ಬ್ರೇಕಿಂಗ್ ನ್ಯೂಸ್
29-09-25 10:52 pm HK News Desk ದೇಶ - ವಿದೇಶ
ಲಕ್ನೋ, ಸೆ.29 : ಪರಿಶಿಷ್ಟ ಜಾತಿಯ ಜನರನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸಲು 'ಪವಾಡ ಚಿಕಿತ್ಸೆ' ಮೂಲಕ ಆಮಿಷ ಒಡ್ಡುತ್ತಿದ್ದ ಆರೋಪಿಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಬಕ್ತೌರಿ ಖೇಡಾ ನಿವಾಸಿ ಮಲ್ಖಾನ್ (43) ಬಂಧಿತ ಆರೋಪಿ. ಎಫ್ಐಆರ್ ದಾಖಲಾದ ನಂತರ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸ್ ತಂಡ ಪತ್ತೆಹಚ್ಚಿ ಬಂಧಿಸಿದೆ. ಆರೋಪಿ ಮಲ್ಖಾನ್ ತನ್ನ ಕೃಷಿ ಭೂಮಿಯಲ್ಲಿ ಹಾಲ್ ತರಹದ ಕಟ್ಟಡ ನಿರ್ಮಿಸಿಕೊಂಡಿದ್ದು ಅದನ್ನು ತಾತ್ಕಾಲಿಕ ಚರ್ಚ್ ಆಗಿ ಬಳಸುತ್ತಿದ್ದ ಎಂದು ಆರೋಪಿಸಲಾಗಿದೆ.
ಪ್ರತಿ ಭಾನುವಾರ ಮತ್ತು ಗುರುವಾರ, ಅವನು ಪರಿಶಿಷ್ಟ ಜಾತಿಯ ಮಹಿಳೆಯರು ಮತ್ತು ಮಕ್ಕಳನ್ನು ಒಟ್ಟುಗೂಡಿಸಿ, ಅನಾರೋಗ್ಯಕ್ಕೆ ಚಿಕಿತ್ಸೆ ನೀಡುವುದಾಗಿ ಹೇಳಿ ಪ್ರಾರ್ಥನೆಗೆ ಬರುವಂತೆ ಹೇಳುತ್ತಿದ್ದನು. ಈ ಕೂಟಗಳಲ್ಲಿ, ಭಾಗವಹಿಸುವವರನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸಲು ಯತ್ನಿಸುತ್ತಿದ್ದರು. ಪೊಲೀಸರು ಹೇಳುವಂತೆ, ಮಲ್ಖಾನ್ ಕೂಡ ಕ್ರಿಶ್ಚಿಯನ್ ಧರ್ಮವನ್ನು ಅಳವಡಿಸಿಕೊಂಡಿದ್ದು, ತನ್ನ ಮಕ್ಕಳು ಮತ್ತು ಸಂಬಂಧಿಕರ ಹೆಸರನ್ನು ಕ್ರಿಶ್ಚಿಯನ್ ಹೆಸರುಗಳಿಗೆ ಬದಲಾಯಿಸಿದ್ದಾನೆ. ಪರಿಶಿಷ್ಟ ಜಾತಿಯ ಸದಸ್ಯರನ್ನು ಸಂಪರ್ಕಿಸಲು 'ಯೇಸು ಚಂಗೈ ಸಭಾ' ಎಂಬ ವಾಟ್ಸಾಪ್ ಗ್ರೂಪ್ ನಡೆಸುತ್ತಿದ್ದ.
ಬಂಧನದ ವೇಳೆ ಬೈಬಲ್ ಬೋಧನೆಗಳ ಕುರಿತಾದ ಎರಡು ಪುಸ್ತಕಗಳು ಮತ್ತು ಇತರ ಪ್ರಚಾರ ಸಾಮಗ್ರಿಗಳನ್ನು ವಶಪಡಿಸಲಾಗಿದೆ. ಉತ್ತರ ಪ್ರದೇಶ ಕಾನೂನುಬಾಹಿರ ಮತಾಂತರ ನಿಷೇಧ ಕಾಯ್ದೆ 2021ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಮತಾಂತರ ಜಾಲದ ಮಾಸ್ಟರ್ ಮೈಂಡ್ ಎನ್ನಲಾದ ಆರೋಪಿಯನ್ನು ಬಂಧಿಸಿದ ಪೊಲೀಸ್ ತಂಡಕ್ಕೆ ಇಲಾಖೆಯಿಂದ 25,000 ರೂ. ನಗದು ಬಹುಮಾನ ನೀಡಲಾಗಿದೆ.
Uttar Pradesh police have arrested a man accused of luring Dalit communities into Christianity by promising “miracle cures.” The accused, identified as 43-year-old Malkhan of Baktauri Kheda, allegedly converted his farmland shed into a makeshift church where he gathered women and children for prayer sessions twice a week. During these meetings, he reportedly attempted to persuade attendees to convert. Police recovered religious texts and promotional material during the arrest.
05-03-26 08:41 pm
HK News Staffer
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
05-03-26 05:02 pm
HK News Staffer
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm