ಬ್ರೇಕಿಂಗ್ ನ್ಯೂಸ್
04-10-25 04:45 pm HK Staffer ದೇಶ - ವಿದೇಶ
ನವದೆಹಲಿ, ಅ.4: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಸುಮಾರು 11 ಮಕ್ಕಳು ಸಾವನಪ್ಪಿದ ಘಟನೆ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಎರಡು ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡದಂತೆ ಆದೇಶ ಹೊರಡಿಸಿದೆ.
ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಯಲ್ಲಿ 9 ಮಕ್ಕಳು ಮತ್ತು ರಾಜಸ್ಥಾನದ ಭರತ್ ಹಾಗೂ ಸಿಕರ್ ಜಿಲ್ಲೆಯಲ್ಲಿ 2 ಮಕ್ಕಳು ಸೇರಿ ಒಟ್ಟು 11 ಕಂದಮ್ಮಗಳು ಸಾವನ್ನಪ್ಪಿದ್ದಾರೆ. ಈ ಘಟನೆಗಳ ಬೆನ್ನಲ್ಲೇ ರಾಜಸ್ಥಾನ ಸರ್ಕಾರವು ಕೇಸನ್ಸ್ ಫಾರ್ಮಾ ಕಂಪನಿಯ 19 ಔಷಧಿಗಳ ಮಾರಾಟ ಮತ್ತು ವಿತರಣೆಯನ್ನು ಸ್ಥಗಿತಗೊಳಿಸಿದೆ. ಅಲ್ಲದೆ, ರಾಜಸ್ಥಾನದ ಔಷಧ ನಿಯಂತ್ರಕರಾದ ರಾಜಾರಾಮ್ ಶರ್ಮಾ ಅವರನ್ನು ಅಮಾನತುಗೊಳಿಸಿದೆ.
ಕೋಲ್ಡ್ರಿಫ್ ಮತ್ತು ನೆಕ್ಸ್ಟ್ರೋ-ಡಿಎಸ್ ಎಂಬ ಎರಡು ಕೆಮ್ಮಿನ ಸಿರಪ್ಗಳು ಮಕ್ಕಳ ಸಾವಿಗೆ ಕಾರಣವಾಗಿವೆ ಎಂದು ಆರೋಪಿಸಲಾಗಿದೆ. ಈ ಸಿರಪ್ಗಳನ್ನು ಸೇವಿಸಿದ ಮಕ್ಕಳಿಗೆ ಮೂತ್ರ ವಿಸರ್ಜನೆ ನಿಂತು, ದೇಹದಲ್ಲಿ ಊತ ಕಾಣಿಸಿಕೊಂಡು, ಕಿಡ್ನಿ ವೈಫಲ್ಯಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಎರಡು ವರ್ಷದೊಳಗಿನ ಮಕ್ಕಳಿಗೆ ಕೆಮ್ಮು ಸಿರಪ್ ನೀಡದಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಐದು ವರ್ಷದೊಳಗಿನ ಮಕ್ಕಳಿಗೆ ಕೆಮ್ಮು ಮತ್ತು ಶೀತಕ್ಕೆ ಸಾಮಾನ್ಯವಾಗಿ ಸಿರಪ್ಗಳ ಅಗತ್ಯ ಇರುವುದಿಲ್ಲ. ತೀರಾ ಅಗತ್ಯವಿದ್ದರೆ ಮಾತ್ರ ವೈದ್ಯರ ಸಲಹೆಯಂತೆ ಸೂಕ್ತ ಪ್ರಮಾಣದಲ್ಲಿ ನೀಡಬೇಕು ಎಂದು ನಿರ್ದೇಶನ ನೀಡಲಾಗಿದೆ.
The Madhya Pradesh government on Saturday (October 4, 2025) banned the sale of Coldrif syrup following the death of nine children due to suspected kidney infection in Chhindwara district since September 7.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm