ಬ್ರೇಕಿಂಗ್ ನ್ಯೂಸ್
04-10-25 04:45 pm HK Staffer ದೇಶ - ವಿದೇಶ
ನವದೆಹಲಿ, ಅ.4: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್ ಸೇವಿಸಿ ಸುಮಾರು 11 ಮಕ್ಕಳು ಸಾವನಪ್ಪಿದ ಘಟನೆ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಎರಡು ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡದಂತೆ ಆದೇಶ ಹೊರಡಿಸಿದೆ.
ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಯಲ್ಲಿ 9 ಮಕ್ಕಳು ಮತ್ತು ರಾಜಸ್ಥಾನದ ಭರತ್ ಹಾಗೂ ಸಿಕರ್ ಜಿಲ್ಲೆಯಲ್ಲಿ 2 ಮಕ್ಕಳು ಸೇರಿ ಒಟ್ಟು 11 ಕಂದಮ್ಮಗಳು ಸಾವನ್ನಪ್ಪಿದ್ದಾರೆ. ಈ ಘಟನೆಗಳ ಬೆನ್ನಲ್ಲೇ ರಾಜಸ್ಥಾನ ಸರ್ಕಾರವು ಕೇಸನ್ಸ್ ಫಾರ್ಮಾ ಕಂಪನಿಯ 19 ಔಷಧಿಗಳ ಮಾರಾಟ ಮತ್ತು ವಿತರಣೆಯನ್ನು ಸ್ಥಗಿತಗೊಳಿಸಿದೆ. ಅಲ್ಲದೆ, ರಾಜಸ್ಥಾನದ ಔಷಧ ನಿಯಂತ್ರಕರಾದ ರಾಜಾರಾಮ್ ಶರ್ಮಾ ಅವರನ್ನು ಅಮಾನತುಗೊಳಿಸಿದೆ.
ಕೋಲ್ಡ್ರಿಫ್ ಮತ್ತು ನೆಕ್ಸ್ಟ್ರೋ-ಡಿಎಸ್ ಎಂಬ ಎರಡು ಕೆಮ್ಮಿನ ಸಿರಪ್ಗಳು ಮಕ್ಕಳ ಸಾವಿಗೆ ಕಾರಣವಾಗಿವೆ ಎಂದು ಆರೋಪಿಸಲಾಗಿದೆ. ಈ ಸಿರಪ್ಗಳನ್ನು ಸೇವಿಸಿದ ಮಕ್ಕಳಿಗೆ ಮೂತ್ರ ವಿಸರ್ಜನೆ ನಿಂತು, ದೇಹದಲ್ಲಿ ಊತ ಕಾಣಿಸಿಕೊಂಡು, ಕಿಡ್ನಿ ವೈಫಲ್ಯಕ್ಕೆ ಒಳಗಾಗಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಎರಡು ವರ್ಷದೊಳಗಿನ ಮಕ್ಕಳಿಗೆ ಕೆಮ್ಮು ಸಿರಪ್ ನೀಡದಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಐದು ವರ್ಷದೊಳಗಿನ ಮಕ್ಕಳಿಗೆ ಕೆಮ್ಮು ಮತ್ತು ಶೀತಕ್ಕೆ ಸಾಮಾನ್ಯವಾಗಿ ಸಿರಪ್ಗಳ ಅಗತ್ಯ ಇರುವುದಿಲ್ಲ. ತೀರಾ ಅಗತ್ಯವಿದ್ದರೆ ಮಾತ್ರ ವೈದ್ಯರ ಸಲಹೆಯಂತೆ ಸೂಕ್ತ ಪ್ರಮಾಣದಲ್ಲಿ ನೀಡಬೇಕು ಎಂದು ನಿರ್ದೇಶನ ನೀಡಲಾಗಿದೆ.
The Madhya Pradesh government on Saturday (October 4, 2025) banned the sale of Coldrif syrup following the death of nine children due to suspected kidney infection in Chhindwara district since September 7.
21-08-26 03:42 pm
HK News Staffer
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
21-08-26 09:54 pm
HK News Staffer
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
21-08-26 12:20 pm
HK News Staffer
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm