ಬ್ರೇಕಿಂಗ್ ನ್ಯೂಸ್
30-09-25 04:03 pm HK News Desk ದೇಶ - ವಿದೇಶ
ಇಸ್ಲಮಾಬಾದ್, ಸೆ 30 : ಪಾಕಿಸ್ತಾನದ ಕ್ವೆಟ್ಟಾದಲ್ಲಿ ಮಂಗಳವಾರ ಮಧ್ಯಾಹ್ನ ಭಾರಿ ಬಾಂಬ್ ಸ್ಫೋಟ ಸಂಭವಿಸಿದ್ದು, ಸ್ಥಳದಲ್ಲೇ 10 ಮಂದಿ ಮೃತಪಟ್ಟಿದ್ದು, 32ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಜನನಿಬಿಡ ಪ್ರದೇಶದಲ್ಲಿ ಬಾಂಬ್ ಸಹಿತ ವಾಹನ ತರಲಾಗಿದ್ದು ಕಟ್ಟಡದ ಬಳಿ ಒಳರಸ್ತೆಗೆ ನುಗ್ಗುತ್ತಲೇ ಸ್ಫೋಟಿಸಲಾಗಿದೆ. ಬ್ಲಾಸ್ಟ್ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಕ್ವೆಟ್ಟಾದ ಜರ್ಘುನ್ ರಸ್ತೆಯಲ್ಲಿರುವ ಎಫ್ಸಿ (ಫ್ರಂಟಿಯರ್ ಕಾರ್ಪ್ಸ್ - ಸೇನಾ ತುಕಡಿ) ಪ್ರಧಾನ ಕಚೇರಿಯ ಬಳಿಯಲ್ಲಿ ಬಾಂಬ್ ಸ್ಫೋಟಗೊಂಡಿದೆ. ಸ್ಪೋಟದ ಬಳಿಕ ಅದೇ ಪ್ರದೇಶದಲ್ಲಿ ಗುಂಡಿನ ದಾಳಿ ಸದ್ದು ಕೇಳಿಬಂದಿದೆ. ಸ್ಥಳಕ್ಕೆ ರಕ್ಷಣಾ ತಂಡ ಮತ್ತು ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.


ಸ್ಫೋಟಕ ತುಂಬಿದ ವಾಹನವು ಮಾಡೆಲ್ ಟೌನ್ನಿಂದ ಎಫ್ಸಿ ಪ್ರಧಾನ ಕಚೇರಿಯ ಬಳಿಯ ರಸ್ತೆಯ ಕಡೆಗೆ ತಿರುಗಿದಾಗಲೇ ಸ್ಫೋಟ ಸಂಭವಿಸಿದೆ. ಕ್ವೆಟ್ಟಾ ನಗರದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಸ್ಫೋಟದ ಶಬ್ದವು ಎಷ್ಟು ಪ್ರಬಲವಾಗಿತ್ತೆಂದರೆ, ಅದು ಮೈಲುಗಳಷ್ಟು ದೂರದಲ್ಲಿ ಕೇಳಿಬಂತು, ಇದು ಪ್ರದೇಶವನ್ನು ಮಾತ್ರವಲ್ಲದೆ ಇಡೀ ನಗರವನ್ನು ಭಯಭೀತಗೊಳಿಸಿತು ಎಂದು ಸ್ಥಳೀಯರು ಹೇಳಿದ್ದಾರೆ. ಸದ್ಯಕ್ಕೆ ಸ್ಫೋಟದ ಹೊಣೆಯನ್ನು ಯಾರೂ ಹೊತ್ತುಕೊಂಡಿಲ್ಲ. ಬಲೂಚಿಸ್ತಾನ್ ಬಂಡುಕೋರ ಗುಂಪು ಈ ದಾಳಿ ನಡೆಸಿರುವ ಸಾಧ್ಯತೆ ಇದೆ. ಬಲೂಚಿಸ್ತಾನ್ ಸ್ವತಂತ್ರ ಆಗಬೇಕೆಂದು ಈ ಭಾಗದಲ್ಲಿ ಬಲೂಚಿ ಲಿಬರೇಶನ್ ಆರ್ಮಿ ಪರ ಹೋರಾಟಗಾರರು ದಾಳಿ ನಡೆಸುತ್ತಿದ್ದಾರೆ.
A powerful suicide bombing rocked Quetta’s Zarghoon Road near the Frontier Corps headquarters on Tuesday afternoon, killing at least 10 people and injuring more than 32. CCTV footage of the blast has gone viral on social media. Police said an explosives-laden vehicle detonated as it turned toward the FC office, followed by gunfire in the area.
22-08-26 11:10 am
HK News Staffer
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm