ಬ್ರೇಕಿಂಗ್ ನ್ಯೂಸ್
01-10-25 09:44 pm HK News Desk ದೇಶ - ವಿದೇಶ
ನವದೆಹಲಿ, ಅ.1 : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಮಾನೋತ್ಸವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಮಾತೆಯ ಚಿತ್ರವಿರುವ ರೂ. 100 ಮುಖಬೆಲೆಯ ನಾಣ್ಯವನ್ನು ಮತ್ತು ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದ್ದಾರೆ.
ದೆಹಲಿಯ ಡಾ. ಅಂಬೇಡ್ಕರ್ ಇಂಟರ್ನ್ಯಾಷನಲ್ ಸೆಂಟರ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು. ಇದೇ ವೇಳೆ ಮಾತನಾಡಿದ ಅವರು, 'ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ ಮಾತೆಯ ಚಿತ್ರವನ್ನು ನಾಣ್ಯದ ಮೇಲೆ ಮುದ್ರಿಸಲಾಗಿದೆ. ಇದು ಬಹಳ ಹೆಮ್ಮೆ ಮತ್ತು ಐತಿಹಾಸಿಕ ಮಹತ್ವವನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ.
ರೂ. 100 ಬೆಲೆಯ ನಾಣ್ಯದ ಒಂದು ಬದಿಯಲ್ಲಿ ರಾಷ್ಟ್ರೀಯ ಲಾಂಛನವನ್ನು ಮತ್ತು ಇನ್ನೊಂದು ಬದಿಯಲ್ಲಿ 'ವರದ ಮುದ್ರೆ'ಯಲ್ಲಿ ಸಿಂಹದ ಮೇಲೆ ಕುಳಿತಿರುವ ಭಾರತ ಮಾತೆಯ ಚಿತ್ರವಿದೆ ಮತ್ತು ಸ್ವಯಂಸೇವಕರು ಆಕೆಯ ಮುಂದೆ ಸಮರ್ಪಣಾ ಭಾವದಿಂದ ನಮಸ್ಕರಿಸುವ ಚಿತ್ರ ಮುದ್ರಿಸಲಾಗಿದೆ. ಅದರೊಂದಿಗೆ ಹಿಂದಿ ಹಾಗೂ ಇಂಗ್ಲೀಷ್ನಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ 100 ವರ್ಷ ಎಂದು ಬರೆಯಲಾಗಿದೆ.
ನಾಣ್ಯದ ಮೇಲೆ ಆರ್ಎಸ್ಎಸ್ ಧ್ಯೇಯ ವಾಕ್ಯವನ್ನು ಸಹ ಮುದ್ರಿಸಲಾಗಿದ್ದು, 'ಎಲ್ಲವೂ ರಾಷ್ಟ್ರಕ್ಕೆ ಸಮರ್ಪಿತವಾಗಿದೆ. ಎಲ್ಲವೂ ರಾಷ್ಟ್ರದ್ದು, ಯಾವುದೂ ನನ್ನದಲ್ಲ..' ಎಂಬುದು ಇದರ ಅರ್ಥವಾಗಿದೆ.
1963ರ ಗಣರಾಜ್ಯೋತ್ಸವದ ಮೆರವಣಿಗೆಯಲ್ಲಿ ಆರ್ಎಸ್ಎಸ್ ಸ್ವಯಂಸೇವಕರು ಭಾಗವಹಿಸಿದ್ದನ್ನು ಅಂಚೆ ಚೀಟಿಯಲ್ಲಿ ಚಿತ್ರಿಸಲಾಗಿದೆ. ಇದು ಸಂಘದ ಐತಿಹಾಸಿಕ ಕೊಡುಗೆಗಳನ್ನು ಒತ್ತಿ ಹೇಳುತ್ತದೆ. ಜತೆಗೆ, ಭಾರತ ಮಾತೆಗೆ, ಆರ್ಎಸ್ಎಸ್ನ ಶತಮಾನಗಳಷ್ಟು ಹಳೆಯ ಸೇವೆ ಮತ್ತು ಸಮರ್ಪಣಾ ಪ್ರಯಾಣಕ್ಕೆ ಹೆಮ್ಮೆಯ ಗೌರವ ಎಂದು ಮೋದಿ ಹೇಳಿದ್ದಾರೆ.
ಸಮಾರಂಭದಲ್ಲಿ ಆರ್ಎಸ್ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಭಾಗವಹಿಸಿದ್ದರು.
Prime Minister Narendra Modi released a ₹100 commemorative coin and a special postal stamp marking the centenary of the Rashtriya Swayamsevak Sangh (RSS) at Dr. Ambedkar International Centre in New Delhi.
02-10-25 03:50 pm
Bangalore Correspondent
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
02-10-25 03:45 pm
HK News Desk
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
02-10-25 11:05 pm
Mangalore Correspondent
Illegal Slaughterhouse in Mangalore: ಬೆನ್ನು ಬ...
02-10-25 10:43 pm
D.K. Shivakumar, Mangaluru Dasara: ದೇವರೇ ನನ್ನ...
02-10-25 11:43 am
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm