 90-foot-tall bronze statue of Hindu deity Hanuman in Sugar Land, Texas, has triggered controversy after a local Republican leader questioned why such a monument was allowed in what he described as a “Christian nation.”
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm